Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಯಶಸ್ಸು ಸಾಧನೆಗೆ ಆಧ್ಯಾತ್ಮಿಕತೆ ನೆರವು :ಮೋಕ್ಷಾನಂದಜಿ

ಬೆಂಬಲ ಬೆಲೆ ಯೋಜನೆ: ಮೆಕ್ಕೆಜೋಳ ಖರೀದಿಗೆ ರೈತರಿಂದ ನೋಂದಣಿ

ಬೂದಿ ತುಂಬಿದ ವಾಹನಗಳಿಂದ ವಾಯು ಮಾಲಿನ್ಯ ತಡೆಗಟ್ಟಲು ಆಗ್ರಹ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಠಗಳು ಸಂಸ್ಕಾರದ ತಾಣಗಳು :ಮಾಗಣಗೇರಿ ಶ್ರೀ
(ರಾಜ್ಯ ) ಜಿಲ್ಲೆ

ಮಠಗಳು ಸಂಸ್ಕಾರದ ತಾಣಗಳು :ಮಾಗಣಗೇರಿ ಶ್ರೀ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕಲಕೇರಿ: ಸನಾತನ ಕಾಲದಿಂದಲೂ ಮಠಮಾನ್ಯಗಳಿಗೆ ತನ್ನದೇ ಆದ ವಿಶೇಷ ಘನತೆ ಗೌರವದ ಸ್ಥಾನವಿದ್ದು, ಮಠಗಳು ಸಮಾಜವನ್ನು ತಿದ್ದಿ ತೀಡಿ ಅವರನ್ನು ಧರ್ಮದ ಮಾರ್ಗದಲ್ಲಿ ನಡೆಯುವಂತೆ ಮಾಡುವ ಗುರುತರವಾದ ಜವಾಬ್ದಾರಿಯನ್ನು ನಿಭಾಯಿಸಿಕೊಂಡು ಬಂದಿದ್ದು, ಅವು ನಿರಂತರವಾಗಿ ಅನ್ನ, ಅರಿವು ಮತ್ತು ಶಿಕ್ಷಣದ ಜೊತೆಗೆ ಸಂಸ್ಕಾರ ನೀಡುವ ತಾಣಗಳಾಗಿವೆ ಎಂದು ಮಾಗಣಗೇರಿಯ ಡಾ. ವಿಶ್ವಾರಾಧ್ಯ ಶಿವಾಚಾರ್ಯ ಶ್ರೀಗಳು ಹೇಳಿದರು.
ಗ್ರಾಮದ ಗುರುಮರುಳಾರಾಧ್ಯರ ಹಿರೇಮಠದಲ್ಲಿ ಶುಕ್ರವಾರ ಸಂಜೆ ನಡೆದ ಲಿಂ.ಬಸವಲಿಂಗ ಮರುಳಸಿದ್ದ ಶಿವಾಚಾರ್ಯರ ಪುಣ್ಯಸ್ಮರಣೋತ್ಸವದ ನಿಮಿತ್ಯ ತಿಂಗಳ ಪರ್ಯಂತ ನಡೆಯಲಿರುವ ಮಹಾಶಿವಶರಣೆ ಸಜ್ಜಲಗುಡ್ಡದ ಶರಣಮ್ಮ ತಾಯಿಯ ಮಾಹಾಪುರಾಣಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕಲಕೇರಿಯ ಗುರುಮರುಳಾರಾಧ್ಯರ ಹಿರೇಮಠಕ್ಕೆ ಶತಶತಮಾನಗಳ ಇತಿಹಾಸವಿದ್ದು ಮಹಾದಾಸೋಹಿ ಕಲಬುರ್ಗಿಯ ಶರಣಬಸಪ್ಪನಿಗೆ, ಕಡಕೋಳದ ಮಡಿವಾಳಪ್ಪನಿಗೆ ದೀಕ್ಷೆ ಕೊಟ್ಟ ಕೀರ್ತಿ ಕಲಕೇರಿ ಹಿರೇಮಠದ ಗುರುಪರಂಪರೆಗೆ ಸಲ್ಲುತ್ತದೆ, ಪ್ರಸ್ತುತ ಶ್ರೀಮಠದ ಪೀಠಾಧಿಪತಿಗಳಾದ ಸಿದ್ದರಾಮ ಶಿವಾಚಾರ್ಯರು ಹತ್ತು ಹಲವು ಧಾರ್ಮಿಕ, ಸಾಮಾಜಿಕ ಕಾರ್ಯಗಳನ್ನು ಮಾಡುತ್ತಾ ಬಂದಿದ್ದು, ಭಕ್ತರು ತಮ್ಮ ಸಂಸಾರದ ಜಂಜಾಟದ ಮಧ್ಯ ಗುರುಗಳ ಮಾರ್ಗದರ್ಶನದಲ್ಲಿ ಪುರಾಣ ಪುಣ್ಯಕಥೆಗಳನ್ನು ಕೇಳುವುದರ ಮೂಲಕ ಜೀವನ ಸಾರ್ಥಕಪಡಿಸಿಕೊಳ್ಳಬೇಕು ಎಂದು ಹೇಳಿದರು.
ಪುರಾಣಿಕರಾದ ಯಾಳಗಿ ಸೋಮಶೇಖರಮಠದ ಬಸಯ್ಯ ಶಾಸ್ತ್ರಿಗಳು ಸಜ್ಜಲಗುಡ್ಡದ ಶರಣಮ್ಮ ತಾಯಿಯ ಪುರಾಣವನ್ನು ಪ್ರಾರಂಭಿಸುವ ಮೂಲಕ ವಿದ್ಯುಕ್ತವಾಗಿ ಚಾಲನೆ ನೀಡಿದರು.
ಗವಾಯಿಗಳಾದ ಸಂಗಮೇಶ ನೀಲಾ ಮತ್ತು ಮಹಾಂತೇಶ ಕಾಳಗಿ ಅವರು ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು.
ವಿರುಪಾಕ್ಷಯ್ಯ ಹಿರೇಮಠ ಹಂಪಿ, ಶಾಂತಗೌಡ ಬಿ. ಪಾಟೀಲ, ಬಿಜೆಪಿ ಮುಖಂಡ ಸಿದ್ದು ಬುಳ್ಳಾ ಮಾತನಾಡಿದರು.
ಕಲಕೇರಿಯ ಸಂಸ್ಥಾನ ಗದ್ದುಗೆಮಠದ ಗುರುಮಡಿವಾಳೆಶ್ವರ ಶಿವಾಚಾರ್ಯರು, ಕೆರುಟಗಿ ಸಿದ್ಧರಾಮೇಶ್ವರ ಮಠದ ಶಿವಬಸವ ಶಿವಾಚಾರ್ಯರು ಕಾರ್ಯಕ್ರಮದ ನೇತೃತ್ವ ವಹಿಸಿದ್ದರು. ಕಲಕೇರಿ ಹಿರೇಮಠದ ಪೀಠಾಧಿಪತಿಗಳಾದ ಸಿದ್ದರಾಮ ಶಿವಾಚಾರ್ಯರು ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಸಣ್ಣಶರಭಯ್ಯ ಗದ್ದಗಿಮಠ, ಕಾಶೀನಾಥ ಹಿರೇಮಠ, ಮಲ್ಲಯ್ಯ ಹಿರೇಮಠ, ಶರಣಯ್ಯ ಮಠಪತಿ, ಪ್ರಭುಗೌಡ ಬಿರಾದಾರ ಅಸ್ಕಿ, ದೇವಿಂದ್ರ ಜಂಬಗಿ, ಸಿ.ಎಸ್.ಹಿರೇಮಠ, ಸಂಗನಗೌಡ ಬಿರಾದಾರ, ಷಣ್ಮುಖಪ್ಪ ಝಳಕಿ, ಶರಣಪ್ಪ ಮೋಪಗಾರ, ಮಹಾಂತೇಶ ಮೂಲಿಮನಿ, ಸೇರಿದಂತೆ ಇತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಯಶಸ್ಸು ಸಾಧನೆಗೆ ಆಧ್ಯಾತ್ಮಿಕತೆ ನೆರವು :ಮೋಕ್ಷಾನಂದಜಿ

