ಸಿಂದಗಿ: ನೂರಾರು ಕಿಲೋಮೀಟರ್ ದೂರದಿಂದ, ನೂರಾರೂ ಅಡಿ ಆಳದಲ್ಲಿರುವ ಜಲಮೂಲಗಳಿಂದ ಮನೆ ಮನೆಗೆ ಕುಡಿಯುವ ನೀರು ಪೂರೈಕೆಯಾಗುತ್ತಿದೆ. ಇಷ್ಟೆಲ್ಲ ಪರಿಶ್ರಮದೊಂದಿಗೆ ಲಭ್ಯವಾಗುವ ಜೀವ ಜಲವನ್ನು ಮಿತವಾಗಿ ಬಳಸುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಮಕ್ಕಳ ಕಲ್ಯಾಣ ಪ್ರತಿಷ್ಠಾನದ ಕಾರ್ಯದರ್ಶಿ ಡಾ.ಜ್ಯೋತಿ ಪೂಜಾರ ಹೇಳಿದರು.
ಪಟ್ಟಣದ ಮಕ್ಕಳ ಕಲ್ಯಾಣ ಪ್ರತಿಷ್ಠಾನದ ಕ್ರಿಯೇಟಿವ್ ಕಿಡ್ಸ್ ಹೋಮ್ನಲ್ಲಿ ಶುಕ್ರವಾರ ಹಮ್ಮಿಕೊಂಡ ವಿಶ್ವ ಜಲ ದಿನ ಆಚರಣೆ ಕಾರ್ಯಕ್ರಮದಲ್ಲಿ ಸಸಿಗೆ ನೀರುಣಿಸಿ ಮಾತನಾಡಿದರು.
ವಿಶ್ವ ಜಲ ದಿನದ ಈ ವರ್ಷದ ಥೀಮ್ ಶಾಂತಿಗಾಗಿ ನೀರು. ಇದು ಪ್ರಪಂಚದ ಸ್ಥಿರತೆ ಮತ್ತು ಸಮೃದ್ಧಿಯಲ್ಲಿ ನೀರು ವಹಿಸುವ ನಿರ್ಣಾಯಕ ಪಾತ್ರವನ್ನು ಕೇಂದ್ರೀಕರಿಸುತ್ತದೆ. ಭೂಮಿ ಮೇಲಿನ ಎಲ್ಲ ಜೀವರಾಶಿಗಳಿಗೆ ನೀರು ಅತ್ಯವಶ್ಯ. ರೈತಾಪಿ ವರ್ಗ ಸೇರಿದಂತೆ ಪ್ರತಿಯೊಬ್ಬರೂ ಜೀವ ದ್ರವ್ಯ ಮಳೆಯನ್ನೇ ನಂಬಿಕೊಂಡಿದ್ದಾರೆ. ಹಾಗಾಗಿ ಮಿತ ಪ್ರಮಾಣದಲ್ಲಿ ನೀರು ಸದ್ಬಳಕೆಯಾಗಬೇಕು ಎಂದು ಹೇಳಿದರು.
ಈ ವೇಳೆ ಶಿಕ್ಷಕಿಯರಾದ ಅಶ್ವಿನಿ ಲೋಣಿ, ಮಂಗಲಾ ಬಮ್ಮಣ್ಣಿ, ಸೇರಿದಂತೆ ಸಿಬ್ಬಂದಿಗಳಾದ ಶ್ರೀಶೈಲ ಹೂಗಾರ, ಅಂಬಿಕಾ ಕರಿಶೆಟ್ಟಿ ಹಾಗೂ ಮಕ್ಕಳು ಭಾಗವಹಿಸಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

