ವಿಜಯಪುರ: ಸೋಮವಾರ ನಡೆದ ಎಸ್ಎಸ್ಎಲ್ಸಿ ಪ್ರಥಮ ಭಾಷೆ ಪತ್ರಿಕಾ ಪರೀಕ್ಷೆ ನಿಮಿತ್ಯ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ವಿಜಯಪುರ ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು, ಮರಾಠಿ ವಿದ್ಯಾಲಯ ಹಾಗೂ ಪಿ.ಡಿ.ಜೆ ಪ್ರೌಢ ಶಾಲೆಗಳಿಗೆ ಭೇಟಿ ನೀಡಿ ಪರೀಕ್ಷಾ ಕೇಂದ್ರಗಳನ್ನು ಪರಿಶೀಲನೆ ನಡೆಸಿದರು.
ಈ ವೇಳೆ ಮೂರು ಕೇಂದ್ರಗಳಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಗೆ ಹಾಜರಾದ ಎಲ್ಲ ವಿದ್ಯಾರ್ಥಿಗಳ ಹಾಜರಾತಿ, ಪರೀಕ್ಷಾ ಕೇಂದ್ರಗಳ ಕೊಠಡಿಗಳ ಸಂಖ್ಯೆ, ವಿದ್ಯಾರ್ಥಿಗಳಿಗೆ ಆಸನ ವ್ಯವಸ್ಥೆ, ವಿಶೇಷ ಅಗತ್ಯವುಳ್ಳ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಆಸನದ ವ್ಯವಸ್ಥೆ, ಪರೀಕ್ಷಾ ಕೊಠಡಿ ಮೇಲ್ವಿಚಾರಕರ ನೇಮಕ ಮಾಡಿರುವುದು, ಪರೀಕ್ಷಾ ಕೇಂದ್ರದಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಿರುವ ಕುರಿತು, ಪರೀಕ್ಷಾ ಕೇಂದ್ರದಲ್ಲಿ ಎಲ್ಲಾ ಕೊಠಡಿಗಳಿಗೆ ಸಿಸಿ ಟಿವಿ ಮತ್ತು ವೆಬ್ ಕಾಸ್ಟಿಂಗ್ ಅಳವಡಿಸಿರುವ ಬಗ್ಗೆ, ಪರೀಕ್ಷಾ ಕೇಂದ್ರಗಳಿಗೆ ಪೋಲಿಸ್ ಭದ್ರತಾ ವ್ಯವಸ್ಥೆ ಹಾಗೂ ಆರೋಗ್ಯ ಕಾರ್ಯಕರ್ತರ ನಿಯೋಜನೆ ಮಾಡಿರುವ ಕುರಿತು ಪರಿಶೀಲಿಸಿದರು.
ಎಲ್ಲ ಕೇಂದ್ರಗಳಲ್ಲಿ ಪ್ರಶ್ನೆ ಪತ್ರಿಕೆ ಅಭಿರಕ್ಷಕರು, ಸ್ಥಾನಿಕ ಜಾಗೃತ ದಳದವರು ಹಾಗೂ ಮೊಬೈಲ್ ಸ್ವಾಧೀನಾಧಿಕಾರಿಗಳು ನಿಯಮಾನುಸಾರ ಕರ್ತವ್ಯ ನಿರ್ವಹಿಸುತ್ತಿರುವ ಕುರಿತು ಪರಿಶೀಲಿಸಿದರು. ಪರೀಕ್ಷಾ ಕೇಂದ್ರಗಳಲ್ಲಿ ಅನ್ಯ ಹಾಗೂ ಬಾಹ್ಯ ವ್ಯಕ್ತಿಗಳು ಇಲ್ಲದೇ ಇರುವುದನ್ನೂ ಸಹ ಪರಿಶೀಲಿಸಿದರು.
ಈ ವೇಳೆ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಸಮಸ್ಯೆಗಳು ಉಂಟಾಗದಂತೆ ಪರೀಕ್ಷೆಗಳನ್ನು ಕಟ್ಟು-ನಿಟ್ಟಾಗಿ ಶಿಸ್ತಿನಿಂದ ನಡೆಸುವುದು, ಭದ್ರತೆ ಒದಗಿಸುವುದು, ಮಕ್ಕಳು ಭಯಮುಕ್ತ ಪ್ರಶಾಂತ ವಾತಾವರಣದಲ್ಲಿ ಆತ್ಮ ವಿಶ್ವಾಸದಿಂದ ಪರೀಕ್ಷೆ ಬರೆಯುವ ವಿದ್ಯಾರ್ಥಿ ಸ್ನೇಹಿ ಪರೀಕ್ಷಾ ವ್ಯವಸ್ಥೆಯನ್ನು ನಿರ್ಮಿಸಲು ಅಗತ್ಯ ಕ್ರಮ ವಹಿಸಬೇಕು ಎಂದು ಸ್ಥಳದಲ್ಲಿದ್ದ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರಾದ ಎಮ್.ಎ ಆಲೂರ, ಎಸ್. ಎಸ್ ಖಾದ್ರಿ, ಎನ್. ಬಿ ಶರ್ಮಾ ಹಾಗೂ ಸಿಬ್ಬಂದಿ ವರ್ಗದವರು ಇದ್ದರು
Subscribe to Updates
Get the latest creative news from FooBar about art, design and business.
Related Posts
Add A Comment

