Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಬಜೆಟ್: ಮುಖ್ಯಮಂತ್ರಿಗಳಿಂದ ದಲಿತ ವರ್ಗಕ್ಕೆ ದೊಡ್ಡ ದ್ರೋಹ

ಬಜೆಟ್ನಲ್ಲಿ ವಿಜಯಪುರ ಸಂಪೂರ್ಣ ನಿರ್ಲಕ್ಷ್ಯ :ಕೇಶವ ಪ್ರಸಾದ್

ಸ್ವಾರ್ಥ ಮಿತಿಯಲ್ಲಿರಲಿ ಗಡಿ ಮೀರದಿರಲಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪ್ರವಾಸಿಗರನ್ನು ಆಕರ್ಷಿಸಲು ಕ್ರಿಯಾ ಯೋಜನೆ ರೂಪಿಸಿ
(ರಾಜ್ಯ ) ಜಿಲ್ಲೆ

ಪ್ರವಾಸಿಗರನ್ನು ಆಕರ್ಷಿಸಲು ಕ್ರಿಯಾ ಯೋಜನೆ ರೂಪಿಸಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಐತಿಹಾಸಿಕ ಬೇಗಂ ತಾಲಾಬ್ ಗೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅಧಿಕಾರಿಗಳಿಗೆ ಸೂಚನೆ

