Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗೃಹಸಾಲ ಒದಗಿಸಲು ಬ್ಯಾಂಕ್ ಮೇಳ
(ರಾಜ್ಯ ) ಜಿಲ್ಲೆ

ಗೃಹಸಾಲ ಒದಗಿಸಲು ಬ್ಯಾಂಕ್ ಮೇಳ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ: ಪುರಸಭೆಯಿಂದ ಇಂಗಳೇಶ್ವರ ರಸ್ತೆಯಲ್ಲಿ ನಿರ್ಮಾಣ ಮಾಡಿರುವ ಜಿ ಪ್ಲಸ್-೧ ಮಾದರಿ ಮನೆಗಳನ್ನು ಫಲಾನುಭವಿಗಳಿಗೆ ವಿತರಿಸುವ ಕಾರ್ಯ ಶೀಘ್ರದಲ್ಲಿ ನಡೆಯಲಿದೆ. ಫಲಾನುಭವಿಗಳಿಗೆ ವಿವಿಧ ಬ್ಯಾಂಕುಗಳು ಗೃಹಸಾಲ ಒದಗಿಸಲು ಮುಂದೆ ಬಂದಿವೆ. ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಪುರಸಭೆ ಮುಖ್ಯಾಧಿಕಾರಿ ಎಚ್.ಎಸ್.ಚಿತ್ತರಗಿ ಹೇಳಿದರು.
ಪಟ್ಟಣದ ಪುರಸಭೆ ಸಭಾಭವನದಲ್ಲಿ ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತ, ಜಿಲ್ಲಾಡಳಿತ, ಪುರಸಭೆ ಸಹಯೋಗದಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ(ನಗರ) ಜಿ ಪ್ಲಸ್-೧ ಹಾಗೂ ರಾಜ್ಯ ಪುರಸ್ಕ್ರತ ವಸತಿ ಯೋಜನೆಗಳ ಸಮನ್ವತೆಯೊಂದಿಗೆ ವಸತಿ ಯೋಜನೆಗಳ ಅನುಷ್ಠಾನದಡಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಫಲಾನುಭವಿಗಳಿಗೆ ಗೃಹಸಾಲ ಒದಗಿಸಲು ಬ್ಯಾಂಕುಗಳೊಂದಿಗೆ ಮೇಳದಲ್ಲಿ ಮಾತನಾಡಿದ ಅವರು, ಈಗಾಗಲೇ ಪುರಸಭೆಯಿಂದ ಜಿ ಪ್ಲಸ್-೧ ಮಾದರಿಯಲ್ಲಿ ೫೦೦ ಮನೆಗಳ ನಿರ್ಮಾಣವಾಗಿವೆ. ಈ ಮನೆಗಳ ಫಲಾನುಭವಿಗಳಿಗೆ ತಾತ್ಕಾಲಿಕ ಹಕ್ಕು ಪತ್ರ ಈಗಾಗಲೇ ವಿತರಿಸಲಾಗಿದೆ. ಮುಂಬರುವ ದಿನಗಳಲ್ಲಿ ಖಾಯಂ ಹಕ್ಕು ಪತ್ರ ವಿತರಣೆ ಕಾರ್ಯಕ್ರಮ ನಡೆಯಲಿದೆ. ೫೦೦ ಫಲಾನುಭವಿಗಳಲ್ಲಿ ಈಗಾಗಲೇ ೧೪೭ ಫಲಾನುಭವಿಗಳು ಸಾಲ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಿದ್ದು ಇದರಲ್ಲಿ ೧೪೩ ಫಲಾನುಭವಿಗಳು ಸಾಲ ಪಡೆದುಕೊಂಡಿದ್ದಾರೆ. ಉಳಿದ ೩೫೭ ಫಲಾನುಭವಿಗಳು ಸಾಲ ಪಡೆಯಬೇಕಿದೆ. ವಿವಿಧ ಬ್ಯಾಂಕುಗಳು ಸರಳೀಕರಣ ಸುಲಭವಾಗಿ ಸಾಲವನ್ನು ಕೊಡುತ್ತಿವೆ. ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದರು.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ರೂ. ೧.೩೦ ಲಕ್ಷ, ಸಾಮಾನ್ಯ ವರ್ಗದವರಿಗೆ ರೂ. ೧.೯೦ ಲಕ್ಷ ಸಾಲವನ್ನು ಫಲಾನುಭವಿಗಳು ಪಡೆದುಕೊಳ್ಳಬೇಕಿದೆ. ಪುರಸಭೆಯು ಮುಂಬರುವ ದಿನಗಳಲ್ಲಿ ಪುರಸಭೆಯ ವಿವಿಧ ಯೋಜನೆಗಳಲ್ಲಿ ಫಲಾನುಭವಿಗಳ ಸಾಲ ಮರುಪಾವತಿಗೆ ಸಹಾಯ ಮಾಡಲಿದೆ. ಜಿ ಪ್ಲಸ್-೧ ಮಾದರಿ ಮನೆಗಳಲ್ಲಿ ಈಗಾಗಲೇ ೩೫೦ ಮನಗಳು ವಾಸಕ್ಕೆ ಯೋಗ್ಯವಾಗಿವೆ. ಉಳಿದ ೧೫೦ ಮನೆಗಳನ್ನು ಕೆಲ ದಿನಗಳಲ್ಲಿ ವಾಸಕ್ಕೆ ಯೋಗ್ಯವಾಗುವಂತೆ ಮಾಡಲಾಗುವುದು ಎಂದರು.
ಜಿ ಪ್ಲಸ್-೧ ಮನೆಗಳಿಗೆ ಸಂಖ್ಯೆಗಳನ್ನು ಹಾಕಲಾಗುವುದು. ಈ ಮನೆಗಳಿಗೆ ನೀರಿನ ಸೌಲಭ್ಯಕ್ಕಾಗಿ, ವಿದ್ಯುತ್ ಸೌಲಭ್ಯಕ್ಕಾಗಿ ಟೆಂಡರ್ ಮಾಡಲಾಗುವುದು. ಯಾವ ಫಲಾನುಭವಿಗಳು ಗೃಹ ಸಾಲ ಪಡೆದುಕೊಂಡಿಲ್ಲವೋ ಅವರು ಶೀಘ್ರವೇ ಬ್ಯಾಂಕ್ಗಳನ್ನು ಸಂಪರ್ಕಿಸಿ ಗೃಹಸಾಲಕ್ಕೆ ಅರ್ಜಿ ಸಲ್ಲಿಸಿ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕೆಂದರು.
ಸಭೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ವಸತಿ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಅಮರನಾಥ ಪುಠಾಣಿ, ವಸತಿ ಯೋಜನೆಯ ಸಹಾಯಕ ಸಂಘಟಕ ಬಸವರಾಜ ಗೋಲಾಯಿ, ವಿಷಯ ನಿರ್ವಾಹಕ ಶಿವಕುಮಾರ, ಪುರಸಭೆ ವ್ಯವಸ್ಥಾಪಕ ವಿರೇಶ ಹಟ್ಟಿ, ವಿಷಯ ನಿರ್ವಾಹಕ ರಾಜು ರಾಠೋಡ, ವಿವಿಧ ಬ್ಯಾಂಕಿನ ಸಿಬ್ಬಂದಿ, ಪುರಸಭೆ ಉಳಿದ ಸಿಬ್ಬಂದಿ ಇತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.