Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಜಯಪುರ ಜಿಲ್ಲೆ ಅಭಿವೃದ್ದಿಗೆ ವಿವಿಧ ಕೈಗಾರಿಕೆಗಳ ಸ್ಥಾಪನೆ
(ರಾಜ್ಯ ) ಜಿಲ್ಲೆ

ವಿಜಯಪುರ ಜಿಲ್ಲೆ ಅಭಿವೃದ್ದಿಗೆ ವಿವಿಧ ಕೈಗಾರಿಕೆಗಳ ಸ್ಥಾಪನೆ

By Updated:No Comments3 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಬಲೇಶ್ವರ ತಾಲೂಕಾ ಆಡಳಿತ ನೂತನ ಕಟ್ಟಡ ಉದ್ಘಾಟನೆ | ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ. ಪಾಟೀಲ ಭರವಸೆ

ವಿಜಯಪುರ: ಬಬಲೇಶ್ವರ ಪಟ್ಟಣದ ಅಡವಿಸಂಗಾಪುರ ರಸ್ತೆಯಲ್ಲಿ ಲೋಕೋಪಯೋಗಿ ಇಲಾಖೆಯಿಂದ ಅಂದಾಜು ರೂ.೧೦ ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ತಾಲೂಕು ಆಡಳಿತ ಸೌಧ (ಮಿನಿ ವಿಧಾನಸೌಧ) ನೂತನ ಕಟ್ಟಡ, ಕಟ್ಟಡವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ. ಪಾಟೀಲ ಅವರು ಉದ್ಘಾಟಿಸಿದರು.
ಶನಿವಾರ ಬಬಲೇಶ್ವರದಲ್ಲಿ ಹಮ್ಮಿಕೊಂಡ ನೂತನ ತಾಲೂಕಾಡಳಿತ ಕಟ್ಟಡ ಉದ್ಘಾಟನೆ ಹಾಗೂ ಸರ್ಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಸಚಿವರು, ಈ ಕಟ್ಟಡದ ನೆಲಮಹಡಿಯಲ್ಲಿ ತಹಸೀಲ್ದಾರ ಕಚೇರಿ, ಕೋರ್ಟ್ ಹಾಲ್, ತಹಸೀಲ್ದಾರ ಗ್ರೇಡ್-೧ ಮತ್ತು ಗ್ರೇಡ್-೨, ಸಬ್ ರಜಿಸ್ಟಾರ್ ಕಚೇರಿ, ಸಬ್ ಟ್ರೆಜರಿ ಕಚೇರಿ, ಸ್ಟ್ರಾಂಗ್ ರೂಂ, ರಜಿಸ್ಟಾರ್ ಕಚೇರಿಗಳನ್ನು ಹೊಂದಿವೆ. ಮೊದಲನೇ ಮಹಡಿಯಲ್ಲಿ ಭೂಮಾಪನಾ ಇಲಾಖೆ ಉಪನಿರ್ದೇಶಕ ಕಚೇರಿ, ಭೂ ದಾಖಲೆ ಕೊಠಡಿ, ವಿಡಿಯೋ ಸಂವಾದ ಸಭಾಂಗಣ, ಕೆಸ್ವಾನ್, ಎರಡನೇ ಮಹಡಿಯಲ್ಲಿ ಸ್ಟೇರ್‌ಕೇಸ್ ಮುಖ್ಯ ಕೋಣೆ ಮತ್ತು ಲಿಫ್ಟ್ ಅಳವಡಿಸಿದ್ದು, ಒಂದೇ ಸ್ಥಳದಲ್ಲಿ ವಿವಿಧ ಸರ್ಕಾರಿ ಕಚೇರಿಗಳ ಸ್ಥಾಪನೆಯಿಂದ ಸಾರ್ವಜನಿಕರಿಗೆ ವಿವಿಧ ಸರ್ಕಾರಿ ಸೇವೆಗಳನ್ನು ಪಡೆಯಲು ಅನುಕೂಲವಾಗಲಿದ್ದು, ಕಚೇರಿಗಳ ಅಲೆದಾಟ ತಪ್ಪುವುದಲ್ಲದೇ ಸಮಯದ ಉಳಿತಾಯ ಸಹ ಆಗಲಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.
