ವಿಜಯಪುರ : ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ವಿಜಯಪುರ ಜಿಲ್ಲಾ ಸಂಚಾಲಕರಾಗಿ ಜುಮನಾಳ ಗ್ರಾಮದ ರೈತ ಮುಖಂಡಾರಾದ ಮಹಾಂತೇಶ ಮಮದಾಪುರ ಅವರನ್ನು ಆಯ್ಕೆ ಮಾಡಿ ಜಿಲ್ಲಾ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಅವರು ಆದೇಶ ಪ್ರತಿ ನೀಡಿದರು.
ಈ ವೇಳೆ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಅವರು ಆದೇಶ ಪ್ರತಿ ನೀಡಿ ಸಂಘದ ತತ್ವ ಸಿದ್ದಾಂತಗಳಿಗೆ ಬದ್ಧವಾಗಿ, ಬಡವ ಬಲ್ಲಿದ, ಮೇಲು ಕೀಳು, ಎಂದೆನ್ನದೇ ಎಲ್ಲರನ್ನು ಪಕ್ಷಾತೀತವಾಗಿ ಜಾತ್ಯಾತೀತವಾಗಿ ಸಂಘಟನೇಯ ಸಿದ್ದಾಂತದಲ್ಲಿ ಕಾನೂನಿನ ಚೌಕಟ್ಟಿನಲ್ಲಿ ಎಲ್ಲರನ್ನು ಸಮನಾಗಿ ಕಾಣುತ್ತಾ ಯಾವುದೇ ರೈತರಿಗೆ ಅನ್ಯಾಯವಾದರೂ ತಕ್ಷಣದಲ್ಲಿ ಕಾರ್ಯಪ್ರವೃತ್ತರಾಗಬೇಕು ಹಾಗೇ ಜಿಲ್ಲೆಯ ಎಲ್ಲ ಹಳ್ಳಿಗಳಲ್ಲಿ ಗ್ರಾಮ ಘಟಕ, ತಾಲೂಕು ಘಟಕಗಳನ್ನು ಮಾಡಬೇಕು ಎಂದು ಹೇಳಿದರು
ಈ ವೇಳೆ ಜಿಲ್ಲಾ ಸಂಚಾಲಕ ರಾಮನಗೌಡ ಪಾಟೀಲ(ಬ್ಯಾಲ್ಯಾಳ), ತಾ.ಉಪಾಧ್ಯಕ್ಷ ಮಹಾದೇವಪ್ಪ ತೇಲಿ, ತಾ.ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಗೋಡೇಕಾರ, ಮುಖಂಡ ಆನಂದ ಭೀಸೆ ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