ವಿಜಯಪುರ: ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ರವಿವಾರ ನಗರದ ಐತಿಹಾಸಿಕ ಬೇಗಂ ತಾಲಾಬ್ ಗೆ ಭೇಟಿ ನೀಡಿ ಆದಿಲ್ ಶಾಹಿ ಕಾಲದಲ್ಲಿ ನಗರಕ್ಕೆ ನೀರು ಪೂರೈಸಲಾಗುತ್ತಿದ್ದ ವ್ಯವಸ್ಥೆಯನ್ನು ಪರಿಶೀಲಿಸಿದರು.
ಬೆಳಿಗ್ಗೆ ಬೇಗಂ ತಾಲಾಬ್ ಕೆರೆಗೆ ಭೇಟಿ ನೀಡಿದ ಅವರು, ಅಲ್ಲಿ 400 ವರ್ಷಗಳ ಹಿಂದೆ ಆದಿಲ್ ಶಾಹಿ ಕಾಲದಲ್ಲಿ ಪೈಪಲೈನ್ ಮೂಲಕ ನಗರದ ಸುಮಾರು 10 ಲಕ್ಷ ಜನಸಂಖ್ಯೆಗೆ ಕುಡಿಯಲು ನೀರು ಪೂರೈಸಲು ನಿರ್ಮಿಸಲಾಗಿರುವ ವ್ಯವಸ್ಥೆಯನ್ನು ವೀಕ್ಷಿಸಿ ಪರಿಶೀಲನೆ ನಡೆಸಿದರು. ಗಚ್ಚು ತಂತ್ರಜ್ಞಾನ ಬಳಸಿ ತಯಾರಿಸಲಾದ ಡೆಲಿವರಿ ಚೇಂಬರ್ ಮತ್ತು ನೀರು ಸ್ಥಗಿತಗೊಳಿಸಲು ಅಳವಡಿಸಲಾಗಿರುವ ಸಾಗವಾನಿ ಕಟ್ಟಿಗೆಯಿಂದ ನಿರ್ಮಿಸಲಾಗಿರುವ ಗೇಟು ವಾಲ್ವ್ ವೀಕ್ಷಿಸಿದರು. ಅಲ್ಲಲ್ಲಿ ತುಂಬಿರುವ ಹೂಳನ್ನು ತೆಗೆದು ಸ್ವಚ್ಚಗೊಳಿಸಿ ದುರಸ್ಥಿ ಮಾಡುವಂತೆ ಸಚಿವರು ಪೌರಾಯುಕ್ತರಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಸಚಿವರು ಆದಿಲ್ ಶಾಹಿ ಕಾಲದಲ್ಲಿ ಗುರುತ್ವಾಕರ್ಷಣ ಶಕ್ತಿಯ ಮೇಲೆ ನಗರಕ್ಕೆ ನೀರು ಪೂರೈಕೆ ವ್ಯವಸ್ಥೆಯನ್ನೂ ಪರಿಶೀಲಿಸಿದರು. ಅಲ್ಲದೇ, ಸುಮಾರು ಒಂದು ಕಿ. ಮೀ. ವರೆಗೆ ತೆರಳಿ ಈ ವ್ಯವಸ್ಥೆಯ 4 ಡೆಲಿವರಿ ಚೇಂಬರ್ ವೀಕ್ಷಿಸಿದರು. ಒಂದು ಕಡೆ 50 ಅಡಿ ಮತ್ತೋಂದು ಕಡೆ ಸುಮಾರು 90 ಅಡಿ ಆಳದಲ್ಲಿ ಕೊಳವೆ ಮಾರ್ಗಗಳಲ್ಲಿ ನೀರು ಸರಬರಾಜು ಆಗುತ್ತಿರುವುದನ್ನು ಗಮನಿಸಿದರು. ಈ ಐತಿಹಾಸಿಕ ವ್ಯವಸ್ಥೆಯ ಮೂಲಕ ವಿಜಯಪುರ ನಗರಕ್ಕೆ ಕುಡಿಯಲು ನೀರು ಪೂರೈಸುವ ಸಾಧ್ಯತೆಗಳ ಕುರಿತು ಪರಿಶೀಲನೆ ನಡೆಸುವಂತೆ ಸಚಿವರು ಸ್ಥಳದಲ್ಲಿ ಉಪಸ್ಛಿತರಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇದೇ ವೇಳೆ, ಕರೆಜ್ ವ್ಯವಸ್ಥೆಯ ಕುರಿತೂ ಗಮನ ಹರಿಸಿದ ಸಚಿವರು, ಐತಿಹಾಸಿಕ ನೀರು ಪೂರೈಕೆ ವ್ಯವಸ್ಥೆ ಮತ್ತು ಕರೆಜ್ ವ್ಯವಸ್ಥೆ ಪ್ರವಾಸಿಗರನ್ನು ಸೆಳೆಯುತ್ತವೆ. ಈ ಹಿನ್ನೆಲೆಯಲ್ಲಿ ಪ್ರವಾಸೋದ್ಯಮ ಸಚಿವರೊಂದಿಗೆ ಬೆಂಗಳೂರಿನಲ್ಲಿ ಸಭೆ ನಡೆಸಿ ಪ್ರವಾಸಿಗರನ್ನು ಆಕರ್ಷಿಸಲು ಕ್ರಿಯಾ ಯೋಜನೆ ರೂಪಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅಲ್ಲದೇ, ಪ್ರವಾಸೋದ್ಯಮ ಸಚಿವ ಎಚ್. ಕೆ. ಪಾಟೀಲ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿ, ಐತಿಹಾಸಿಕ ನೀರು ಸರಬರಾಜು ವ್ಯವಸ್ಥೆಯ ಕುರಿತು ಮಾಹಿತಿ ನೀಡಿದರು. ವಿಜಯಪುರ ಜಿಲ್ಲೆಯ ಅಧಿಕಾರಿಗಳು ಬೆಂಗಳೂರಿಗೆ ಬಂದು ತಮ್ಮನ್ನು ಭೇಟಿ ಮಾಡಲಿದ್ದು, ಈ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಪ್ರವಾಸೋದ್ಯಮ ಸಚಿವರನ್ನು ಎಂ. ಬಿ. ಪಾಟೀಲ ಅವರು ಕೋರಿದರು.
ಈ ಸಂದರ್ಭದಲ್ಲಿ ಇತಿಹಾಸ ತಜ್ಞರಾದ ಕೃಷ್ಣ ಕೊಲ್ಹಾರ ಕುಲಕರ್ಣಿ, ಡಾ. ಎಚ್. ಜಿ. ದಡ್ಡಿ, ಉಪಮೇಯರ್ ದಿನೇಶ ಹಳ್ಳಿ, ಕೆಬಿಜೆಎನ್ಎಲ್ ಅಧೀಕ್ಷಕ ಅಭಿಯಂತರರಾದ ಜಗದೀಶ ರಾಠೋಡ, ಗೋವಿಂದ ರಾಠೋಡ, ಕಾರ್ಯನಿರ್ವಾಹಕ ಅಭಿಯಂತರ ನಾಗರಾಳ, ಮಹಾನಗರ ಪಾಲಿಕೆ ಆಯುಕ್ತ ಬದ್ರುದ್ದೀನ್ ಸೌದಾಗರ, ಮಾಜಿ ಕಾರ್ಪೋರೇಟರ್ ಅಬ್ದುಲ್ ರಜಾಕ್ ಹೊರ್ತಿ, ಡಾ. ಮಹಾಂತೇಶ ಬಿರಾದಾರ ಮುಂತಾದವರು ಉಪಸ್ಥಿತರಿದ್ದರು.