ಬೆಂಬಲ ಬೆಲೆ ಯೋಜನೆ: ಮೆಕ್ಕೆಜೋಳ ಖರೀದಿಗೆ ರೈತರಿಂದ ನೋಂದಣಿ

ಬೂದಿ ತುಂಬಿದ ವಾಹನಗಳಿಂದ ವಾಯು ಮಾಲಿನ್ಯ ತಡೆಗಟ್ಟಲು ಆಗ್ರಹ

ಲಿಂ.ಚೆನ್ನಬಸವ ಶ್ರೀ, ದಿ.ಶಾಮನೂರ ಶಿವಶಂಕರಪ್ಪ ರಿಗೆ ಶ್ರದ್ಧಾಂಜಲಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಯಶಸ್ಸು ಸಾಧನೆಗೆ ಆಧ್ಯಾತ್ಮಿಕತೆ ನೆರವು :ಮೋಕ್ಷಾನಂದಜಿ
    In (ರಾಜ್ಯ ) ಜಿಲ್ಲೆ
  • ಬೆಂಬಲ ಬೆಲೆ ಯೋಜನೆ: ಮೆಕ್ಕೆಜೋಳ ಖರೀದಿಗೆ ರೈತರಿಂದ ನೋಂದಣಿ
    In (ರಾಜ್ಯ ) ಜಿಲ್ಲೆ
  • ಬೂದಿ ತುಂಬಿದ ವಾಹನಗಳಿಂದ ವಾಯು ಮಾಲಿನ್ಯ ತಡೆಗಟ್ಟಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಲಿಂ.ಚೆನ್ನಬಸವ ಶ್ರೀ, ದಿ.ಶಾಮನೂರ ಶಿವಶಂಕರಪ್ಪ ರಿಗೆ ಶ್ರದ್ಧಾಂಜಲಿ
    In (ರಾಜ್ಯ ) ಜಿಲ್ಲೆ
  • ಚಡಚಣದಲ್ಲಿ ಕಳ್ಳರ ಹಾವಳಿ: ಭಯಭೀತಿಯಲ್ಲಿ ನಾಗರಿಕರು
    In (ರಾಜ್ಯ ) ಜಿಲ್ಲೆ
  • ಅಂತರ್ಜಾಲದ ಬಳಕೆ ಅತ್ಯಂತ ಜಾಗರೂಕತೆಯಿಂದ ನಿರ್ವಹಣೆ ಮಾಡಿ
    In (ರಾಜ್ಯ ) ಜಿಲ್ಲೆ
  • ದ್ವೇಷ ಭಾಷಣ ವಿರೋಧಿ ಮಸೂದೆಗೆ ರಾಜ್ಯಪಾಲರು ಒಪ್ಪಬಾರದು
    In (ರಾಜ್ಯ ) ಜಿಲ್ಲೆ
  • ಪಿಪಿಪಿ ಮಾದರಿ ಬಿಜೆಪಿ ಹಾಗೂ ಮೋದಿ ಅವರ ಕೂಸು
    In (ರಾಜ್ಯ ) ಜಿಲ್ಲೆ
  • ಸಾರವಾಡ ಸುತ್ತಮುತ್ತಲಿನ ಗ್ರಾಮಗಳಿಗೆ ನೀರಾವರಿ ಸೌಲಭ್ಯಕ್ಕೆ ಬದ್ಧ
    In (ರಾಜ್ಯ ) ಜಿಲ್ಲೆ
  • ದೇಹ ದಾರ್ಡ್ಯ ಸ್ಪರ್ಧೆ: ಎಸ್.ಎಸ್.ಬಿ. ಪ್ರತಿಭೆ ಪ್ರಜ್ವಲ ಗೆ ಬೆಳ್ಳಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.