Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಕ್ಕಳ ಸಾಹಿತ್ಯ ನಿರಂತರ ಹರಿವ ನದಿ ಇದ್ದಂತೆ

ಚಡಚಣ ತಾಲೂಕು ಕಾ.ನಿ.ಪನೂತನ ಪದಾಧಿಕಾರಿಗಳಿಗೆ ಸನ್ಮಾನ

ಕದಂಬ ಸೈನ್ಯ ಜಿಲ್ಲಾಧ್ಯಕ್ಷರಾಗಿ ಹಿರೇಮಠ ನೇಮಕ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನೀತಿ ಸಂಹಿತೆ ಉಲ್ಲಂಘನೆ ತಡೆಯಲು ೩ ನಿಗಾ ತಂಡಗಳು
(ರಾಜ್ಯ ) ಜಿಲ್ಲೆ

ನೀತಿ ಸಂಹಿತೆ ಉಲ್ಲಂಘನೆ ತಡೆಯಲು ೩ ನಿಗಾ ತಂಡಗಳು

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿ ಮತಕ್ಷೇತ್ರದಲ್ಲಿ ಒಟ್ಟು ೨,೪೦,೪೪೪, ಮತದಾರರು | ಸ.ಚುನಾವಣಾಧಿಕಾರಿ ವಿನಯ ಪಾಟೀಲ ಮಾಹಿತಿ

