Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ತಿಳಗೂಳ ಗ್ರಾಮದಲ್ಲಿ ನೀರಿಗಾಗಿ ಹಾಹಾಕಾರ!
(ರಾಜ್ಯ ) ಜಿಲ್ಲೆ

ತಿಳಗೂಳ ಗ್ರಾಮದಲ್ಲಿ ನೀರಿಗಾಗಿ ಹಾಹಾಕಾರ!

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಗ್ರಾಪಂ.ಗೆ ಬೀಗ ಹಾಕಿ ತಲೆಯ ಮೇಲೆ ಕಲ್ಲು ಹೊತ್ತು ಗ್ರಾಮಸ್ಥರಿಂದ ಧರಣಿ ಸತ್ಯಾಗ್ರಹ

ಕಲಕೇರಿ: ತಿಂಗಳಾದ್ರು ಬರ್ತಾ ಇಲ್ಲ ನಲ್ಲಿ ನೀರು..! ತಿಂಗಳುಗಳೇ ಕಳೆದರೂ ಗ್ರಾಮ ಪಂಚಾಯಿತಿಗೆ ಬಾರದ ಅಭಿವೃದ್ಧಿ ಅಧಿಕಾರಿಗಳು, ತಿಳಗೂಳ ಗ್ರಾಮದ ನೆರವಿಗೆ ಬರ್ತಾರಾ ಶಾಸಕ ರಾಜುಗೌಡ ಪಾಟೀಲ್, ಹೀಗೆಲ್ಲ ಕೇಳಿ ಬರುತ್ತಿರುವ ಮಾತುಗಳು ಕಲಕೇರಿ ಸಮೀಪದ ತಿಳಗೂಳ ಗ್ರಾಮದಲ್ಲಿ..
ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ತಾಲೂಕಿನ ತಿಳಗೂಳ ಗ್ರಾಮದಲ್ಲಿ ನೀರಿಗಾಗಿ ಹಾಹಾಕಾರ ಉಂಟಾಗಿದ್ದು, ಗ್ರಾಮದಲ್ಲಿ ತಿಂಗಳು ಕಳೆದರೂ ಯಾವುದೇ ನಲ್ಲಿಗಳಲ್ಲಿ ನೀರು ಬರುತ್ತಿಲ್ಲ, ಗ್ರಾಮದ ಎರೆ ಹೋಲದಲ್ಲಿ ಸರ್ಕಾರದಿಂದ ಎರಡು ಬಾವಿಗಳನ್ನು ನಿರ್ಮಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ, ದೇವರು ವರ ಕೊಟ್ಟರೂ ಪೂಜಾರಿ ವರ ಕೊಡಲಿಲ್ಲ ಎನ್ನುವಂತಾಗಿದೆ ಎಂದು ನೀರಿನ ಬವಣೆ ತೋಡಿಕೊಂಡ ಗ್ರಾಮಸ್ಥರು ಎರಡು ಬಾವಿಗಳಲ್ಲಿ ನೀರು ತುಂಬಿದ್ದರೂ ಎರಡೂ ಬಾವಿಗಳ ಪೈಪ್ಲೈನ್ ಒಡೆದು ಹೋಗಿ ಸುಮಾರು ೪ ರಿಂದ ೫ ವರ್ಷಗಳು ಗತಿಸಿದರೂ ಯಾವೊಬ್ಬ ಅಧಿಕಾರಿಯೂ ಸಹ ಇತ್ತ ಕಡೆ ಗಮನ ಹರಿಸಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಭಿವೃದ್ಧಿ ಅಧಿಕಾರಿಗಳು, ತಾಲೂಕು ಪಂಚಾಯತ್ ಅಧಿಕಾರಿಗಳಿಗೆ ಹಲವಾರು ಬಾರಿ ಮನವಿ ಮಾಡಿದರೂ ಸಹ ಯಾವುದೇ ಪ್ರಯೋಜನವಾಗಿಲ್ಲ ಎಂದು ಹೇಳಿದ ಗ್ರಾಮಸ್ಥರು ಗ್ರಾಮ ಪಂಚಾಯಿತಿಗೆ ಬೀಗ ಮುದ್ರೆ ಹಾಕಿ ತಲೆಯ ಮೇಲೆ ಕಲ್ಲು ಇಟ್ಟುಕೊಂಡು ಬೇಡಿಕೆ ಈಡೇರಿಸುವ ವರೆಗೆ ಉಪವಾಸ ಧರಣಿ ಸತ್ಯಾಗ್ರಹ ಮುಂದುವರೆಸುವುದಾಗಿ ಹೇಳಿದ್ದು, ಹಲವು ಬೇಡಿಕೆಗಳನ್ನು ಅಧಿಕಾರಿಗಳ ಮುಂದಿಟ್ಟಿದ್ದಾರೆ.
