Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಹಾತ್ಮರ ಸತ್ಸಂಗದಿಂದ ಸನ್ಮಾರ್ಗ ಸಾಧ್ಯ :ಸಿದ್ದಾನಂದ ಶ್ರೀ
(ರಾಜ್ಯ ) ಜಿಲ್ಲೆ

ಮಹಾತ್ಮರ ಸತ್ಸಂಗದಿಂದ ಸನ್ಮಾರ್ಗ ಸಾಧ್ಯ :ಸಿದ್ದಾನಂದ ಶ್ರೀ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ: ಮಹಾತ್ಮರ ಸತ್ಸಂಗದಲ್ಲಿ ನಡೆದರೆ ಸನ್ಮಾರ್ಗದಲ್ಲಿ ನಡೆಯಲು ಸಾಧ್ಯ. ಆಧ್ಯಾತ್ಮದಿಂದ ಜೀವನದಲ್ಲಿ ಶಾಂತಿ-ನೆಮ್ಮದಿ ಸಿಗುತ್ತದೆ ಎಂದು ಬುದ್ನಿ ಸಿದ್ದಾರೂಢಮಠದ ಸಿದ್ದಾನಂದ ಸ್ವಾಮೀಜಿ ಹೇಳಿದರು.
ಪಟ್ಟಣದ ಸಮೀಪದ ಜೈನಾಪೂರ ಗ್ರಾಮದ ಪವಾರ ಬಸವೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿಯಂಗವಾಗಿ ಶುಕ್ರವಾರ ರಾತ್ರಿ ಹಮ್ಮಿಕೊಂಡಿದ್ದ ಶಿವಭಜನೆ ಜಾಗರಣೆ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದ ಅವರು, ಆಧ್ಯಾತ್ಮಿಕ ಕಾರ್ಯಕ್ರಮಗಳಲ್ಲಿ ಭಾಗಿಯಾದರೆ ಗುರುಗಳ ಆಶೀರ್ವಾದ ಪಡೆದುಕೊಳ್ಳುವ ಭಾಗ್ಯ ಸಿಗುತ್ತದೆ. ಪಾಪ ನಶಿಸಿ ಪುಣ್ಯ ಫಲ ಪ್ರಾಪ್ತಿಯಾಗುತ್ತದೆ. ಪ್ರತಿ ತಿಂಗಳು ಶಿವರಾತ್ರಿ ಇರುತ್ತದೆ. ವರ್ಷದಲ್ಲಿ ಒಂದು ಮಾತ್ರ ಮಹಾಶಿವರಾತ್ರಿ ಇರುತ್ತದೆ. ಈ ಮಹಾಶಿವರಾತ್ರಿಯಂದು ಇಡೀ ರಾತ್ರಿ ಶಿವನಾಮಸ್ಮರಣೆ ಮಾಡಿದರೆ ನಮ್ಮ ಭವ ಕಷ್ಟಗಳನ್ನು ಶಿವ ದೂರ ಮಾಡಿ ಜೀವನದಲ್ಲಿ ಸುಖ-ನೆಮ್ಮದಿ ನೀಡುತ್ತಾನೆ ಎಂದರು.
ಯಲಗೋಡ ಪುರದಾಳ ಮಠದ ಮಲ್ಲಿಕಾರ್ಜುನ ಸ್ವಾಮೀಜಿ ಮಾತನಾಡಿ, ಶಿವಪಥವ ಅರಿಯಬೇಕಾದರೆ ಗುರು ಪಥವ ಅಗತ್ಯವಿದೆ. ಗುರು ಜೀವನದಲ್ಲಿ ಪ್ರಮುಖ ಪಾತ್ರ ವಹಿಸುತ್ತಾನೆ. ಅಂತರಂಗ ಸಾಧನೆಯಿಂದ ಜ್ಞಾನ ಪಡೆದುಕೊಳ್ಳಬಹುದು. ಮನುಷ್ಯ ದುರ್ಬಲನಾಗದೇ ಸಬಲನಾಗಿ ಮನುಷ್ಯ ಜೀವನವನ್ನು ಪಾವನ ಮಾಡಿಕೊಳ್ಳುವ ಕಡೆಗೆ ಗಮನ ಹರಿಸಬೇಕು. ಆಧ್ಯಾತ್ಮದಿಂದ ಬದುಕನ್ನು ಸಾರ್ಥಕ ಪಡಿಸಿಕೊಳ್ಳಬೇಕೆಂದರು.