ಸಿಂದಗಿ: ೧,೨೩,೩೧೩ ಪುರುಷ ಮತದಾರರು, ೧,೧೭,೧೦೦ ಮಹಿಳಾ ಮತದಾರರು, ೧೩೮೧ ವಯಸ್ಕರು ಹಾಗೂ ೨೯ ತೃತೀಯ ಲಿಂಗಿಗಳನ್ನೊಳಗೊಂಡಂತೆ ಒಟ್ಟು ಅಂದಾಜು ೨,೪೦,೪೪೪, ಮತದಾರರು ಇದ್ದಾರೆ ಎಂದು ಸಹಾಯಕ ಚುನಾವಣಾ ಅಧಿಕಾರಿ ವಿನಯ್ ಪಾಟೀಲ್ ಹೇಳಿದರು.
ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದಲ್ಲಿ ಹಮ್ಮಿಕೊಂಡ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಎಪ್ರಿಲ್ ೧೨ರಿಂದ೧೯ರ ವರೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆಯಲಿದ್ದು, ಏ.೨೦ರಂದು ನಾಮಪತ್ರಗಳ ಪರಿಶೀಲನೆ, ಏ.೨೨ರಂದು ನಾಮಪತ್ರಗಳ ಹಿಂಪಡೆಯುವಿಕೆ ನಡೆಯಲಿದ್ದು, ಮೇ.೭ರಂದು ಅಭ್ಯರ್ಥಿಗಳ ಭವಿಷ್ಯವು ಮತದಾನ ಪೆಟ್ಟಿಗೆಯಲ್ಲಿ ಭದ್ರವಾಗಲಿದ್ದು, ಅಭ್ಯರ್ಥಿಗಳ ಭವಿಷ್ಯ ಜೂ.೪ ರಂದು ನಿರ್ಧಾರವಾಗಲಿದೆ ಎಂದು ಸಹಾಯಕ ಚುನಾವಣಾ ಅಧಿಕಾರಿ ಹೇಳಿದರು.
ಅಂಗವಿಕಲರಿಗಾಗಿ ವಿಶೇಷ ವೀಲ್ ಚೇರ್‌ಗಳ ವ್ಯವಸ್ಥೆ ಕೂಡಾ ಮಾಡಲಾಗುವುದು. ಮತದಾನ ಕೇಂದ್ರಗಳಿಗೆ ಸರಾಗವಾಗಿ ಹೋಗಲು ರ‍್ಯಾಂಪ್ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ಸಮರ್ಪಕ ವಿದ್ಯುತ್ ವ್ಯವಸ್ಥೆ, ನೆರಳಿನ ವ್ಯವಸ್ಥೆ, ಹಾಗೆಯೇ ಪ್ರತ್ಯೇಕವಾಗಿ ಪುರುಷ ಮತ್ತು ಮಹಿಳೆಯರ ಶೌಚಾಲಯಗಳನ್ನು ಕೂಡ ವ್ಯವಸ್ಥೆ ಮಾಡಲಾಗುವುದು.
ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ತಡೆಗಟ್ಟಲು ವಿಶೇಷವಾಗಿ ಮೂರು ನಿಗಾ ತಂಡಗಳನ್ನು ರಚಿಸಲಾಗಿದ್ದು, ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಲಿದೆ.
ಮತಕ್ಷೇತ್ರದಲ್ಲಿ ಗೋಲಗೇರಿ, ಮೋರಟಗಿ ಹಾಗೂ ದೇವಣಗಾವಗಳಲ್ಲಿ ಚೆಕ್ ಪೋಸ್ಟ್ಗಳನ್ನು ಸ್ಥಾಪಿಸಲಾಗಿದ್ದು, ಎಲ್ಲಾ ದ್ವೀಚಕ್ರ ಹಾಗೂ ಬಹುಚಕ್ರ ವಾಹನಗಳನ್ನು ತಪಾಸಣೆ ಮಾಡಲಾಗುತ್ತದೆ. ದಾಖಲೆಯಿಲ್ಲದೇ ರೂ.೫೦ ಸಾವಿರಕ್ಕಿಂತ ಅಧಿಕ ಮೌಲ್ಯದ ಹಣವನ್ನು ಜಪ್ತು ಮಾಡಿಕೊಳ್ಳಲಾಗುವುದು. ಮತದಾನ ಸಮಯದಲ್ಲಿ ವಿಡಿಯೋ ವೀಕ್ಷಣಾ ದಳಗಳನ್ನು ರಚಿಸಲಾಗಿದ್ದು, ಇವು ಮತದಾನ ಕೇಂದ್ರ ಹಾಗೂ ಸುತ್ತಮುತ್ತಲಿನ ಪರಿಸರದ ಮೇಲೆ ಹದ್ದಿನ ಕಣ್ಣಿಡಲಿವೆ.
೮೫ವರ್ಷಕ್ಕಿಂತ ಮೇಲ್ಪಟ್ಟ ವಯಸ್ಕರು, ಅನಾರೋಗ್ಯ ಪೀಡಿತರು ಪೋಲಿಂಗ್ ಬೂತ್‌ವರೆಗೂ ಬಂದು ಮತದಾನ ಮಾಡಲು ಆಗದೇ ಇರುವಂತಹವರಿಗೆ ಮನೆಗೆ ಹೋಗಿ ಮತವನ್ನು ಪಡೆದುಕೊಂಡು ಬರುವ ವ್ಯವಸ್ಥೆ ಮಾಡಲಾಗುವುದು. ಇದುವರೆಗೂ ೪೨೦೫ ಇಂತಹ ಮತದಾರರನ್ನು ಗುರುತಿಸಲಾಗಿದ್ದು, ಅದರಲ್ಲಿ ೨೭೭೭ ವಿಕಲಚೇತನರು, ೧೩೮೧ ವಿಕಲಚೇತನ ಮತದಾರರು ಇದ್ದು, ಇದೇ ರೀತಿ ಇನ್ನೂ ಹೆಚ್ಚಿನ ಮತದಾರರು ಇದ್ದರೆ ಏ.೧೭ರ ಒಳಗಾಗಿ ತಿಳಿಸಬೇಕೆಂದು ಅವರು ವಿನಂತಿಸಿಕೊಂಡರು.
ಗಬಸಾವಳಗಿ ಹಾಗೂ ಬಿಸನಾಳ ಗ್ರಾಮಸ್ಥರು ಲೋಕಸಭಾ ಚುನಾವಣೆಯನ್ನು ಬಹಿಷ್ಕರಣೆ ಮಾಡಲು ನಿರ್ಧರಿಸಿದ್ದರ ಬಗ್ಗೆ ಪತ್ರಕರ್ತರ ಕೇಳಿದ ಪ್ರಶ್ನೆಗೆ ಉತ್ತರಿಸಿದ ತಹಶೀಲ್ದಾರ್ ಪ್ರದೀಪಕುಮಾರ್ ಹಿರೇಮಠ, ಚುನಾವಣೆ ಮುಗಿಯುವವರೆಗೂ ನೀತಿ ಸಂಹಿತೆ ಜಾರಿಯಿರುವುದರಿಂದ ಸರಕಾರ ಯಾವುದೇ ರೀತಿಯ ನಿರ್ಧಾರವನ್ನು ಈಗ ಕೈಗೊಳ್ಳಲಾಗುವುದಿಲ್ಲ. ತಾಲೂಕು ಆಡಳಿತ ಹಾಗೂ ಶಾಸಕರ ಮಟ್ಟದಲ್ಲಿ ಸರ್ಕಾರಕ್ಕೆ ಎಲ್ಲ ರೀತಿಯಿಂದ ಸೂಕ್ತ ಮಾಹಿತಿಗಳನ್ನು ಸಲ್ಲಿಸಲಾಗಿದ್ದು, ಚುನಾವಣೆ ಮುಗಿಯುವವರೆಗೂ ಗ್ರಾಮಸ್ಥರು ಕಾಯ್ದು ಚುನಾವಣಾ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕೆಂದು ಹೇಳಿದರು.
ಈ ವೇಳೆ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಕ್ಕಳ ಸಾಹಿತ್ಯ ನಿರಂತರ ಹರಿವ ನದಿ ಇದ್ದಂತೆ