ಸರಕಾರದ ಐದು ಗ್ಯಾರಂಟಿ ಯೋಜನೆಯಡಿ ಬಬಲೇಶ್ವರ-ತಿಕೋಟಾ ತಾಲೂಕುಗಳಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ೬೧,೩೩೩ ಸಾವಿರ, ಗೃಹ ಜ್ಯೋತಿ ಯೋಜನೆಯಡಿ ೪೨,೨೧೩ ಸಾವಿರ, ಅನ್ನಭಾಗ್ಯ ಯೋಜನೆಯ ಸುಮಾರು ೫೯,೨೩೨ ಸಾವಿರ ಶಕ್ತಿ ಯೋಜನೆಯಡಿ ೫೭,೩೦,೬೦೦ ಟಿಕೆಟ್‌ಗಳಾಗಿದ್ದು, ಯುವನಿಧಿ ಯೋಜನೆಯಡಿ ೭೭೩ ಫಲಾನುಭವಿಗಳು ಲಾಭ ಪಡೆದುಕೊಂಡಿದ್ದಾರೆ. ಮುಖ್ಯಮಂತ್ರಿ ಸಿದ್ಧರಾಮಯ್ಯನವರ ನೇತೃತ್ವದ ನಮ್ಮ ಸರ್ಕಾರ ಚುನಾವಣೆಗೆ ಪೂರ್ವ ಘೊಷಿಸಿದಂತೆ ಎಲ್ಲ ಗ್ಯಾರಂಟಿಗಳನ್ನು ನೀಡುವ ಮೂಲಕ ನುಡಿದಂತೆ ನಡೆಯುತ್ತಿದ್ದೇವೆ. ಸರ್ಕಾರ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳಾದ ಶಕ್ತಿ, ಗೃಹಜ್ಯೋತಿ, ಗೃಹಲಕ್ಷ್ಮಿ ಅನ್ನಭಾಗ್ಯ ಹಾಗೂ ಯುವ ನಿಧಿ ಯೋಜನೆಯಡಿ ಎಲ್ಲ ವರ್ಗದ ಜನರಿಗೆ ಅನುಕೂಲ ಕಲ್ಪಿಸಲಾಗಿದೆ ಎಂದು ಅವರು ಹೇಳಿದರು.
ಕಳೆದ ಬರಗಾಲ ಪರಿಸ್ಥಿತಿಯಲ್ಲಿ ಜಿಲ್ಲೆಯಲ್ಲಿ ೭೧೧ ಟ್ಯಾಂಕರ್ ಮೂಲಕ ನೀರು ಒದಗಿಸಲಾಗಿತ್ತು. ಆದರೆ ಕಳೆದ ಸಲಕ್ಕಿಂತ ಭೀಕರ ಬರಗಾಲ ಜಿಲ್ಲೆಯಲ್ಲಿವಿದ್ದರೂ ಸಹ ನೀರಾವರಿ ಯೋಜನೆಗಳಿಂದb ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗಿಲ್ಲ. ೩೬೦೦ ಕೋಟಿ ರೂ. ತಿಕೋಟಾ ತಾಲೂಕಿನ ನೀರಾವರಿಗೆ ವೆಚ್ಚ ಮಾಡಲಾಗಿದೆ. ಜಿಲ್ಲೆಯಾದ್ಯಂತ ಕೇವಲ ೩೮ ಟ್ಯಾಂಕರ್‌ಗಳ ಮೂಲಕ ಮಾತ್ರ ನೀರು ಪೂರೈಸಲಾಗುತ್ತಿದೆ. ತಿಡಗುಂದಿ, ಚಡಚಣ, ಹೊರ್ತಿ, ಇಂಗಳೇಶ್ವರ, ಗುಂದವಾಣ, ಇಂಚಗೇರಿ, ಜಿಗಜೇವಣಗಿ ಸೇರಿದಂತೆ ೧೬ ಕೆರೆ ತುಂಬಿಸಿ ಜಿಲ್ಲೆಯ ಕುಡಿಯುವ ನೀರಿಗೆ ಶಾಶ್ವತ ಪರಿಹಾರ ಒದಗಿಸಲಾಗುವುದು ಎಂದು ಅವರು ಹೇಳಿದರು.
