ದೇವರಹಿಪ್ಪರಗಿ: ಕಾಲುವೆಯಲ್ಲಿ ಕಾಲು ಜಾರಿ ತಾಯಿ, ಮಗು ಸಾವನ್ನಪ್ಪಿದ ಘಟನೆ ಪಡಗಾನೂರ ಗ್ರಾಮದಲ್ಲಿ ಜರುಗಿದೆ.
ತಾಲ್ಲೂಕಿನ ಪಡಗಾನೂರ ಗ್ರಾಮದಲ್ಲಿ ಗುರುವಾರ ಈ ಘಟನೆ ಸಂಭವಿಸಿದೆ. ಭಾರತಿ ಶ್ರೀಶೈಲ ಸಾತಿಹಾಳ(೨೮) ಎಂಬ ಮಹಿಳೆ ಬಟ್ಟೆ ತೊಳೆಯಲು ತನ್ನ ಮಗ ಸಂಪತ್(೧೦) ನೊಂದಿಗೆ ಮುಳವಾಡ ಮುಖ್ಯ ಕಾಲುವೆಗೆ ತೆರಳಿದ್ದು, ಈ ಸಮಯದಲ್ಲಿ ಮಗ ಸಂಪತ್ ಕಾಲು ಜಾರಿ ಕಾಲುವೆಗೆ ಬಿದ್ದಿದ್ದನ್ನು ಗಮನಿಸಿದ ತಾಯಿ ಅವನನ್ನು ರಕ್ಷಿಸಲು ತಾನು ಕಾಲುವೆಗೆ ಇಳಿದ ಪರಿಣಾಮ ಈಜು ಬಾರದೇ ಇಬ್ಬರು ಮೃತಪಟ್ಟಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ದೇವರಹಿಪ್ಪರಗಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
