Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಕ್ಕಳ ಸಾಹಿತ್ಯ ನಿರಂತರ ಹರಿವ ನದಿ ಇದ್ದಂತೆ

ಚಡಚಣ ತಾಲೂಕು ಕಾ.ನಿ.ಪನೂತನ ಪದಾಧಿಕಾರಿಗಳಿಗೆ ಸನ್ಮಾನ

ಕದಂಬ ಸೈನ್ಯ ಜಿಲ್ಲಾಧ್ಯಕ್ಷರಾಗಿ ಹಿರೇಮಠ ನೇಮಕ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹೋಳಿ ಹಬ್ಬದ ಸಂಭ್ರಮಕ್ಕೆ ಕ್ಷಣ ಗಣನೆ
(ರಾಜ್ಯ ) ಜಿಲ್ಲೆ

ಹೋಳಿ ಹಬ್ಬದ ಸಂಭ್ರಮಕ್ಕೆ ಕ್ಷಣ ಗಣನೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

– ಬಸವರಾಜ ನಂದಿಹಾಳ
ಬಸವನಬಾಗೇವಾಡಿ: ನಾಡಿನಲ್ಲಿ ಹೋಳಿ ಹಬ್ಬಕ್ಕೆ ಅದರದೇ ವಿಶೇಷ ಸ್ಥಾನವಿದೆ. ಪಟ್ಟಣದಲ್ಲಿ ಮಾ.೨೪ ರಂದು ಭಾನುವಾರ ಹೋಳಿ ಹುಣ್ಣಿಮೆ ಆಚರಿಸುತ್ತಿರುವುದರಿಂದ ಸಂಜೆ ಪಟ್ಟಣದ ವಿವಿಧೆಡೆಗಳಲ್ಲಿ ಸಂಜೆ ಕಾಮದಹನ ನಡೆಯಲಿದೆ.
ಕಾಮದಹನ ಮಾಡಲು ವಿವಿಧ ಗಲ್ಲಿಯವರು ಅಗತ್ಯ ಸಿದ್ಧತೆ ಮಾಡಿಕೊಳ್ಳಲು ಅಗತ್ಯ ತಯಾರಿಯಲ್ಲಿದ್ದಾರೆ. ನಾಳೆ ಸಂಜೆಯೊಳಗೆ ಕಾಮದಹನ ಮಾಡುವ ಸ್ಥಳವನ್ನು ಸ್ವಚ್ಛಗೊಳಿಸಿ ವಿವಿಧ ರಂಗೋಲಿಗಳನ್ನು ಹಾಕಿದ ನಂತರ ಕಟ್ಟಿಗೆಗಳನ್ನು ಒಟ್ಟಿ ನಡುವೆ ಔಡಲಗಿಡವನ್ನು ಇಟ್ಟು ಕಾಮದೇವರಿಗೆ ಪೂಜೆ ಸಲ್ಲಿಸಿ ನೈವೇದ್ಯ ಹಿಡಿದ ನಂತರ ಕಾಮದಹನ ಮಾಡುವುದು ಮೊದಲಿನಿಂದಲೂ ನಡೆದುಕೊಂಡು ಬಂದ ಸಂಪ್ರದಾಯ. ಕಾಮದಹನ ಮಾಡಿದ ಮರುದಿನ ಎಲ್ಲೆಡೆ ಬಣ್ಣದಾಟವನ್ನು ಆಡುವುದು ರೂಢಿಯಲ್ಲಿದೆ. ಮಾ.೨೫ ರಂದು ಪಟ್ಟಣದಲ್ಲಿ ಬಣ್ಣದೋಕುಳಿ ನಡೆಯಲಿದೆ. ಕೆಲವೆಡೆ ಮಾ.26 ರಂದು ಬಣ್ಣದಾಟವಿದೆ ತಿಳಿದುಬಂದಿದೆ.
ಪಟ್ಟಣದಲ್ಲಿ ಶಿವರಾತ್ರಿ ಮುಗಿದ ನಂತರ ಹೋಳಿ ಹಬ್ಬದ ಹಲಗೆ ನಿನಾದ ಗಲ್ಲಿ ಗಲ್ಲಿಗಳಲ್ಲಿ ಕೇಳಿಬರುತ್ತಿದೆ. ಚಿಕ್ಕಮಕ್ಕಳು ಹಲಗೆ ಬಾರಿಸುತ್ತಾ ಸಂತಸ ಪಡುತ್ತಿದ್ದಾರೆ. ಈಗಾಗಲೇ ಪ್ರಾಥಮಿಕ ಹಂತದ ಮಕ್ಕಳ ಪರೀಕ್ಷೆಗಳು ಮುಗಿದ ಹಿನ್ನೆಲೆಯಲ್ಲಿ ಹೆಚ್ಚು ಸಂಖ್ಯೆಯಲ್ಲಿ ಮಕ್ಕಳು ಹಲಗೆ ಬಾರಿಸುವದರಲ್ಲಿ ನಿರತರಾಗಿದ್ದಾರೆ.
