ವಿಜಯಪುರ: ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ. ಪಾಟೀಲ ಅವರು ಮಾರ್ಚ್ ೯ ಹಾಗೂ ೧೦ ರಂದು ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಮಾ.೯ರಂದು ಬೆಳಿಗ್ಗೆ ೧೧ ಗಂಟೆಗೆ ಸೋಲಾಪುರ ರಸ್ತೆಯಲ್ಲಿ ಒಣದ್ರಾಕ್ಷಿ ಸಂಸ್ಕರಣಾ ಘಟಕದ ಉದ್ಘಾಟನೆ ನೆರವೇರಿಸಿ ಮಧ್ಯಾಹ್ನ ೧೨ ಗಂಟೆಗೆ ಬಬಲೇಶ್ವರದಲ್ಲಿ ಬಬಲೇಶ್ವರ ತಾಲೂಕು ಮಿನಿ ವಿಧಾನಸೌಧ ಉದ್ಘಾಟನೆ ಹಾಗೂ ಗ್ಯಾರಂಟಿ ಫಲಾನುಭವಿಗಳ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ ೩ಗಂಟೆಗೆ ಬಬಲೇಶ್ವರದಿಂದ ವಿಜಯಪುರಕ್ಕೆ ಆಗಮಿಸಲಿದ್ದಾರೆ. ಅಂದು ವಿಜಯಪುರದಲ್ಲಿ ವಾಸ್ತವ್ಯ ಮಾಡಲಿದ್ದಾರೆ.
ಮಾ.೧೦ ರಂದು ಬೆಳಿಗ್ಗೆ ೯-೩೦ಕ್ಕೆ ಬಿ.ಎಲ್.ಡಿ.ಇ. ಸಂಸ್ಥೆಯ ಬಿ.ಎಂ.ಪಾಟೀಲ ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳು ಆಯೋಜಿಸಿರುವ ವೈದ್ಯಕೀಯ ವಿಷಯಗಳ ರಂಗೋಲಿ ವೀಕ್ಷಣೆ ಮಾಡಿ, ಬೆಳಿಗ್ಗೆ ೧೦-೩೦ಕ್ಕೆ ೭೭೦ ಲಿಂಗ ದೇವಾಲಯ ಆವರಣದಲ್ಲಿರುವ ೭೭೦ ಅಮರ ಗಣಾಧೀಶ್ವರ ಸ್ಮಾರಕ ಲಿಂಗ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ. ನಂತರ ಬೆಳಿಗ್ಗೆ ೧೧-೩೦ಕ್ಕೆ ಜಿಲ್ಲಾ ಕೇಂದ್ರ ಕಾರಾಗೃಹದ ಹತ್ತಿರ, ನೂತನ ಎನ್.ಸಿ.ಸಿ. ಕಟ್ಟಡದ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಸಂಜೆ ೪-೧೫ಕ್ಕೆ ವಿಜಯಪುರದಿಂದ ಬೆಳಗಾವಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Subscribe to Updates
Get the latest creative news from FooBar about art, design and business.
Related Posts
Add A Comment
