Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಕ್ಕಳ ಸಾಹಿತ್ಯ ನಿರಂತರ ಹರಿವ ನದಿ ಇದ್ದಂತೆ

ಚಡಚಣ ತಾಲೂಕು ಕಾ.ನಿ.ಪನೂತನ ಪದಾಧಿಕಾರಿಗಳಿಗೆ ಸನ್ಮಾನ

ಕದಂಬ ಸೈನ್ಯ ಜಿಲ್ಲಾಧ್ಯಕ್ಷರಾಗಿ ಹಿರೇಮಠ ನೇಮಕ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಪುರಸಭೆ ನಿರ್ಲಕ್ಷ್ಯದಿಂದ ನಲ್ಲಿ ನೀರು ಚರಂಡಿ ಪಾಲು!
(ರಾಜ್ಯ ) ಜಿಲ್ಲೆ

ಪುರಸಭೆ ನಿರ್ಲಕ್ಷ್ಯದಿಂದ ನಲ್ಲಿ ನೀರು ಚರಂಡಿ ಪಾಲು!

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ನಲ್ಲಿಗಳಿಂದ ಪೋಲಾಗುತ್ತಿರುವ ನೀರು | ಕಂಡು ಕಾಣದಂತಿರುವ ಅಧಿಕಾರಿಗಳು | ಸಾರ್ವಜನಿಕರ ಆಕ್ರೋಶ