ಜಿಲ್ಲೆಯ ಸರ್ವಾಂಗೀಣ ಅಭಿವೃದ್ದಿಗಾಗಿ ವಿವಿಧ ಕೈಗಾರಿಕೆಗಳ ಸ್ಥಾಪನೆ, ಆಹಾರ ಸಂಸ್ಕೃರಣ ಘಟಕಗಳ ಸ್ಥಾಪನೆ ಸೇರಿದಂತೆ ವಿವಿಧ ಘಟಕಗಳ ನಿರ್ಮಾಣ ಮಾಡಿ, ಜಿಲ್ಲೆಯ ಜನರು ಸ್ವಾವಲಂಬಿ ಬದುಕು ರೂಪಿಸಿಕೊಳ್ಳುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಬೆಳೆಯಲಾದ ವಿವಿಧ ಬೆಳೆಗಳಿಗೆ ಯೋಗ್ಯ ಬೆಲೆ ಉತ್ತಮ ಮಾರುಕಟ್ಟೆ ವ್ಯವಸ್ಥೆಗೆ ಕ್ರಮ ವಹಿಸಲಾಗುತ್ತಿದೆ. ಸಣ್ಣ ವ್ಯಾಪಾರಸ್ಥರಿಗೆ ಅನುಕೂಲ ಕಲ್ಪಿಸಲು ಸಾಲ-ಸೌಲಭ್ಯಕ್ಕಾಗಿ ಮೈಕ್ರೋ ಬ್ಯಾಂಕ್ ವ್ಯವಸ್ಥೆ ತರುವ ಚಿಂತನೆ ನಡೆಸಲಾಗುತ್ತಿದೆ ಎಂದು ಹೇಳಿದರು.
ಸಿಎಸ್‌ಐಅರ್ ಅನುದಾನದಡಿ ಶೇ.೯೦ ರಷ್ಟು ಅನುದಾನವನ್ನು ಶಿಕ್ಷಣ ಗುಣಮಟ್ಟ ಸುಧಾರಣೆ, ಶಾಲಾ ಕಟ್ಟಡಗಳ ದುರಸ್ತಿ, ಸುಸಜ್ಜಿತ ಗ್ರಂಥಾಲಯಗಳ ನಿರ್ಮಾಣ, ಸ್ಮಾರ್ಟ್ ಕ್ಲಾಸ್‌ಗಳ ಆರಂಭಕ್ಕೆ ಬಳಸಲಾಗುವುದು. ಅದರಂತೆ ಜಿಲ್ಲೆಯ ಮಮದಾಪುರ ಬಾಬಾನಗರದಲ್ಲಿ ಅರಣ್ಯ ಪ್ರದೇಶಾಭಿವೃದ್ದಿಗೆ ಕ್ರಮ ವಹಿಸಲಾಗುತ್ತಿದೆ ಎಂದು ಹೇಳಿದರು.
ಈ ಭಾಗದ ನೀರಾವರಿ ಯೋಜನೆ, ವಿದ್ಯುತ್‌ಗೆ ಆದ್ಯತೆ ನೀಡಲಾಗುತ್ತಿದ್ದು, ಬಬಲೇಶ್ವರ-ತಿಕೋಟಾ ತಾಲೂಕಿಗೆ ಅನುಮೋದನೆಯಾಗಿರುವ ೨೨೦ಕೆವ್ಹಿ ಸ್ಟೇಶನ್ ನಿರ್ಮಾಣಕ್ಕೆ ತಲಾ ೧೫೦ ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ. ಇದಲ್ಲದೇ ಅನುಮೋದನೆಗೆ ಬಾಕಿ ಇರುವ ಹೆಬ್ಬಾಳಟ್ಟಿ, ಸಾರವಾಡ, ತಾಜಪುರ ಪ್ರಸ್ತಾವನೆ ಸಲ್ಲಿಸಿದ್ದು, ಅನುಮೋದನೆ ಪಡೆದು ಪೂರ್ಣಗೊಳಿಸಲಾಗುವುದು. ಮಮದಾಪುರ ಶಿರಬೂರ, ಬಬಲೇಶ್ವರ, ಕಂಬಾಗಿ, ದೇವರಗೆಣ್ಣೂರ, ಬೆಳ್ಳುಬ್ಬಿ, ತಿಕೋಟಾ, ಹೊನವಾಡ, ಟಕ್ಕಳಕಿ, ತೊರವಿ, ಕನಮಡಿ, ನಿಡೋಣಿ ೧೧೦ ಕೆವ್ಹಿ ವಿದ್ಯುತ್ ಸ್ಟೇಶನ್ ನಿರ್ಮಾಣಕ್ಕಾಗಿ ಪ್ರತಿ ಸ್ಟೇಶನ್‌ಗೆ ೧೫ ಕೋಟಿ ರೂ. ವೆಚ್ಚ ಮಾಡಲಾಗುತ್ತಿದ್ದು, ಅದರಂತೆ ಗ್ರಾಮೀಣ ರಸ್ತೆ ಅಭಿವೃದ್ದಿಗಾಗಿ ೨೦ ಕೋಟಿ ರೂ. ಒದಗಿಸಲಾಗಿದೆ ಎಂದು ಹೇಳಿದರು.
