ಸಿಂದಗಿ: ಬಿಜೆಪಿ ಪಕ್ಷದ ಯುವ ಮುಖಂಡ ಪ್ರಶಾಂತ ಕದ್ದರಕಿಯವರನ್ನು ಎಸ್.ಟಿ. ಮೋರ್ಚಾ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿ ತಾಲೂಕು ಮಂಡಲ ಅಧ್ಯಕ್ಷ ಸಂತೋಷ ಪಾಟೀಲ ಡಂಬಳ ಆದೇಶ ಹೊರಡಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಎಸ್.ಟಿ.ಮೋರ್ಚಾ ಅಧ್ಯಕ್ಷ ಪ್ರಶಾಂತ ಕದ್ದರಕಿ, ಪಕ್ಷದ ಹಿರಿಯರು ನನ್ನ ರಾಜಕೀಯ ಗುರು ಮಾಜಿ ಶಾಸಕ ರಮೇಶ ಭೂಸನೂರ ಮತ್ತು ಜಿಲ್ಲಾಧ್ಯಕ್ಷರು, ತಾಲೂಕು ಅಧ್ಯಕ್ಷರು ನನ್ನ ಮೇಲೆ ಭರವಸೆಯಿಟ್ಟು ಎಸ್.ಟಿ.ಮೋರ್ಚಾ ಅಧ್ಯಕ್ಷ ಸ್ಥಾನವನ್ನು ನೀಡಿದ್ದಾರೆ. ನನ್ನ ಮೇಲೆ ಇಟ್ಟಿರುವ ಭರವಸೆ ಹುಸಿಯಾಗದಂತೆ ಪಕ್ಷದಲ್ಲಿ ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸುತ್ತೇನೆ ಮುಂಬರು ಲೋಕಸಭೆ, ಜಿ.ಪಂ, ತಾ.ಪಂ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುವೆ ಪಕ್ಷವನ್ನು ಸಂಘಟಿಸುವೆ ಎಂದು ಹೇಳಿದರು.
Subscribe to Updates
Get the latest creative news from FooBar about art, design and business.
Related Posts
Add A Comment

