ಬಸವನಬಾಗೇವಾಡಿ: ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷದಿಂದ ಸ್ಪರ್ಧೆ ಮಾಡುವ ಅಭ್ಯರ್ಥಿಯ ಗೆಲುವಿಗೆ ರೂಪರೇಷೆಗಳನ್ನು ರೂಪಿಸುವ ಕುರಿತಂತೆ ಮಾ. ೭ ರಂದು ಮುದ್ದೇಬಿಹಾಳ ರಸ್ತೆಯಲ್ಲಿರುವ ಪಂಚಾಚಾರ್ಯ ಜನಕಲ್ಯಾಣ ಮಂಟಪದಲ್ಲಿ ಸಂಜೆ 5 ಗಂಟೆಗೆ ಬಸವನಬಾಗೇವಾಡಿ ಮತಕ್ಷೇತ್ರದ ಕಾಂಗ್ರೆಸ್ ಪಕ್ಷದ ಮುಖಂಡರ, ಜನಪ್ರತಿನಿಧಿಗಳ, ಕಾರ್ಯಕರ್ತರ ಪೂರ್ವಭಾವಿ ಸಭೆಯನ್ನು ಸಚಿವ ಶಿವಾನಂದ ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಕರೆಯಲಾಗಿದೆ ಎಂದು ಕಾಂಗ್ರೆಸ್ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಈರಣ್ಣ ಪಟ್ಟಣಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಹಾರಿವಾಳ ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಸವನಬಾಗೇವಾಡಿ ಮತಕ್ಷೇತ್ರದಲ್ಲಿ ಸಚಿವ ಶಿವಾನಂದ ಪಾಟೀಲರು ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಕಾಂಗ್ರೆಸ್ ಪಕ್ಷ ಆಡಳಿತ ಬಂದ ಮೇಲೆ ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಜಾರಿಯಾಗುವ ಮೂಲಕ ಜನರಿಗೆ ಸಾಕಷ್ಟು ಸದುಪಯೋಗವಾಗುತ್ತಿದೆ. ಅನೇಕ ಅಭಿವೃದ್ಧಿ ಕಾರ್ಯಗಳನ್ನು ಸರ್ಕಾರ ಹಮ್ಮಿಕೊಳ್ಳುತ್ತಿದೆ. ನಮ್ಮ ಸರ್ಕಾರದ ಸಾಧನೆಗಳನ್ನು ಜನರ ಮುಂದಿಟ್ಟುಕೊಂಡು ಲೋಕಸಭೆ ಚುನಾವಣೆಯಲ್ಲಿ ಪಕ್ಷದಿಂದ ಸ್ಪರ್ಧೆ ಮಾಡುವ ಅಭ್ಯರ್ಥಿಯ ಗೆಲುವಿಗೆ ನಾವೆಲ್ಲರೂ ಒಂದಾಗಿ ಶ್ರಮಿಸಬೇಕಿದೆ. ಸಚಿವ ಶಿವಾನಂದ ಪಾಟೀಲರು ಸೇರಿದಂತೆ ಅನೇಕ ಹಿರಿಯ ಮುಖಂಡರು ಮಾ.7 ರಂದು ನಡೆಯುವ ಸಭೆಗೆ ಆಗಮಿಸುತ್ತಾರೆ. ಅವರೆಲ್ಲರ ಮಾರ್ಗದರ್ಶನದಲ್ಲಿ ಪಕ್ಷದ ಕಾರ್ಯಕರ್ತರು ಅಭ್ಯರ್ಥಿಯ ಗೆಲುವಿಗೆ ಬೇಕಾದ ರೂಪರೇಷೆಗಳನ್ನು ಮುಕ್ತವಾಗಿ ಪೂರ್ವಭಾವಿ ಸಭೆಯಲ್ಲಿ ಚರ್ಚಿಸಬಹುದು. ಮತಕ್ಷೇತ್ರದ 83 ಗ್ರಾಮದ ಕಾಂಗ್ರೆಸ್ ಪಕ್ಷದ ಗ್ರಾಮ ಪಂಚಾಯತ, ಪುರಸಭೆ, ಪಟ್ಟಣ ಪಂಚಾಯತ ಸದಸ್ಯರು, ಮಾಜಿ ಸದಸ್ಯರು, ಮುಖಂಡರು, ಪಕ್ಷದ ವಿವಿಧ ಪದಾಧಿಕಾರಿಗಳು, ಸಮಸ್ತ ಕಾರ್ಯಕರ್ತರು ಆಗಮಿಸಿ ಸಭೆಯನ್ನು ಯಶಸ್ವಿಗೊಳಿಸಬೇಕೆಂದರು.
ಕಾಂಗ್ರೆಸ್ ಪಕ್ಷದ ನಗರ ಘಟಕದ ಅಧ್ಯಕ್ಷ ಸುರೇಶಗೌಡ ಪಾಟೀಲ, ಯುವ ಮುಖಂಡ ಶಂಕರಗೌಡ ಬಿರಾದಾರ ಮಾತನಾಡಿದರು.
ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ಸದಸ್ಯ ಶೇಖರ ಗೊಳಸಂಗಿ, ಕೊಲ್ಹಾರ ಬ್ಲಾಕ್ ಅಧ್ಯಕ್ಷ ರಫೀಕ ಪಕಾಲಿ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರವಿ ರಾಠೋಡ, ಪುರಸಭೆ ಸದಸ್ಯರಾದ ಜಗದೇವಿ ಗುಂಡಳ್ಳಿ, ನಜೀರ ಗಣಿ, ಪ್ರವೀಣ ಪೂಜಾರಿ, ಅಬ್ದುಲ್ ಚೌಧರಿ, ಮುಖಂಡರಾದ ಮಲ್ಲಿಕಾರ್ಜುನ ನಾಯಕ, ಸಂಗಮೇಶ ಓಲೇಕಾರ, ಪರಶುರಾಮ ಜಮಖಂಡಿ, ಸಂಗನಬಸು ಪೂಜಾರಿ, ರಮಜಾನ ಹೆಬ್ಬಾಳ, ಕಮಲಸಾಬ ಕೊರಬು, ಸಂಗಮೇಶ ಹಾರಿವಾಳ, ಬಂದೇನವಾಜ ಡೋಲಚಿ, ಕಾಶೀನಾಥ ರಾಠೋಡ, ಸಂಕನಗೌಡ ಪಾಟೀಲ, ಶರಣಪ್ಪ ಬೆಲ್ಲದ ಇತರರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

