Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಕ್ಕಳ ಸಾಹಿತ್ಯ ನಿರಂತರ ಹರಿವ ನದಿ ಇದ್ದಂತೆ

ಚಡಚಣ ತಾಲೂಕು ಕಾ.ನಿ.ಪನೂತನ ಪದಾಧಿಕಾರಿಗಳಿಗೆ ಸನ್ಮಾನ

ಕದಂಬ ಸೈನ್ಯ ಜಿಲ್ಲಾಧ್ಯಕ್ಷರಾಗಿ ಹಿರೇಮಠ ನೇಮಕ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮೋಸ ಮಾಡುವ ಆಧಾರ ಕಾರ್ಡ್ ಕೇಂದ್ರಗಳು :ಕ್ರಮಕ್ಕೆ ಮನವಿ
(ರಾಜ್ಯ ) ಜಿಲ್ಲೆ

ಮೋಸ ಮಾಡುವ ಆಧಾರ ಕಾರ್ಡ್ ಕೇಂದ್ರಗಳು :ಕ್ರಮಕ್ಕೆ ಮನವಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ: ತಾಲೂಕಿನಲ್ಲಿ ಮೋಸ ಮಾಡುವ ಆಧಾರ ಕಾರ್ಡ್ ಕೇಂದ್ರಗಳ ಮೇಲೆ ತಹಸೀಲ್ದಾರರು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕರವೇ ಸ್ವಾಭಿಮಾನಿ ಬಣದ ಜಿಲ್ಲಾ ಉಸ್ತುವಾರಿ ಅಧ್ಯಕ್ಷ ರಾಜಶೇಖರ ಹುಲ್ಲೂರ,ಪದಾಧಿಕಾರಿಗಳು ಗ್ರೇಡ್-೨ ತಹಸೀಲ್ದಾರ ಜಿ.ಎಸ್.ನಾಯಕ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು.
ಅವರು ಸಲ್ಲಿಸಿದ ಮನವಿಯಲ್ಲಿ ರಾಜ್ಯದಲ್ಲಿ ಶಾಲೆಯ ಮಕ್ಕಳ ಹೆಸರು ಎಸ್ಟಿಎಸ್ ದಾಖಲಾತಿ ಪ್ರಕಾರ ಆಧಾರ ಕಾರ್ಡ್ನಲ್ಲಿಯೂ ಇರಬೇಕು. ಇದರಿಂದಾಗಿ ಆಧಾರ ಕಾರ್ಡ್ನಲ್ಲಿ ಮಕ್ಕಳು ಹೆಸರು, ತಂದೆಯ ಹೆಸರು, ಅಡ್ಡಹೆಸರು ಸೇರಿದಂತೆ ಏನಾದರೂ ತಪ್ಪಾಗಿದ್ದರೆ ಆಧಾರ ಕಾರ್ಡ್ ತಿದ್ದುಪಡಿ ಮಾಡಿಕೊಳ್ಳಲು ಶಾಲೆಯ ಮುಖ್ಯಗುರುಗಳು ಪಾಲಕರಿಗೆ ಹೇಳುತ್ತಾರೆ. ಅದರಂತೆ ಪಾಲಕರು ತಮ್ಮ ತಮ್ಮ ಮಕ್ಕಳ ಆಧಾರ ಕಾರ್ಡ್ ತಿದ್ದುಪಡಿ ಮಾಡಿಕೊಳ್ಳಲು ಆಧಾರ ಕಾರ್ಡ್ ಕೇಂದ್ರಗಳಿಗೆ ಶಾಲೆಯ ದಾಖಲೆಯನ್ನು ಮುಖ್ಯಗುರುಗಳಿಂದ ಬರೆಸಿಕೊಂಡು ಹೋಗುತ್ತಾರೆ. ಪಾಲಕರು ಇದನ್ನು ತೆಗೆದುಕೊಂಡು ಹೋದಾಗ ಆಧಾರ ಕಾರ್ಡ್ ಕೇಂದ್ರದವರು ಇದನ್ನು ಪ್ರಿಂಟ್ ಮಾಡಿ ಮತ್ತೆ ಶಾಲೆಯ ಮುಖ್ಯಗುರುಗಳಿಂದ ಸಹಿ ಮಾಡಿಸಿಕೊಂಡು ಬರಲು ಹೇಳುತ್ತಾರೆ. ಆಗ ಪಾಲಕರಿಂದ ರೂ. ೧೦೦ ತೆಗೆದುಕೊಳ್ಳುತ್ತಾರೆ. ಪಾಲಕರು ಮತ್ತೆ ಮುಖ್ಯಗುರುಗಳಿಂದ ಸಹಿ, ಮುದ್ರೆ ಹಾಕಿಸಿಕೊಂಡು ಬಂದ ನಂತರ ಮತ್ತೆ ಪಾಲಕರಿಂದ ರೂ. ೧೦೦ ಪಡೆದುಕೊಂಡು ಆಧಾರ ಕಾರ್ಡ್ ತಿದ್ದುಪಡಿ ಮಾಡಿಕೊಡುತ್ತಿದ್ದಾರೆ. ಇದರಿಂದಾಗಿ ಪಾಲಕರಿಗೆ ಆರ್ಥಿಕ ಹೊರೆಯಾಗುವ ಜೊತೆಗೆ ತಮ್ಮ ಕೆಲಸ ಬಿಟ್ಟು ಅಲೆದಾಡುವ ಪರಿಸ್ಥಿತಿ ಉಂಟಾಗಿದೆ. ಮಕ್ಕಳ ಪಾಲಕರ ಮೇಲೆ ಆರ್ಥಿಕ ಹೊರೆಯಾಗುವ ಜೊತೆಗೆ ಅವರನ್ನು ಅಲೆದಾಡಿಸುತ್ತಿರುವ ಆಧಾರ ಕಾರ್ಡ್ ಕೇಂದ್ರಗಳ ಮೇಲೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಮುಂಬರುವ ದಿನಗಳಲ್ಲಿ ಯಾವುದೇ ಕ್ರಮ ತೆಗೆದುಕೊಳ್ಳದೇ ಹೋದರೆ ಮಕ್ಕಳ ಪಾಲಕರ ಜೊತೆಗೆ ಸಂಘಟನೆ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಲಾಗಿದೆ. ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ರಾಜುಗೌಡ ಬಿರಾದಾರ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಕ್ಕಳ ಸಾಹಿತ್ಯ ನಿರಂತರ ಹರಿವ ನದಿ ಇದ್ದಂತೆ

