ಬಸವನಬಾಗೇವಾಡಿ: ವಿಜಯಪುರ ಲೋಕಸಭೆ ಮತಕ್ಷೇತ್ರದಲ್ಲಿ ಬಿಜೆಪಿ ಬಂಜಾರಾ ಸಮಾಜಕ್ಕೆ ಟಿಕೆಟ್ ನೀಡದೇ ಬಂಜಾರ ಸಮಾಜಕ್ಕೆ ಅನ್ಯಾಯ ಮಾಡಿದೆ ಎಂದು ಬಂಜಾರಾ ಯುವ ಸೇನಾ ಸಂಘದ ಉಪಾಧ್ಯಕ್ಷ ಅಧ್ಯಕ್ಷ ಪುಂಡಲೀಕ ವಾಲು ಜಾಧವ ಹೇಳಿದರು.
ಪಟ್ಟಣದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸಮಾಜದ ಡಾ.ಬಾಬುರಾಜೇಂದ್ರ ನಾಯಕ ಅವರು ಜಿಲ್ಲೆಯ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಾ ವಿಜಯಪುರ ಜಿಲ್ಲೆ ಸಮಗ್ರ ಅಭಿವೃದ್ಧಿಗೆ ಕನಸು ಕಾಣುತ್ತಿರುವ ಇವರನ್ನು ಬಿಜೆಪಿ ಹೈಕಮಾಂಡ್ ಗುರುತಿಸಿ ಟಿಕೆಟ್ ಕೊಡಬೇಕಾಗ್ತಿತು. ಇವರ ಅಭಿವೃದ್ಧಿ ಪರ ಚಿಂತನೆಯನ್ನು ಗುರುತಿಸಿದೇ ನಮ್ಮ ಬಂಜಾರಾ ಸಮಾಜಕ್ಕೆ ಬಿಜೆಪಿ ಅನ್ಯಾಯ ಮಾಡಿದೆ. ಬಿಜೆಪಿಯಿಂದ ಡಾ.ಬಾಬುರಾಜೇಂದ್ರ ನಾಯಕ ಅವರಿಗೆ ಟಿಕೆಟ್ ಸಿಗಬೇಕಾಗಿತ್ತು. ಅವರಿಗೆ ಟಿಕೆಟ್ ಸಿಗದೇ ಇರುವದು ನಮಗೆ ನೋವು ತಂದಿದೆ. ಬಿಜೆಪಿ ನಮ್ಮ ಸಮುದಾಯವನ್ನು ಕಡೆಗಣಿಸುತ್ತಿದೆ. ಈ ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ನಮ್ಮ ಸಮಾಜವು ಬಿಜೆಪಿಗೆ ತಕ್ಕಪಾಠ ಕಲಿಸಲಿದೆ ಎಂದು ಎಚ್ಚರಿಸಿದರು.
ವೃತ್ತಿಯಲ್ಲಿ ವೈದ್ಯರಾಗಿರುವ ಡಾ.ಬಾಬುರಾಜೇಂದ್ರ ನಾಯಕ ಅವರು ಬಿಜೆಪಿ ತತ್ವ ಸಿದ್ಧಾಂತ ಮೆಚ್ಚಿ ಸಿಪಿಐ ವೃತ್ತಿಗೆ ರಾಜೀನಾಮೆ ಸಲ್ಲಿಸಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ನಾಗಠಾಣ ಮತಕ್ಷೇತ್ರದಿಂದ ಸ್ಪರ್ಧೆ ಮಾಡಲು ಇಚ್ಛೆ ವ್ಯಕ್ತಪಡಿಸಿದ್ದರು. ಆಗಲೂ ಇವರು ಟಿಕೆಟ್ ವಂಚಿತರಾಗಿದ್ದಾರೆ. ಈಗ ಲೋಕಸಭೆ ಟಿಕೆಟ್ಗಾಗಿ ಇವರು ಬೇಡಿಕೆ ಇಟ್ಟಿದ್ದರು. ಈಗಲೂ ಅವರಿಗೆ ಬಿಜೆಪಿ ಟಿಕೆಟ್ ನೀಡಿಲ್ಲ. ಇವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದರೆ ಬಿಜೆಪಿಗೆ ಹೊಡೆತ ಬೀಳುತ್ತದೆ. ಬಿಜೆಪಿ ಹೈಕಮಾಂಡ್ ಕೂಡಲೇ ಡಾ.ಬಾಬುರಾಜೇಂದ್ರ ನಾಯಕ ಅವರಿಗೆ ಟಿಕೆಟ್ ನೀಡಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ವಿಜಯ ಖೀರು ಜಾಧವ, ಸಂಜಯ ಶಂಕರ ರಾಠೋಡ, ರಾಜು ವಿಲಾಸ ಜಾಧವ, ರವಿ ಉಮಲು ಚವ್ಹಾಣ, ಶ್ರೀಕಾಂತ ಪೋಮು ರಾಠೋಡ ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

