ಸಿಂದಗಿ: ಪಟ್ಟಣದ ಬಂದಾಳ ರಸ್ತೆಯಲ್ಲಿರುವ ಸಂಗಮೇಶ್ವರ ವಿದ್ಯಾಲಯದಲ್ಲಿ ನೆಲೆ ಪ್ರಕಾಶನ ಬಳಗದ ವತಿಯಿಂದ ಕರ್ನಾಟಕ ಸರಕಾರದಿಂದ ನೂತನವಾಗಿ ನೇಮಕಗೊಂಡ ವಿವಿಧ ಪ್ರಾಧಿಕಾರಗಳ ಅಧ್ಯಕ್ಷರ ಹಾಗೂ ಸದಸ್ಯರ ಸನ್ಮಾನ ಸಮಾರಂಭ ನಡೆಯಿತು.
ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷ ಡಾ.ಚನ್ನಪ್ಪ ಕಟ್ಟಿ, ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರ ಸದಸ್ಯ ಎಂ.ಎಸ್.ಮದಬಾವಿ, ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯ ಡಾ.ಎಂ.ಎಂ. ಪಡಶೆಟ್ಟಿ ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯೆ ದ್ರಾಕ್ಷಾಯಿಣಿ ಹುಡೇದ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಈ ವೇಳೆ ನ್ಯೂಜಿಲೆಂಡ್ ಬಸವ ಸಮಿತಿ ಸಂಸ್ಥಾಪಕ ಅಧ್ಯಕ್ಷ ಲಿಂಗಣ್ಣ ಕಲಬುರ್ಗಿ, ಎಂ.ಎಸ್. ಹೈಯಾಳಕರ, ಸಾಹಿತಿ ಮನು ಪತ್ತಾರ, ಶಿವಾನಂದ ಕಲಬುರ್ಗಿ, ಶಿವಕುಮಾರ ಶಿವಸಿಂಪಿಗೇರ ಸೇರಿದಂತೆ ಸಾಹಿತ್ಯಾಭಿಮಾನಿಗಳು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

