ಬಸವನಬಾಗೇವಾಡಿ: ಪಟ್ಟಣದ ವಿರಕ್ತಮಠದಲ್ಲಿ ಮಾ. ೧೪ ರಂದು ಬೆಳಗ್ಗೆ ೧೦.೩೦ ಗಂಟೆಗೆ ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ತಾಲೂಕು ಶಾಖೆಯು ಸಂಘದ ೨೦೨೩-೨೪ ನೇ ಸಾಲಿನ ವಾರ್ಷಿಕೋತ್ಸವ ಮತ್ತು ೭೫ ವರ್ಷ ತುಂಬಿ ನಿವೃತ್ತ ನೌಕರರ ಸನ್ಮಾನ ಸಮಾರಂಭವನ್ನು ಹಮ್ಮಿಕೊಂಡಿದೆ. ಸಾನಿಧ್ಯವನ್ನು ಸಿದ್ದಲಿಂಗ ಸ್ವಾಮೀಜಿ ವಹಿಸುವರು. ಅಧ್ಯಕ್ಷತೆಯನ್ನು ರಾಜ್ಯ ನಿವೃತ್ತ ನೌಕರರ ಸಂಘದ ತಾಲೂಕಾಧ್ಯಕ್ಷ ಎಫ್.ಡಿ.ಮೇಟಿ ವಹಿಸುವರು. ಡಿಸಿಸಿ ಬ್ಯಾಂಕಿನ ನಿರ್ದೇಶಕಿ ಸಂಯುಕ್ತಾ ಪಾಟೀಲ ಉದ್ಘಾಟಿಸುವರು. ಮುಖ್ಯಅತಿಥಿಗಳಾಗಿ ರಾಜ್ಯ ನಿವೃತ್ತ ನೌಕರರ ಸಂಘದ ಜಿಲ್ಲಾಧ್ಯಕ್ಷ ಎಸ್.ಪಿ.ಬಿರಾದಾರ, ತಹಸೀಲ್ದಾರ ಯಮನಪ್ಪ ಸೋಮನಕಟ್ಟಿ ಆಗಮಿಸುವರು. ಮಕ್ಕಳ ಸಾಹಿತಿ ಪ.ಗು.ಸಿದ್ದಾಪುರ ಉಪನ್ಯಾಸ ನೀಡುವರು. ಇದೇ ಸಂದರ್ಭದಲ್ಲಿ ೭೫ ವರ್ಷ ತುಂಬಿದ ನಿವೃತ್ತ ನೌಕರ ಬಾಂಧವರನ್ನು ಸನ್ಮಾನಿಸಲಾಗುವುದು ಎಂದು ಸಂಘದ ತಾಲೂಕು ಕಾರ್ಯದರ್ಶಿ ಎಸ್.ಕೆ.ಸೋಮನಕಟ್ಟಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