ಕಳೆದ ಕೆಲ ದಿನಗಳಿಂದ ಕಾಮದಹನ ಮಾಡಲು ಬೇಕಾದ ಕಟ್ಟಿಗೆಗಳನ್ನು ಸಂಗ್ರಹಿಸುವ ಕಾರ್ಯದಲ್ಲಿ ಮಕ್ಕಳು ತೊಡಗಿಕೊಂಡಿದ್ದಾರೆ. ಭಾನುವಾರ ಸಂಜೆ ಕಾಮದಹನ ನಡೆಯಲಿದೆ. ಮಾ. ೨೫ ರಂದು ಬಣ್ಣದಾಟ ಇರಲಿದೆ. ಐದು ದಿನಗಳ ನಂತರ ಮಾ.೨೯ ರಂಗಪಂಚಮಿ ದಿನದಂದು ಮತ್ತೆ ಬಣ್ಣದೋಕುಳಿ ನಡೆಯಲಿದೆ. ಬಣ್ಣದಾಟದಲ್ಲಿ ರಾಸಾಯನಿಕ ಬಣ್ಣ ಬಳಕೆ ಮಾಡದೇ ಪರಿಸರ ಸ್ನೇಹಿ ಬಣ್ಣಗಳನ್ನು ಬಳಕೆ ಮಾಡುವುದು ಆರೋಗ್ಯದ ಹಿತದೃಷ್ಟಿಯಿಂದ ಒಳ್ಳೆಯದು. ಪರಿಸರ ಸ್ನೇಹಿ ಬಣ್ಣ ಬಳಕೆ ಮಾಡುವ ಮೂಲಕ ಹಿರಿಯರು,ಯುವಜನತೆ, ಮಕ್ಕಳು ಸೇರಿದಂತೆ ಎಲ್ಲರೂ ಬಣ್ಣದಾಟಕ್ಕೆ ಮೆರಗು ತರಬೇಕಿದೆ. ಪಟ್ಟಣದ ನಂದಿ ಬಡಾವಣೆ, ಗಣಪತಿ ಚೌಕ ಸೇರಿದಂತೆ ಕೆಲ ಗಲ್ಲಿಗಳಲ್ಲಿ ಬಣ್ಣದಾಟದಂದು ಹಿರಿಯರು ಸೋಗು ಹಾಕಿ ಬಣ್ಣದೋಕುಳಿಗೆ ಮೆರಗು ತರುತ್ತಾರೆ.
೫,೮,೯ ನೇ ತರಗತಿಯ ಮೌಲ್ಯಾಂಕನ ಪರೀಕ್ಷೆ ಮಾ. ೨೫ ರಿಂದ ಆರಂಭವಾಗುತ್ತಿರುವದರಿಂದಾಗಿ ಇವರು ಬಣ್ಣದೋಕುಳಿಯಿಂದ ದೂರ ಉಳಿಯಲಿದ್ದಾರೆ. ಮಾ.೨೫ ರಿಂದ ಎಸ್ಎಸ್ಎಲ್ಸಿ ಪರೀಕ್ಷೆಯು ಸಹ ಆರಂಭವಾಗಲಿದೆ. ಪರೀಕ್ಷೆಗೆ ಹೋಗುವ ಮಕ್ಕಳು ಬಣ್ಣದಾಟದಿಂದ ವಂಚಿತರಾಗಲಿದ್ದಾರೆ. ಅವರ ಪರೀಕ್ಷೆ ಉತ್ತಮವಾಗಲಿ ಎಂದು ಶುಭ ಹಾರೈಕೆ.
ಪಟ್ಟಣದಲ್ಲಿ ಮೊದಲು ಹೋಳಿ ಹಬ್ಬ ಬಂತೆಂದರೆ ಸಾಕು ಚಿಕ್ಕಮಕ್ಕಳು ಕಾಮದಹನ ಮಾಡಲು ಕಟ್ಟಿಗೆಗಳನ್ನು ಸಂಗ್ರಹಿಸುವ ಕಾರ್ಯ ಶಿವರಾತ್ರಿ ಹಬ್ಬದ ಮರುದಿನದಿಂದಲೇ ಆರಂಭಿಸುತ್ತಿದ್ದರು. ಸಾಕಷ್ಟು ಕಟ್ಟಿಗೆಗಳನ್ನು ಸಂಗ್ರಹಿಸಿ ಕಾಮದಹನಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದರು. ಹಿರಿಯರು ಹೆಚ್ಚು ಸಂಖ್ಯೆಯಲ್ಲಿ ಹೋಳಿ ಹಬ್ಬದಲ್ಲಿ ಭಾಗವಹಿಸುವ ಮೂಲಕ ಹೋಳಿ ಹಬ್ಬಕ್ಕೆ ಮೆರಗು ತರುತ್ತಿದ್ದರು. ಈಚೆಗೆ ಇದು ಕಡಿಮೆಯಾಗಿರುವದು ಕಂಡುಬರುತ್ತಿದೆ. ಸಂಪ್ರದಾಯದಂತೆ ಕಾಮದಹನ ಮಾಡಲಾಗುತ್ತಿದೆ. ಈ ವರ್ಷವಾದರೂ ಹೋಳಿ ಹಬ್ಬದಲ್ಲಿ ಹಿರಿಯರು ಸೇರಿದಂತೆ ಎಲ್ಲರೂ ಭಾಗವಹಿಸುವ ಮೂಲಕ ಹೋಳಿ ಹಬ್ಬಕ್ಕೆ ಮೆರಗು ತರುವರೇ ಎಂದು ಕಾಯ್ದುನೋಡಬೇಕಷ್ಟೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಕ್ಕಳ ಸಾಹಿತ್ಯ ನಿರಂತರ ಹರಿವ ನದಿ ಇದ್ದಂತೆ