ಜಿಲ್ಲಾಧಿಕಾರಿ ಟಿ.ಭೂಬಾಲನ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಜಿಲ್ಲೆಯಲ್ಲಿ ೮ ಹೊಸ ತಾಲೂಕುಗಳ ರಚನೆಯಾಗಿದ್ದು, ಈ ಪೈಕಿ ತಿಕೋಟಾ-ಬಬಲೇಶ್ವರ ತಾಲೂಕಿನಲ್ಲಿ ಆಡಳಿತ ಸೌಧ ಕಟ್ಟಡ ನಿರ್ಮಾಣಗೊಂಡು ಕಾರ್ಯಾರಂಭ ಮಾಡಲಾಗಿದೆ. ಈ ಭಾಗದ ಜನರಿಗೆ ಸರ್ಕಾರದ ವಿವಿಧ ಸರ್ಕಾರಿ ಸೇವೆಗಳನ್ನು ಪಡೆಯಲು ಅನುಕೂಲವಾಗಲಿದೆ. ಜಿಲ್ಲೆಯ ಅಭಿವೃದ್ದಿಗೆ ಸಾರ್ವಜನಿಕರು ಜಿಲ್ಲಾಡಳಿತ, ತಾಲೂಕಾಡಳಿತದೊಂದಿಗೆ ಕೈ ಜೋಡಿಸುವಂತೆ ಅವರು ಮನವಿ ಮಾಡಿಕೊಂಡರು.
ಕಾರ್ಯಕ್ರಮದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ. ಪಾಟೀಲ ಅವರು ವಿಕಲಚೇತನರ ಫಲಾನುಭವಿಗಳಿಗೆ ಹೊಲಿಗೆ ಯಂತ್ರ, ತೃತೀಯ ಲಿಂಗಿಗಳಿಗೆ ಗುರುತಿನ ಚೀಟಿ ವಿತರಣೆ ಮಾಡಿದರು.
ಬಬಲೇಶ್ವರದ ಡಾ.ಮಹಾದೇವ ಶಿವಾಚಾರ್ಯ ಸ್ವಾಮೀಜಿಗಳು ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷಿಕೇಶ ಸೊನಾವಣೆ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ವಿಜಯಪುರ ಉಪ ವಿಭಾಗಾಧಿಕಾರಿ ಶ್ವೇತಾ ಬೀಡಿಕರ, ಲೋಕೋಪಯೊಗಿ ಇಲಾಖೆ ಕಾರ್ಯನಿರ್ವಾಹಕ ಅಭಿಯಂತರ ರಾಜು ಮುಜುಮದಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಕೆ.ಕೆ.ಚವ್ಹಾಣ, ಬಬಲೇಶ್ವರ ತಹಶೀಲ್ದಾರ ಸುಬ್ಬಣ್ಣ ಜಮಖಂಡಿ, ತಿಕೋಟಾ ತಹಶೀಲ್ದಾರ ಸುರೇಶ ಮುಂಜೆ ಸೇರಿದಂತೆ ಇತರರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.