ಪುರಸಭೆ ಸದಸ್ಯ ಅಶೋಕ ಹಾರಿವಾಳ ಮಾತನಾಡಿದರು.
ಸಾನಿಧ್ಯ ವಹಿಸಿದ್ದ ಮನಗೂಳಿ ಎನ್ಎಚ್ ವಿರಕ್ತಮಠದ ವೀರತಿಶಾನಂದ ಸ್ವಾಮೀಜಿ, ಜೈನಾಪೂರ ಪವಾಡಬಸವೇಶ್ವರ ಮಠದ ಸಿದ್ದಲಿಂಗ ಸ್ವಾಮೀಜಿ, ಬಳೂತಿಯ ಸಿದ್ದಲಿಂಗ ಸ್ವಾಮೀಜಿ, ಬೈಲಹೊಂಗಲದ ಜಿ.ಎಸ್.ಗಣಾಚಾರಿ, ಅಮರೇಶಗೌಡ ಪಾಟೀಲ ಇತರರು ಮಾತನಾಡಿದರು.
ಕಾರ್ಯಕ್ರಮದಲ್ಲಿ ಚನ್ನಬಸಪ್ಪ ಗೊಳಸಂಗಿ, ಡಾ.ಮಲ್ಲಿಕಾರ್ಜುನ ಹುಡೇದಮನಿ, ಶಂಕ್ರೆಪ್ಪ ಉಳ್ಳಾಗಡ್ಡಿ, ಬಂದೇನವಾಜ ವಾಲೀಕಾರ, ಅಬ್ದುಲ್ರಜಾಕ ನಾಗೂರ, ಬಸಯ್ಯ ಗುರುವಿನ, ಸುರೇಶ ಲಮಾಣಿ, ಬಸಪ್ಪ ಕಾರಜೋಳ, ಅರ್ಜುನ ಉಳ್ಳಾಗಡ್ಡಿ, ಹಣಮಂತ ಗೊಳಸಂಗಿ, ಸಿದ್ರಾಮಯ್ಯ ಹಿರೇಮಠ, ಬಸಪ್ಪ ಆಲಕೊಪ್ಪರ, ಸಾಯಬಣ್ಣ ಗೊಳಸಂಗಿ, ನಿಜಲಿಂಗಪ್ಪ ಅಂಬಲಿ, ರುದ್ರಪ್ಪ ಕಲ್ಲಶೆಟ್ಟರು ಇತರರು ಇದ್ದರು. ಮಲ್ಲೇಶಿ ಅಂಬಲಿ ಸ್ವಾಗತಿಸಿ, ನಿರೂಪಿಸಿದರು.
ಶಿವಯೋಗಗೈದ ಸದ್ಭಕ್ತರಿಗೆ ವಿವಿಧ ಹಣ್ಣು-ಹಂಪಲ, ಸಾಬುದಾನಿ ಒಗ್ಗರಣೆ ಸೇರಿದಂತೆ ವಿವಿಧ ಫಲಾಹಾರದ ವ್ಯವಸ್ಥೆ ಮಾಡಲಾಗಿತ್ತು. ನಾಗೂರ, ಉಪ್ಪಲದಿನ್ನಿ, ಮಣ್ಣೂರ, ಜೈನಾಪೂರ, ಗೊಳಸಂಗಿ, ಬಳೂತಿ, ಹುಲ್ಲೂರ ಸೇರಿದಂತೆ ಇತರೇ ಗ್ರಾಮಗಳಿದ ಸದ್ಭಕ್ತರು ಶಿವರಾತ್ರಿ ಜಾಗರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.