ವಿಜಯಪುರ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ವಿಜಯಪುರ ನಗರ ಘಟಕದ ಅಧ್ಯಕ್ಷರಾಗಿ ಸಂಗಪ್ಪ ಚಲವಾದಿ ಅವರಿಗೆ ಜಿಲ್ಲಾ ಕೇಂದ್ರ ಕಚೇರಿಯಲ್ಲಿ ಸಂಘದ ಗುರಿ ಹಾಗೂ ತತ್ವ ಸಿದ್ಧಾಂತಗಳನ್ನು ಹೇಳಿ ಜಿಲ್ಲಾಧ್ಯಕ್ಷ ಸಂಗಮೆಶ ಸಗರ ಅವರು ಆದೇಶ ಪ್ರತಿ ನೀಡಿದರು.
ಬಳಿಕ ಮಾತನಾಡಿದ ಅವರು, ವಿಜಯಪುರ ನಗರದಲ್ಲಿ ಬರುವ ಎಲ್ಲಾ ವಾರ್ಡಗಳಲ್ಲಿ ರೈತ ಸಂಘದ ಹಿರಿಯ, ಯುವ, ಮಹಿಳಾ, ಕಾರ್ಮಿಕ ಸಂಘಟನೆಯನ್ನು ಮಾಡಿ ಎಲ್ಲಾ ರೈತರನ್ನು ಸಂಘಟನೆಗೆ ಕರೆತಂದು ಸರ್ಕಾರದ ಯೋಜನೆಗಳನ್ನು ತಿಳಿಸುತ್ತಾ, ಹೊಸ ಹೊಸ ತಂತ್ರಜ್ಞಾನಗಳನ್ನು ತಿಳಿಸುತ್ತಾ ಸಮಗ್ರ ಹಾಗೂ ಸಾವಯವ ಕೃಷಿ ಮಾಡುವಂತೆ ಪ್ರೇರೇಪಿಸಿ ರೈತರ ಆದಾಯವನ್ನು ದ್ವಿಗುಣಗೊಂಡು ಯಾರು ಆತ್ಮಹತೈ ಮಾಡಿಕೊಳ್ಳದಂತೆ ನಾವೆಲ್ಲರೂ ರೈತರ ಪರವಾಗಿ ಶ್ರಮಿಸೋಣ ಎಂದರು.
ಈ ವೇಳೆ ಜಿಲ್ಲಾ ಸಂಚಾಲಕ ರಾಮನಗೌಡ ಪಾಟೀಲ (ಬ್ಯಾಲ್ಯಾಳ), ನಿಡಗುಂದಿ ಅಧ್ಯಕ್ಷ ಡಾ. ಎಂ.ಕೆ.ಬಿರಾದಾರ ಮುಖಂಡರಾದ ಹಾಜಿಲಾಲ ಕರ್ಜಗಿ ಸೇರಿದಂತೆ ಇತರರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