ಚಡಚಣ ತಾಲೂಕು ಕಾ.ನಿ.ಪನೂತನ ಪದಾಧಿಕಾರಿಗಳಿಗೆ ಸನ್ಮಾನ

ಕದಂಬ ಸೈನ್ಯ ಜಿಲ್ಲಾಧ್ಯಕ್ಷರಾಗಿ ಹಿರೇಮಠ ನೇಮಕ

ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ವಾಲಿ ಚನ್ನಪ್ಪ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಕ್ಕಳ ಸಾಹಿತ್ಯ ನಿರಂತರ ಹರಿವ ನದಿ ಇದ್ದಂತೆ
    In (ರಾಜ್ಯ ) ಜಿಲ್ಲೆ
  • ಚಡಚಣ ತಾಲೂಕು ಕಾ.ನಿ.ಪನೂತನ ಪದಾಧಿಕಾರಿಗಳಿಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಕದಂಬ ಸೈನ್ಯ ಜಿಲ್ಲಾಧ್ಯಕ್ಷರಾಗಿ ಹಿರೇಮಠ ನೇಮಕ
    In (ರಾಜ್ಯ ) ಜಿಲ್ಲೆ
  • ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ವಾಲಿ ಚನ್ನಪ್ಪ
    In ವಿಶೇಷ ಲೇಖನ
  • ಅತಿಯಾದ ಯೋಚನೆಗೆ ಹಾಕಿ ಪೂರ್ಣ ವಿರಾಮ
    In ವಿಶೇಷ ಲೇಖನ
  • ಕೃಷಿ ಅಧಿಕಾರಿ ಮನೆ ಮೇಲೆ ದಾಳಿ: ರೂ.2.5 ಕೋಟಿ ಅಕ್ರಮ ಆಸ್ತಿ ಪತ್ತೆ
    In (ರಾಜ್ಯ ) ಜಿಲ್ಲೆ
  • ದೌರ್ಜನ್ಯ ಪ್ರಕರಣ ಗಂಭೀರವಾಗಿ ಪರಿಗಣಿಸಿ ಇತ್ಯರ್ಥಗೊಳಿಸಿ
    In (ರಾಜ್ಯ ) ಜಿಲ್ಲೆ
  • ಯಶಸ್ಸು ಸಾಧನೆಗೆ ಆಧ್ಯಾತ್ಮಿಕತೆ ನೆರವು :ಮೋಕ್ಷಾನಂದಜಿ
    In (ರಾಜ್ಯ ) ಜಿಲ್ಲೆ
  • ಬೆಂಬಲ ಬೆಲೆ ಯೋಜನೆ: ಮೆಕ್ಕೆಜೋಳ ಖರೀದಿಗೆ ರೈತರಿಂದ ನೋಂದಣಿ
    In (ರಾಜ್ಯ ) ಜಿಲ್ಲೆ
  • ಬೂದಿ ತುಂಬಿದ ವಾಹನಗಳಿಂದ ವಾಯು ಮಾಲಿನ್ಯ ತಡೆಗಟ್ಟಲು ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.