*– ರಶ್ಮಿ ನೂಲಾನವರ*

ಸಿಂದಗಿ: ರಾಜ್ಯದಲ್ಲಿ ಈಗಾಗಲೇ ಬರಗಾಲದ ಛಾಯೆ ಆವರಿಸಿದೆ. ಹಲವು ಕಡೆಗಳಲ್ಲಿ ಹನಿ ನೀರಿಗೂ ಹಾಹಾಕಾರ ಉಂಟಾಗಿದೆ. ಆದರೆ ಸಿಂದಗಿ ಪಟ್ಟಣದ ಪುರಸಭೆಯ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿತನದಿಂದ ನಳ ಬಿಟ್ಟಾಗೊಮ್ಮೆ ನೀರು ಚರಂಡಿ ಮತ್ತು ರಸ್ತೆಯ ಪಾಲಾಗುತ್ತಿದೆ. ಹೌದು. ಪಟ್ಟಣದ ಬಂದಾಳ ರಸ್ತೆಯಲ್ಲಿ ಫೈಪ್‌ಗಳು ಒಡೆದು ಹೋಗಿದ್ದರೂ ಪುರಸಭೆ ಇದುವರೆಗೆ ದುರಸ್ತಿ ಮಾಡುವ ಕೆಲಸ ಮಾಡಿಲ್ಲ. ಇದರಿಂದ ನೀರು ರಸ್ತೆಯಲ್ಲಿ ಪೋಲಾಗುತ್ತಿದೆ.
ಈ ಬಗ್ಗೆ ಪುರಸಭೆ ಅಧಿಕಾರಿಗಳಿಗೆ ಹಲವು ಬಾರಿ ಹೇಳಿದರೂ ಇದುವರೆಗೆ ಯಾವುದೇ ಕ್ರಮ ಕೈಗೊಳ್ಳದೇ ಉಢಾಪೆ ಉತ್ತರ ನೀಡುತ್ತಿದ್ದಾರೆಂದು ಸಾರ್ವಜನಿಕರು ದೂರಿದ್ದಾರೆ. ಇದು ಕೇವಲ ಬಂದಾಳ ರಸ್ತೆಯ ಕಥೆಯಷ್ಟೇ ಅಲ್ಲ. ಪಟ್ಟಣದ ಹಲವು ಓಣಿಗಳಲ್ಲಿ ಇದೇ ದುಸ್ಥಿತಿಯಿದೆ. ಈ ಬಗ್ಗೆ ಪುರಸಭೆ ಜನಪ್ರತಿನಿಧಿಗಳಾಗಲಿ, ಅಧಿಕಾರಿಗಳಾಗಲಿ ಕ್ರಮ ಕೈಗೊಳ್ಳುವುದಿರಲಿ ಚರ್ಚೆ ಕೂಡ ಮಾಡುತ್ತಿಲ್ಲ ಎಂದು ಜನರು ಹಿಡಿಶಾಪ ಹಾಕುತ್ತಿದ್ದಾರೆ.
      ಈ ವರ್ಷ ವರುಣನ ಕಠೋರತನ ನೋಡಿದರೆ ಬೇಸಿಗೆಯನ್ನು ಹೇಗೆ ಎದುರಿಸುವುದು ಎಂಬ ಚಿಂತೆ ಜನರಲ್ಲಿ ಪ್ರಾರಂಭವಾಗಿದೆ. ಪುರಸಭೆ ಈಗಿನಿಂದಲೇ ನೀರಿನ ಬಗ್ಗೆ ಅಗತ್ಯ ಕ್ರಮ ಕೈಗೊಂಡರೆ ಒಳಿತು ಎಂಬುದು ಪ್ರಜ್ಞಾವಂತ ನಾಗರಿಕರ ಅಭಿಪ್ರಾಯ.
ಪುರಸಭೆ ಅಧಿಕಾರಿಗಳು ಈಗಲೇ ನೀರಿನ ಮಿತ ಬಳಕೆಗೆ ಮುಂದಾಗಬೇಕು. ಒಂದು ವೇಳೆ ಇದೇ ರೀತಿ ನೀರು ರಸ್ತೆಯ ಮೇಲೆ ಅಥವಾ ಚರಂಡಿ ತುಂಬಿ ಹರಿಯುತ್ತಿದ್ದರೆ ಖಾಲಿ ಕೊಡದೊಂದಿಗೆ ಪುರಸಭೆ ಎದುರು ಧರಣಿ ಕುಳಿತುಕೊಳ್ಳುವ ಸ್ಥಿತಿ ಎದುರಾಗಬಹುದು.
*ಮೊಬೈಲ್ ಕರೆ ಸ್ವೀಕಾರ ಇಲ್ಲ:* ನೀರಿನ ಪೈಪು ಒಡೆದಿರುವ ಮತ್ತು ಇತರೆ ಸಮಸ್ಯೆಗಳ ಕುರಿತು ದೂರು ನೀಡಲು ಸಾರ್ವಜನಿಕರು ಕರೆ ಮಾಡಿದರೆ ಅಧಿಕಾರಿಗಳು ಕರೆ ಸ್ವೀಕಾರ ಮಾಡುವುದಿಲ್ಲ ಎಂಬುದು ದೂರುಗಳು ಕೇಳಿ ಬಂದಿವೆ.
*ನೀರಿನ ಪೈಪ್‌ಲೈನ್ ಸೋರಿಕೆ:*
ನೀರಿನ ಪೈಪ್‌ಗಳು ಸೋರಿಕೆಯಾಗಿ ಅಪಾರ ಪ್ರಮಾಣದ ನೀರು ಪೋಲಾಗಿ ಜನರ ಸಂಕಷ್ಟವನ್ನು ಹೆಚ್ಚಿಸಿದೆ. ಅಮೂಲ್ಯವಾದ ನೀರು ವ್ಯರ್ಥವಾಗುತ್ತಿದ್ದರೂ ಪುರಸಭೆ ಗಮನಹರಿಸದೇ ಸೋರಿಕೆಯನ್ನು ಸರಿಪಡಿಸುತ್ತಿಲ್ಲ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ.
*ಅಧಿಕಾರಿಗಳ ನಿರ್ಲಕ್ಷ್ಯ ಹೊಸದಲ್ಲ:*
ಹಲವಾರು ಸಂದರ್ಭಗಳಲ್ಲಿ ಹಲವು ಕಡೆಗಳಲ್ಲಿ ನೀರು ಪೋಲಾಗುತ್ತಿದ್ದರೂ ಅಧಿಕಾರಿಗಳು ಗಮನ ಹರಿಸಿಲ್ಲ. ಒಳಚರಂಡಿ ಕಾಮಗಾರಿ ನಡೆಸುತ್ತಿದ್ದಾಗ ನೀರಿನ ಪೈಪ್ ಒಡೆದು ಅಪಾರ ಪ್ರಮಾಣದ ನೀರು ಪೋಲಾಗುತ್ತಿವೆ. ಇಂತಹ ನಿರ್ಲಕ್ಷ್ಯದ ಹೊರತಾಗಿಯೂ, ಪುರಸಭೆ ಅಧಿಕಾರಿಗಳು ಎಂದಿಗೂ ಪಾಠ ಕಲಿಯುವುದಿಲ್ಲ ಎಂಬುದು ಅತ್ಯಂತ ನೋವಿನ ಸಂಗತಿಯಾಗಿದೆ ಎಂದು ಜನರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.
*ಬೇಕಾಬಿಟ್ಟಿ ನೀರು ಸರಬರಾಜು:* ನಿಗದಿತ ಸಮಯಕ್ಕೆ ನೀರು ಪೂರೈಕೆ ಪ್ರಾರಂಭಿಸುವ ಪುರಸಭೆ ಸಿಬ್ಬಂದಿ ನಿಗದಿತ ಸಮಯಕ್ಕೆ ಬಂದ್ ಮಾಡುವುದನ್ನು ಮರೆಯುತ್ತಾರೆ. ಹೀಗಾಗಿ ನೀರು ರಸ್ತೆಯ ಮೇಲೆ ಅಥವಾ ಚರಂಡಿಯಲ್ಲಿ ಹರಿದು ಪೋಲಾಗುತ್ತಿದೆ. ಕೆಲವೊಮ್ಮೆ ನಿಗದಿತ ಸಮಯಕ್ಕಿಂತ ಬೇಗ ಬಂದ್ ಮಾಡಿ ಮತ್ತೊಂದು ಭಾಗಕ್ಕೆ ಪೂರೈಕೆ ಮಾಡುತ್ತಾರೆ. ಇದು ಸಾರ್ವಜನಿಕರ ಕಂಗೆಣ್ಣಿಗೆ ಗುರಿಯಾಗಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಕ್ಕಳ ಸಾಹಿತ್ಯ ನಿರಂತರ ಹರಿವ ನದಿ ಇದ್ದಂತೆ

