Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಆರೋಗ್ಯ ಸೇವೆಗಳ ವಿಸ್ತರಣೆಗೆ ಬಿ.ಎಲ್.ಡಿ.ಇ ಸಂಸ್ಥೆ ಸದಾ ಬದ್ಧ

ನೂತನ ಪದಾಧಿಕಾರಿಗಳ ಪದಗ್ರಹಣ ಯಶಸ್ವಿ

ಆಲಮಟ್ಟಿ-ನಾರಾಯಣಪುರದಿಂದ ಕಾಲುವೆಗಳಿಗೆ ನೀರು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಾನವೀಯತೆ ಮೆರೆದ ಅಶೋಕ ಹಾರಿವಾಳ
(ರಾಜ್ಯ ) ಜಿಲ್ಲೆ

ಮಾನವೀಯತೆ ಮೆರೆದ ಅಶೋಕ ಹಾರಿವಾಳ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಅನಾರೋಗ್ಯದಿಂದ ಅಸ್ವಸ್ಥಗೊಂಡ ಅಪರಿಚಿತ ವಯೋವೃದ್ಧನನ್ನು ಆಸ್ಪತ್ರೆಗೆ ಸಾಗಿಸಿದ ಕರವೇ ಅಧ್ಯಕ್ಷ

– ಬಸವರಾಜ ನಂದಿಹಾಳ
ಬಸವನಬಾಗೇವಾಡಿ: ಪಟ್ಟಣದ ಸಮೀಪವಿರುವ ಬಸವನಹಟ್ಟಿ ಕ್ರಾಸಿನ ಬಸ್ತಂಗುದಾಣದಲ್ಲಿ ಕಳೆದ ಮೂರು ದಿನಗಳಿಂದ ಅನಾರೋಗ್ಯದಿಂದ ಅಸ್ವಸ್ಥಗೊಂಡ ಅಪರಿಚಿತ ವಯೋವೃದ್ಧನನ್ನು ಅಂಬ್ಯುಲೆನ್ಸ್ ಸಿಬ್ಬಂದಿಗಳ ಸಹಾಯದಿಂದ ಸರ್ಕಾರಿ ಆಸ್ಪತ್ರೆಗೆ ಸಾಗಿಸಿ ಒರ್ವ ವಯೋವೃದ್ಧನ ಜೀವ ಕಾಪಾಡಿದ ಮಾನವೀಯ ಘಟನೆ ಗುರುವಾರ ಜರುಗಿದೆ.
ಕಳೆದ ಮೂರು ದಿನಗಳಿಂದ ಅಪರಿಚಿತ ಸುಮಾರು ೬೨ ವರ್ಷದ ವೃದ್ಧ ಬಸವನಹಟ್ಟಿ ಕ್ರಾಸಿನ ಬಸ್ ತಂಗುದಾಣದಲ್ಲಿದ್ದಾರೆ. ಇದನ್ನು ಗಮನಿಸಿದ ಬಸ್ ತಂಗುದಾಣದ ಹತ್ತಿರ ತೋಟದ ನಿವಾಸಿ ಅಸ್ತಾಪ ಬಾಗವಾನ ಅವರು ಸೇರಿದಂತೆ ಇತರರು ವೃದ್ದನಿಗೆ ಆಹಾರ, ನೀರು, ಜ್ಯೂಸ್ ನೀಡಿದ್ದಾರೆ. ತೀವ್ರ ಅನಾರೋಗ್ಯದಿಂದ ಅಸ್ವಸ್ಥಗೊಂಡ ವೃದ್ಧ ನಿತ್ರಾಣವಾಗಿ ಮಲಗಿಕೊಂಡಿದ್ದಾನೆ. ವಿಪರೀತ ಬಿಸಿಲಿನ ತಾಪವು ವೃದ್ಧನನ್ನು ಹೈರಾಣ ಮಾಡಿದೆ. ಇದನ್ನು ಕಂಡ ಅಸ್ತಾಪ ಬಾಗವಾನ ಅವರು ಕರ್ನಾಟಕ ರಕ್ಷಣಾ ವೇದಿಕೆಯ ಯುವ ಘಟಕದ ಅಧ್ಯಕ್ಷ ಅಶೋಕ ಹಾರಿವಾಳ ಅವರಿಗೆ ದೂರವಾಣಿ ಕರೆ ಮಾಡಿ ಈ ವಿಷಯ ತಿಳಿಸಿದ್ದಾರೆ.
ವಿಷಯ ತಿಳಿದ ತಕ್ಷಣವೇ ಅಶೋಕ ಹಾರಿವಾಳ ಅವರು ಸ್ಥಳಕ್ಕೆ ಬಂದು ತೀವ್ರ ಬಳಲಿದ ವೃದ್ಧನನ್ನು ನೋಡಿ ತಕ್ಷಣವೇ ಅಂಬ್ಯುಲೆನ್ಸ್ಗೆ ಕರೆ ಮಾಡಿ ಅನಾರೋಗ್ಯದಿಂದ ನಿತ್ರಾಣಗೊಂಡ ವೃದ್ಧನನ್ನು ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಕಳುಹಿಸಿಕೊಟ್ಟರು.
ಈ ಸಂದರ್ಭದಲ್ಲಿ ಕರವೇ ಕಾರ್ಯಕರ್ತರಾದ ಶ್ರೀಶೈಲ ಮದರಕಿ, ಪರಶು ಒಡೆಯರ,ಅಸ್ತಾಪ ಬಾಗವಾನ ಇದ್ದರು. ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ವೃದ್ಧನಿಗೆ ಪ್ರಾಥಮಿಕ ಚಿಕಿತ್ಸೆ ನೀಡಿದ ನಂತರ ಜಿಲ್ಲಾಸ್ಪತ್ರೆಯಲ್ಲಿ ಮುಂದಿನ ಚಿಕಿತ್ಸೆ ಕರೆದುಕೊಂಡು ಹೋಗಲಾಯಿತು.
ಅಶೋಕ ಹಾರಿವಾಳ ಅವರನ್ನು ದೂರವಾಣಿ ಮೂಲಕ ಶುಕ್ರವಾರ ಪತ್ರಿಕೆ ಸಂಪರ್ಕಿಸಿದಾಗ, ಬಸವನಹಟ್ಟಿ ಕ್ರಾಸಿನಲ್ಲಿರುವ ಬಸ್ ತಂಗುದಾಣದಲ್ಲಿ ಒರ್ವ ವೃದ್ಧನು ಅನಾರೋಗ್ಯದಿಂದ ತೀವ್ರವಾಗಿ ಬಳಲುತ್ತಿದ್ದಾನೆ ಎಂಬುವದು ಗೊತ್ತಾಯಿತು. ತಕ್ಷಣವೇ ನಾನು ಸ್ಥಳಕ್ಕೆ ಹೋಗಿ ಇದರ ಬಗ್ಗೆ ತಾಲೂಕಾ ವೈದ್ಯಾಧಿಕಾರಿ ಡಾ.ಎಸ್.ಎಸ್.ಓತಗೇರಿ ಅವರ ಗಮನಕ್ಕೆ ತಂದಾಗ ತಕ್ಷಣವೇ ಅವರು ಅಂಬ್ಯುಲೆನ್ಸ್ ಕಳುಹಿಸಿ ವೃದ್ಧನಿಗೆ ಸೂಕ್ತ ಚಿಕಿತ್ಸೆ ಸಿಗುವಂತೆ ಮಾಡಿದರು. ಈ ವೃದ್ಧನ ಹೆಸರು, ಊರು ಗೊತ್ತಾಗಿಲ್ಲ. ಯಾರಾದರೂ ಇವರ ಸಂಬಂಧಿಕರು ಇದ್ದರೆ ಜಿಲ್ಲಾಸ್ಪತ್ರೆಗೆ ಹೋಗಬಹುದು. ಈಗ ವೃದ್ಧನು ಚೇತರಿಸಿಕೊಳ್ಳುತ್ತಿದ್ದಾನೆ ಎಂದು ಗೊತ್ತಾಗಿದ್ದು. ವೃದ್ಧನು ಇನ್ನೂ ಮಾತನಾಡುವ ಸ್ಥಿತಿಯಲ್ಲಿ ಇಲ್ಲ ಎಂದು ಗೊತ್ತಾಗಿದೆ. ಇದರಿಂದ ಅವರ ಬಗ್ಗೆ ಹೆಚ್ಚು ಮಾಹಿತಿ ಸಿಕ್ಕಿಲ್ಲ ಎಂದು ಹೇಳಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಆರೋಗ್ಯ ಸೇವೆಗಳ ವಿಸ್ತರಣೆಗೆ ಬಿ.ಎಲ್.ಡಿ.ಇ ಸಂಸ್ಥೆ ಸದಾ ಬದ್ಧ