ಚಡಚಣ ತಾಲೂಕು ಕಾ.ನಿ.ಪನೂತನ ಪದಾಧಿಕಾರಿಗಳಿಗೆ ಸನ್ಮಾನ

ಕದಂಬ ಸೈನ್ಯ ಜಿಲ್ಲಾಧ್ಯಕ್ಷರಾಗಿ ಹಿರೇಮಠ ನೇಮಕ

ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ವಾಲಿ ಚನ್ನಪ್ಪ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಕ್ಕಳ ಸಾಹಿತ್ಯ ನಿರಂತರ ಹರಿವ ನದಿ ಇದ್ದಂತೆ
    In (ರಾಜ್ಯ ) ಜಿಲ್ಲೆ
  • ಚಡಚಣ ತಾಲೂಕು ಕಾ.ನಿ.ಪನೂತನ ಪದಾಧಿಕಾರಿಗಳಿಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಕದಂಬ ಸೈನ್ಯ ಜಿಲ್ಲಾಧ್ಯಕ್ಷರಾಗಿ ಹಿರೇಮಠ ನೇಮಕ
    In (ರಾಜ್ಯ ) ಜಿಲ್ಲೆ
  • ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ವಾಲಿ ಚನ್ನಪ್ಪ
    In ವಿಶೇಷ ಲೇಖನ
  • ಅತಿಯಾದ ಯೋಚನೆಗೆ ಹಾಕಿ ಪೂರ್ಣ ವಿರಾಮ
    In ವಿಶೇಷ ಲೇಖನ
  • ಕೃಷಿ ಅಧಿಕಾರಿ ಮನೆ ಮೇಲೆ ದಾಳಿ: ರೂ.2.5 ಕೋಟಿ ಅಕ್ರಮ ಆಸ್ತಿ ಪತ್ತೆ
    In (ರಾಜ್ಯ ) ಜಿಲ್ಲೆ
  • ದೌರ್ಜನ್ಯ ಪ್ರಕರಣ ಗಂಭೀರವಾಗಿ ಪರಿಗಣಿಸಿ ಇತ್ಯರ್ಥಗೊಳಿಸಿ
    In (ರಾಜ್ಯ ) ಜಿಲ್ಲೆ
  • ಯಶಸ್ಸು ಸಾಧನೆಗೆ ಆಧ್ಯಾತ್ಮಿಕತೆ ನೆರವು :ಮೋಕ್ಷಾನಂದಜಿ
    In (ರಾಜ್ಯ ) ಜಿಲ್ಲೆ
  • ಬೆಂಬಲ ಬೆಲೆ ಯೋಜನೆ: ಮೆಕ್ಕೆಜೋಳ ಖರೀದಿಗೆ ರೈತರಿಂದ ನೋಂದಣಿ
    In (ರಾಜ್ಯ ) ಜಿಲ್ಲೆ
  • ಬೂದಿ ತುಂಬಿದ ವಾಹನಗಳಿಂದ ವಾಯು ಮಾಲಿನ್ಯ ತಡೆಗಟ್ಟಲು ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.