ಚಡಚಣ ತಾಲೂಕು ಕಾ.ನಿ.ಪನೂತನ ಪದಾಧಿಕಾರಿಗಳಿಗೆ ಸನ್ಮಾನ

ಕದಂಬ ಸೈನ್ಯ ಜಿಲ್ಲಾಧ್ಯಕ್ಷರಾಗಿ ಹಿರೇಮಠ ನೇಮಕ

ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ವಾಲಿ ಚನ್ನಪ್ಪ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಕ್ಕಳ ಸಾಹಿತ್ಯ ನಿರಂತರ ಹರಿವ ನದಿ ಇದ್ದಂತೆ
    In (ರಾಜ್ಯ ) ಜಿಲ್ಲೆ
  • ಚಡಚಣ ತಾಲೂಕು ಕಾ.ನಿ.ಪನೂತನ ಪದಾಧಿಕಾರಿಗಳಿಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಕದಂಬ ಸೈನ್ಯ ಜಿಲ್ಲಾಧ್ಯಕ್ಷರಾಗಿ ಹಿರೇಮಠ ನೇಮಕ
    In (ರಾಜ್ಯ ) ಜಿಲ್ಲೆ
  • ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ವಾಲಿ ಚನ್ನಪ್ಪ
    In ವಿಶೇಷ ಲೇಖನ
  • ಅತಿಯಾದ ಯೋಚನೆಗೆ ಹಾಕಿ ಪೂರ್ಣ ವಿರಾಮ
    In ವಿಶೇಷ ಲೇಖನ
  • ಕೃಷಿ ಅಧಿಕಾರಿ ಮನೆ ಮೇಲೆ ದಾಳಿ: ರೂ.2.5 ಕೋಟಿ ಅಕ್ರಮ ಆಸ್ತಿ ಪತ್ತೆ
    In (ರಾಜ್ಯ ) ಜಿಲ್ಲೆ
  • ದೌರ್ಜನ್ಯ ಪ್ರಕರಣ ಗಂಭೀರವಾಗಿ ಪರಿಗಣಿಸಿ ಇತ್ಯರ್ಥಗೊಳಿಸಿ
    In (ರಾಜ್ಯ ) ಜಿಲ್ಲೆ
  • ಯಶಸ್ಸು ಸಾಧನೆಗೆ ಆಧ್ಯಾತ್ಮಿಕತೆ ನೆರವು :ಮೋಕ್ಷಾನಂದಜಿ
    In (ರಾಜ್ಯ ) ಜಿಲ್ಲೆ
  • ಬೆಂಬಲ ಬೆಲೆ ಯೋಜನೆ: ಮೆಕ್ಕೆಜೋಳ ಖರೀದಿಗೆ ರೈತರಿಂದ ನೋಂದಣಿ
    In (ರಾಜ್ಯ ) ಜಿಲ್ಲೆ
  • ಬೂದಿ ತುಂಬಿದ ವಾಹನಗಳಿಂದ ವಾಯು ಮಾಲಿನ್ಯ ತಡೆಗಟ್ಟಲು ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.