Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಕ್ಕಳ ಸಾಹಿತ್ಯ ನಿರಂತರ ಹರಿವ ನದಿ ಇದ್ದಂತೆ

ಚಡಚಣ ತಾಲೂಕು ಕಾ.ನಿ.ಪನೂತನ ಪದಾಧಿಕಾರಿಗಳಿಗೆ ಸನ್ಮಾನ

ಕದಂಬ ಸೈನ್ಯ ಜಿಲ್ಲಾಧ್ಯಕ್ಷರಾಗಿ ಹಿರೇಮಠ ನೇಮಕ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬೇಡಿಕೆ ಈಡೇರುವವರೆಗೆ ಸತ್ಯಾಗ್ರಹ ಜಾಗೆ ಬಿಟ್ಟು ಕದಲೊಲ್ಲ :ಬಿರಾದಾರ
(ರಾಜ್ಯ ) ಜಿಲ್ಲೆ

ಬೇಡಿಕೆ ಈಡೇರುವವರೆಗೆ ಸತ್ಯಾಗ್ರಹ ಜಾಗೆ ಬಿಟ್ಟು ಕದಲೊಲ್ಲ :ಬಿರಾದಾರ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಗಬಸಾವಳಗಿ & ಬಿಸನಾಳ ಸಿಂದಗಿ ತಾಲೂಕಿನಲ್ಲಿ ಮುಂದುವರೆಸಲು ಆಗ್ರಹಿಸಿ ಉಪವಾಸ ಸತ್ಯಾಗ್ರಹ

ಸಿಂದಗಿ: ಬೇಡಿಕೆ ಈಡೇರುವವರೆಗೆ ಸತ್ಯಾಗ್ರಹ ಜಾಗೆ ಬಿಟ್ಟು ಕದಲುವುದಿಲ್ಲ, ಅಧಿಕಾರಿಗಳಿಗೆ ಹೇಳಿ ಹೇಳಿ ಸಾಕಾಗಿದೆ, ಮನವಿಯನ್ನೂ ಸಲ್ಲಿಸಲಾಗಿದೆ, ಸಮಸ್ಯೆಗೆ ಸ್ಪಂದನೆ ಸಿಕ್ಕಿಲ್ಲ ನಾಳೆಯಿಂದ ಉಪವಾಸ ಆಮರಣಾಂತ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದು ಮುಖಂಡ ಬಂಗಾರೆಪ್ಪಗೌಡ ಬಿರಾದಾರ ಹೇಳಿದರು.
ಆಲಮೇಲ ತಾಲೂಕಿಗೆ ಸೇರ್ಪಡೆಯಾದ ಗಬಸಾವಳಗಿ ಹಾಗೂ ಬಿಸಾನಾಳ ಗ್ತಾಮವನ್ನು ಮರಳಿ ಸಿಂದಗಿ ತಾಲೂಕಿಗೆ ಮುಂದು ವರೆಸುವಂತೆ ಪಟ್ಟಣದ ಖಾಸಗಿ ಹೋಟಲ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ಲೋಕಸಭೆ ಚುನಾವಣೆಯಲ್ಲಿ ನಾವ್ಯಾರೂ ಹಕ್ಕು ಚಲಾಯಿಸುವುದಿಲ್ಲ, ಹೋರಾಟ ನಿಲ್ಲಿಸುವುದಿಲ್ಲ. ಆಲಮೇಲ ಪಟ್ಟಣ ತಾಲೂಕಾಗಿ ಪರಿವರ್ತನೆಯಾಗುತ್ತಿದ್ದಂತೆ ಗಬಸಾವಳಗಿ ಹಾಗೂ ಬಿಸನಾಳ ಗ್ರಾಮಗಳನ್ನು ಸಮೀಪದ ಸಿಂದಗಿಯನ್ನು ಬಿಟ್ಟು ಆಲಮೇಲ ತಾಲೂಕಿಗೆ ಸೇರಿಸಿರುವುದೇ ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. ಇದರಿಂದ ಗಬಸಾವಳಗಿಯಲ್ಲಿ ಉಭಯ ಗ್ರಾಮಸ್ಥರು ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದ್ದಾರೆ. ನ್ಯಾಯಾಲಯ, ತಾಲೂಕು ಕಚೇರಿ ಕೆಲಸಗಳಿಗೆ ೪೦ ಕಿ.ಮೀ.ದೂರದ ಆಲಮೇಲ ಪಟ್ಟಣಕ್ಕೆ ತೆರಳಬೇಕಾಗಿದೆ. ವೃದ್ಧರು, ಮಹಿಳೆಯರು, ವಿದ್ಯಾರ್ಥಿಗಳು ಯಾವುದೇ ಪ್ರಮಾಣ ಪತ್ರ ಅಥವಾ ಸರ್ಕಾರಿ ಸೌಲಭ್ಯ ಪಡೆಯಲು ಆಲಮೇಲಕ್ಕೆ ಅಲೆದಾಡಿ ಸಾಕಾಗಿದೆ. ಬರದಿಂದ ಮೊದಲೇ ಕಂಗೆಟ್ಟಿರುವ ನಮಗೆ ಈ ಅಲೆದಾಟ ಹೊರೆಯಾಗಿದೆ. ನಮ್ಮೂರಿಂದ ಆಲಮೇಲಕ್ಕೆ ಸರಿಯಾದ ವಾಹನ ಸೌಲಭ್ಯಗಳೂ ಇಲ್ಲ. ಸರ್ಕಾರ ನಿಯಮಗಳನ್ನು ಸಾರ್ವಜನಿಕರ ಹಿತಕ್ಕಾಗಿ ರೂಪಿಸಬೇಕು ಸಿಂದಗಿ ಪಟ್ಟಣ ಕೇವಲ ೧೩ ಕಿ.ಮೀ.ದೂರದಲ್ಲಿದ್ದು, ಎರಡು ಗ್ರಾಮಗಳನ್ನು ಸಿಂದಗಿ ತಾಲೂಕು ವ್ಯಾಪ್ತಿಗೆ ಸೇರಿಸಬೇಕು. ಇದರಿಂದ ನಿತ್ಯದ ಕೆಲಸಗಳಿಗೆ ಅನುಕೂಲವಾಗುತ್ತದೆ ಎಂಬುದು ಗ್ರಾಮಸ್ಥರ ಬೇಡಿಕೆಯಾಗಿದೆ. ಈ ಕುರಿತು ಸಂಬಂಧಿಸಿದ ಜನಪ್ರತಿನಿಧಿಗಳು, ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ತಾಲೂಕು ಆಡಳಿತಕ್ಕೆ ಮನವಿ ಸಲ್ಲಿಸಿದರೂ ಕ್ಯಾರೆ ಎನ್ನುತ್ತಿಲ್ಲ. ಅನಿವಾರ್ಯ ಕಾರಣಗಳಿಂದ ಹೋರಾಟದ ಹಾದಿ ಹಿಡಿಯಬೇಕಾಗಿದೆ. ನ್ಯಾಯ ಸಿಗುವವರೆಗೆ ಅಮರಣಾಂತ ಉಪವಾಸ ಸತ್ಯಾಗ್ರಹ ಮುಂದುವರಿಯಲಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಭುಗೌಡ ಬಿರಾದಾರ ಅದ್ಯಕ್ಷರು ಹೊರಾಟ ಸಮಿತಿ, ಸಾಹೇಬಗೌಡ ಬಿರಾದರ. ಬಾಬಾಗೌಡ ಬಿರಾದರ, ಶಾಂತಗೌಡ ಬಿರಾದಾರ, ಗಂಗಪ್ಪಗೌಡ ಬಿರಾದಾರ, ಶಿವಶರಣ ಹೆಳವರ, ಮಲ್ಲಯ್ಯ ಹಿರೆಮಠ, ಬಸನಗೌಡ ಬಿರಾದರ, ಬಾಬುರೆಡ್ಡಿ ಬಿರಾದರ ಸೇರಿದಂತೆ ಅನೇಕರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಕ್ಕಳ ಸಾಹಿತ್ಯ ನಿರಂತರ ಹರಿವ ನದಿ ಇದ್ದಂತೆ