BIJAPUR NEWS patil public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಬಜೆಟ್: ಮುಖ್ಯಮಂತ್ರಿಗಳಿಂದ ದಲಿತ ವರ್ಗಕ್ಕೆ ದೊಡ್ಡ ದ್ರೋಹ

ಬಜೆಟ್ನಲ್ಲಿ ವಿಜಯಪುರ ಸಂಪೂರ್ಣ ನಿರ್ಲಕ್ಷ್ಯ :ಕೇಶವ ಪ್ರಸಾದ್

ಸ್ವಾರ್ಥ ಮಿತಿಯಲ್ಲಿರಲಿ ಗಡಿ ಮೀರದಿರಲಿ

ಅನ್ನದಾತನ ಬದುಕು ಬದಲಿಸುವ ಬಜೆಟ್ :ಸಚಿವ ಶಿವಾನಂದ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಬಜೆಟ್: ಮುಖ್ಯಮಂತ್ರಿಗಳಿಂದ ದಲಿತ ವರ್ಗಕ್ಕೆ ದೊಡ್ಡ ದ್ರೋಹ
    In (ರಾಜ್ಯ ) ಜಿಲ್ಲೆ
  • ಬಜೆಟ್ನಲ್ಲಿ ವಿಜಯಪುರ ಸಂಪೂರ್ಣ ನಿರ್ಲಕ್ಷ್ಯ :ಕೇಶವ ಪ್ರಸಾದ್
    In (ರಾಜ್ಯ ) ಜಿಲ್ಲೆ
  • ಸ್ವಾರ್ಥ ಮಿತಿಯಲ್ಲಿರಲಿ ಗಡಿ ಮೀರದಿರಲಿ
    In ಭಾವರಶ್ಮಿ
  • ಅನ್ನದಾತನ ಬದುಕು ಬದಲಿಸುವ ಬಜೆಟ್ :ಸಚಿವ ಶಿವಾನಂದ
    In (ರಾಜ್ಯ ) ಜಿಲ್ಲೆ
  • ಅಕ್ರಮವಾಗಿ ಅಕ್ಕಿ ಸಾಗಾಟ: ಆಹಾರ ಇಲಾಖೆ ದಾಳಿ!
    In (ರಾಜ್ಯ ) ಜಿಲ್ಲೆ
  • ಕಾಗೆಯ ಕೆಲ ಗುಣಗಳನ್ನು ಅಳವಡಿಸಿಕೊಂಡರೆ ಯಶಸ್ಸು ಸಾಧ್ಯ
    In ವಿಶೇಷ ಲೇಖನ
  • ಜೀವದ ಬಲೆಗಾಗಿ ಕಾದು ನಿಂತ ಅರ್ಜನಾಳ ಹೆದ್ದಾರಿ ರಸ್ತೆ!
    In (ರಾಜ್ಯ ) ಜಿಲ್ಲೆ
  • ಕುಮ್ಮನಸಿರಸಗಿ ಯಲ್ಲಿ ಮಾ.7ರಂದು ಆರೆಸ್ಸೆಸ್ ಪಥಸಂಚಲನ
    In (ರಾಜ್ಯ ) ಜಿಲ್ಲೆ
  • ಭಕ್ತಿ ಭಾವ ಮೆರೆದ 4 ವರ್ಷದ ಕುವರಿ ಬಿಬಿ ಖತಿಜಾ
    In (ರಾಜ್ಯ ) ಜಿಲ್ಲೆ
  • ರಂಗಿನಾಟ ಆಹ್ವಾನ ತಿರಸ್ಕಾರ: ನಾಡಗೌಡರ ನಡೆಗೆ ಹಿಂದೂ ಸಮಾಜ ಕಿಡಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.