ಚಡಚಣ ತಾಲೂಕು ಕಾ.ನಿ.ಪನೂತನ ಪದಾಧಿಕಾರಿಗಳಿಗೆ ಸನ್ಮಾನ

ಕದಂಬ ಸೈನ್ಯ ಜಿಲ್ಲಾಧ್ಯಕ್ಷರಾಗಿ ಹಿರೇಮಠ ನೇಮಕ

ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ವಾಲಿ ಚನ್ನಪ್ಪ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಕ್ಕಳ ಸಾಹಿತ್ಯ ನಿರಂತರ ಹರಿವ ನದಿ ಇದ್ದಂತೆ
    In (ರಾಜ್ಯ ) ಜಿಲ್ಲೆ
  • ಚಡಚಣ ತಾಲೂಕು ಕಾ.ನಿ.ಪನೂತನ ಪದಾಧಿಕಾರಿಗಳಿಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಕದಂಬ ಸೈನ್ಯ ಜಿಲ್ಲಾಧ್ಯಕ್ಷರಾಗಿ ಹಿರೇಮಠ ನೇಮಕ
    In (ರಾಜ್ಯ ) ಜಿಲ್ಲೆ
  • ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ವಾಲಿ ಚನ್ನಪ್ಪ
    In ವಿಶೇಷ ಲೇಖನ
  • ಅತಿಯಾದ ಯೋಚನೆಗೆ ಹಾಕಿ ಪೂರ್ಣ ವಿರಾಮ
    In ವಿಶೇಷ ಲೇಖನ
  • ಕೃಷಿ ಅಧಿಕಾರಿ ಮನೆ ಮೇಲೆ ದಾಳಿ: ರೂ.2.5 ಕೋಟಿ ಅಕ್ರಮ ಆಸ್ತಿ ಪತ್ತೆ
    In (ರಾಜ್ಯ ) ಜಿಲ್ಲೆ
  • ದೌರ್ಜನ್ಯ ಪ್ರಕರಣ ಗಂಭೀರವಾಗಿ ಪರಿಗಣಿಸಿ ಇತ್ಯರ್ಥಗೊಳಿಸಿ
    In (ರಾಜ್ಯ ) ಜಿಲ್ಲೆ
  • ಯಶಸ್ಸು ಸಾಧನೆಗೆ ಆಧ್ಯಾತ್ಮಿಕತೆ ನೆರವು :ಮೋಕ್ಷಾನಂದಜಿ
    In (ರಾಜ್ಯ ) ಜಿಲ್ಲೆ
  • ಬೆಂಬಲ ಬೆಲೆ ಯೋಜನೆ: ಮೆಕ್ಕೆಜೋಳ ಖರೀದಿಗೆ ರೈತರಿಂದ ನೋಂದಣಿ
    In (ರಾಜ್ಯ ) ಜಿಲ್ಲೆ
  • ಬೂದಿ ತುಂಬಿದ ವಾಹನಗಳಿಂದ ವಾಯು ಮಾಲಿನ್ಯ ತಡೆಗಟ್ಟಲು ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.