ಚಡಚಣ ತಾಲೂಕು ಕಾ.ನಿ.ಪನೂತನ ಪದಾಧಿಕಾರಿಗಳಿಗೆ ಸನ್ಮಾನ

ಕದಂಬ ಸೈನ್ಯ ಜಿಲ್ಲಾಧ್ಯಕ್ಷರಾಗಿ ಹಿರೇಮಠ ನೇಮಕ

ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ವಾಲಿ ಚನ್ನಪ್ಪ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಕ್ಕಳ ಸಾಹಿತ್ಯ ನಿರಂತರ ಹರಿವ ನದಿ ಇದ್ದಂತೆ
    In (ರಾಜ್ಯ ) ಜಿಲ್ಲೆ
  • ಚಡಚಣ ತಾಲೂಕು ಕಾ.ನಿ.ಪನೂತನ ಪದಾಧಿಕಾರಿಗಳಿಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಕದಂಬ ಸೈನ್ಯ ಜಿಲ್ಲಾಧ್ಯಕ್ಷರಾಗಿ ಹಿರೇಮಠ ನೇಮಕ
    In (ರಾಜ್ಯ ) ಜಿಲ್ಲೆ
  • ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ವಾಲಿ ಚನ್ನಪ್ಪ
    In ವಿಶೇಷ ಲೇಖನ
  • ಅತಿಯಾದ ಯೋಚನೆಗೆ ಹಾಕಿ ಪೂರ್ಣ ವಿರಾಮ
    In ವಿಶೇಷ ಲೇಖನ
  • ಕೃಷಿ ಅಧಿಕಾರಿ ಮನೆ ಮೇಲೆ ದಾಳಿ: ರೂ.2.5 ಕೋಟಿ ಅಕ್ರಮ ಆಸ್ತಿ ಪತ್ತೆ
    In (ರಾಜ್ಯ ) ಜಿಲ್ಲೆ
  • ದೌರ್ಜನ್ಯ ಪ್ರಕರಣ ಗಂಭೀರವಾಗಿ ಪರಿಗಣಿಸಿ ಇತ್ಯರ್ಥಗೊಳಿಸಿ
    In (ರಾಜ್ಯ ) ಜಿಲ್ಲೆ
  • ಯಶಸ್ಸು ಸಾಧನೆಗೆ ಆಧ್ಯಾತ್ಮಿಕತೆ ನೆರವು :ಮೋಕ್ಷಾನಂದಜಿ
    In (ರಾಜ್ಯ ) ಜಿಲ್ಲೆ
  • ಬೆಂಬಲ ಬೆಲೆ ಯೋಜನೆ: ಮೆಕ್ಕೆಜೋಳ ಖರೀದಿಗೆ ರೈತರಿಂದ ನೋಂದಣಿ
    In (ರಾಜ್ಯ ) ಜಿಲ್ಲೆ
  • ಬೂದಿ ತುಂಬಿದ ವಾಹನಗಳಿಂದ ವಾಯು ಮಾಲಿನ್ಯ ತಡೆಗಟ್ಟಲು ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.