ನೂತನ ಪದಾಧಿಕಾರಿಗಳ ಪದಗ್ರಹಣ ಯಶಸ್ವಿ

ಆಲಮಟ್ಟಿ-ನಾರಾಯಣಪುರದಿಂದ ಕಾಲುವೆಗಳಿಗೆ ನೀರು

ಜು.೨೯ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಆರೋಗ್ಯ ಸೇವೆಗಳ ವಿಸ್ತರಣೆಗೆ ಬಿ.ಎಲ್.ಡಿ.ಇ ಸಂಸ್ಥೆ ಸದಾ ಬದ್ಧ
    In (ರಾಜ್ಯ ) ಜಿಲ್ಲೆ
  • ನೂತನ ಪದಾಧಿಕಾರಿಗಳ ಪದಗ್ರಹಣ ಯಶಸ್ವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ-ನಾರಾಯಣಪುರದಿಂದ ಕಾಲುವೆಗಳಿಗೆ ನೀರು
    In (ರಾಜ್ಯ ) ಜಿಲ್ಲೆ
  • ಜು.೨೯ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಮಾಜಿ ಸೈನಿಕರ ಮಕ್ಕಳಿಗೆ ಜನರಲ್ ಕೆ.ಎಸ್.ತಿಮ್ಮಯ್ಯ ನಗದು ಪ್ರಶಸ್ತಿ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಶಿಷ್ಯವೇತನ, ಪುಸ್ತಕ ಅನುದಾನಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಶಿಷ್ಯವೇತನಕ್ಕೆ ಮಾಜಿ ಸೈನಿಕರ ಮಕ್ಕಳಿಂದ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಆ.೧ರಂದು ವ್ಯಸನ ಮುಕ್ತ ದಿನಾಚರಣೆಗೆ ಸಕಲ ಸಿದ್ದತೆ :ಡಾ.ಔದ್ರಾಮ
    In (ರಾಜ್ಯ ) ಜಿಲ್ಲೆ
  • ನಾಗರಿಕತೆ ವಿಕಾಸದ ಇತಿಹಾಸ ತಿಳಿಸುವ ನಂದಿ‌ಮೂರ್ತಿಗಳು
    In (ರಾಜ್ಯ ) ಜಿಲ್ಲೆ
  • ಶಾಸಕ ಬಸನಗೌಡ ಪಾಟೀಲ ನೇತೃತ್ವದಲ್ಲಿ ದ್ರಾಕ್ಷಿ ಬೆಳೆಗಾರರ ಸಭೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.