ಮೊದಲನೆಯದಾಗಿ ಕೂಡಲೇ ಕುಡಿಯುವ ನೀರಿನ ಪೂರೈಕೆ ಮಾಡಬೇಕು ಮತ್ತು ಎರೆ ಹೋಲದಲ್ಲಿ ಇರುವ ಎರಡು ಬಾವಿಗಳ ಪೈಪ್ಲೈನ್ ಮಾಡಬೇಕು, ಈ ಭ್ರಷ್ಟ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸಸ್ಪೆಂಡ್ ಮಾಡಬೇಕು, ೧೫ನೇ ಹಣಕಾಸು ಸಂಪೂರ್ಣ ತನಿಖೆ ಆಗಬೇಕು, ಕೊಳ್ಳೆ ಹೊಡೆದ ಹಣವನ್ನು ಸರ್ಕಾರಕ್ಕೆ ಮರಳಿ ತುಂಬಿಸಬೇಕು, ಎಸ್ಸಿ ಎಸ್ಟಿ ವಾರ್ಡ್ ಗಳಲ್ಲಿ ಸಿಸಿ ರಸ್ತೆಗಳು ನಿರ್ಮಾಣ ಮಾಡಬೇಕು, ಪಂಚಾಯಿತಿಯಲ್ಲಿ ಇರುವ ಕಸದ ವಾಹನವನ್ನು ಪ್ರತಿ ಹಳ್ಳಿಗಳಿಗೆ ಕಳಿಸಬೇಕು ಮತ್ತು ಶುದ್ಧ ಕುಡಿಯುವ ನೀರಿನ ಘಟಕ ಚಾಲನೆ ಮಾಡಬೇಕು ಎಂದು ಹೇಳಿದ್ದಾರೆ.
ಈ ಎಲ್ಲಾ ಬೇಡಿಕೆಗಳು ಈಡೇರುವ ವರೆಗೂ ಧರಣಿ ಸತ್ಯಾಗ್ರಹ ಹಿಂದೆ ತೆಗೆದುಕೊಳ್ಳುವುದಿಲ್ಲ ಎಂದು ಗ್ರಾಮದ ಮುಖಂಡರಾದ ವಿಠೋಬಾ ನಾಟೀಕಾರ, ನಿತ್ಯಾನಂದ ಕತ್ತಿ, ಮಾಂತಪ್ಪ ಸಂದಿಮನಿ, ದಾನೇಶ ಕೇಸರಿ, ಶರಣಪ್ಪ ಗದ್ದಗಿ, ಮುತ್ತು ಬಯ್ಯಾರ, ರಾಜು ಸಂದಿಮನಿ, ಸುಸಿಲಬಾಯಿ ಮಾದರ, ಸೀತಮ್ಮ ಗೆದ್ದಲಮಾರಿ, ರಾಮನಗೌಡ ಯಾಳವಾರ, ಮಾಂತಪ್ಪ ಗುಡಿಸಲಮನಿ, ಸಂತೋಷ್ ದೊಡಮನಿ, ಆನಂದ ಕಲಕೇರಿ, ದ್ಯಾವಪ್ಪ ದೊಡಮನಿ ಸೇರಿದಂತೆ ಇತರರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.
ಪಿಡಿಓ ಅಕ್ಕಮಹಾದೇವಿ ಅಂಗಡಿ ಮತ್ತು ಜೆಇ ಮಲ್ಲಿಕಾರ್ಜುನ ಹಿಕ್ಕನಗುತ್ತಿ ಸ್ಥಳಕ್ಕಾಗಮಿಸಿ ತಮ್ಮ ಆಶ್ವಾಸನೆಯ ಮೂಲಕ ಧರಣಿ ನಿರತರ ಮನವೊಲಿಸಲು ನಡೆಸಿದ ಪ್ರಯತ್ನ ವಿಫಲವಾಗಿದ್ದು, ಗ್ರಾಮಸ್ಥರು ಧರಣಿ ಮುಂದುವರೆಸುವುದಾಗಿ ಹೇಳಿದರು. ಈ ವೇಳೆ ಪತ್ರಿಕಾ ವರದಿಗಾರರು ಫೋನ್ ಮೂಲಕ ಪಿಡಿಓ ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದರೂ ಅವರು ಪ್ರತಿಕ್ರಿಯೆಗೆ ಸಿಗಲಿಲ್ಲ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.