Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಕ್ಕಳ ಸಾಹಿತ್ಯ ನಿರಂತರ ಹರಿವ ನದಿ ಇದ್ದಂತೆ

ಚಡಚಣ ತಾಲೂಕು ಕಾ.ನಿ.ಪನೂತನ ಪದಾಧಿಕಾರಿಗಳಿಗೆ ಸನ್ಮಾನ

ಕದಂಬ ಸೈನ್ಯ ಜಿಲ್ಲಾಧ್ಯಕ್ಷರಾಗಿ ಹಿರೇಮಠ ನೇಮಕ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಡಿ.ಎನ್.ಅಕ್ಕಿಗೆ ‘ಗ್ಲೋಬಲ್ ಅಚೀವರ್ಸ್ ಅವಾರ್ಡ್’ ಗರಿ
(ರಾಜ್ಯ ) ಜಿಲ್ಲೆ

ಡಿ.ಎನ್.ಅಕ್ಕಿಗೆ ‘ಗ್ಲೋಬಲ್ ಅಚೀವರ್ಸ್ ಅವಾರ್ಡ್’ ಗರಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಯಡ್ರಾಮಿ: ಇಂಡೋನೇಷಿಯಾ ಕೌನ್ಸಲೇಟ್ ಸಹಯೋಗದಲ್ಲಿ ವಿಶ್ವವಾಣಿ ದಿನಪತ್ರಿಕೆಯು ಪ್ರತಿ ವರ್ಷ ಕೊಡಮಾಡುವ ಅಂತಾರಾಷ್ಟ್ರೀಯ ಪ್ರತಿಷ್ಠಿತ “ಗ್ಲೋಬಲ್ ಅಚೀವರ್ಸ್ ಅವಾರ್ಡ್” ಪ್ರಶಸ್ತಿಗಾಗಿ ಸಾಹಿತಿ, ಸಂಶೋಧಕ, ಚಿತ್ರಕಲಾವಿದ ಡಿ.ಎನ್. ಅಕ್ಕಿ ಅವರನ್ನು ಆಯ್ಕೆ ಮಾಡಿದೆ.
ವಿವಿಧ ಕ್ಷೇತ್ರಗಳಲ್ಲಿಯ ಅಪೂರ್ವ ಸಾಧಕರನ್ನು ಗುರುತಿಸಿರುವ ಈ ಸಂಸ್ಥೆಗಳು ಇಂಡೋನೇಷಿಯಾದ “ಬಾಲಿ”ಯಲ್ಲಿ ಮಾ. 30ರಂದು ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಿವೆ. ಆ ದೇಶದ ಪ್ರತಿಷ್ಠಿತ ಗಣ್ಯರು ಪಾಲ್ಗೊಳ್ಳಲಿದ್ದು, ಭಾರತ- ಇಂಡೋನೇಷಿಯಾ ಕಲಾವಿದರಿಂದ ಕಲಾ ಪ್ರದರ್ಶವೂ ಆಯೋಜಿಸಲಾಗಿದೆ.
ಡಿ.ಎನ್. ಅಕ್ಕಿ ಅವರು ಚಿತ್ರಕಲೆಯ ನಿವೃತ್ತ ಶಿಕ್ಷಕರು. ಮೂಲತಃ ಯಾದಗಿರಿನ ಜಿಲ್ಲೆಯ ಶಹಾಪುರ ತಾಲ್ಲೂಕಿನ ಗೋಗಿ ಗ್ರಾಮದವರು. ಸಗರನಾಡಿನ ಶಾಸನಗಳ ಸಂಶೋಧನೆ, ವ್ಯಕ್ತಿಚಿತ್ರಗಳು, ಜೈನ ಸಾಹಿತ್ಯ, ಜಾನಪದೀಯ ಸಾಹಿತ್ಯ, ರೇಡಿಯೋ ನಾಟಕಗಳು-ಚಿಂತನೆಗಳು ಹೀಗೆ ವಿವಿಧ ವಲಯಗಳಲ್ಲಿ 19ಕ್ಕೂ ಹೆಚ್ಚು ಕೃತಿಗಳನ್ನು ಹಾಗೂ ರಾಜ್ಯ ಹಾಗೂ ರಾಷ್ಟ್ರೀಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗಳು ಸೇರಿದಂತೆ 36ಕ್ಕೂ ಅಧಿಕ ಪ್ರಶಸ್ತಿಗಳನ್ನು ಪಡೆದಿದ್ದಾರೆ.
ಶ್ರೀ ಕ್ಷೇತ್ರ ಶ್ರವಣ ಬೆಳಗೊಳದ ಜೈನ ಅಧ್ಯಯನ ಸಂಸ್ಥೆಯ ಕಾರ್ಯಕಾರಿ ಸಮಿತಿಯ ಸದಸ್ಯರಾಗಿಯೂ ಸೇರಿದಂತೆ ಪ್ರತಿಷ್ಠಿತ ಸಂಘ-ಸಂಸ್ಥೆಗಳಲ್ಲೂ ಸೇವೆ ಸಲ್ಲಿಸಿದ್ದಾರೆ. ತಮ್ಮ ತಾಯಿ ಶ್ರೀಕಾಂತಮ್ಮ ಅಕ್ಕಿ ಅವರಿಂದ ಜಾನಪದ ಹಾಡುಗಳನ್ನು ಹಾಡಿಸಿ, ಅವುಗಳ ಧ್ವನಿಮುದ್ರಣವೂ ಮಾಡಿ, ಪ್ರಕಟಿಸಿದ ಇವರ “ಹಡದವ್ವ ಹಾಡ್ಯಾಳ” ಕೃತಿಯು ಕನ್ನಡ ಜಾನಪದ ಸಾಹಿತ್ಯ ಕ್ಷೇತ್ರಕ್ಕೊಂದು ವಿಶೇಷ ಕೊಡುಗೆ ಎನಿಸಿದೆ. ಡಿ.ಎನ್. ಅಕ್ಕಿ ಅವರು ಮಾ. 28ರಂದು ಸಂಜೆ ಬೆಂಗಳೂರಿನಿಂದ ಇಂಡೋನೇಷಿಯಾಗೆ ತೆರಳಲಿದ್ದಾರೆ.
ಹರ್ಷ: ಸಾಹಿತಿ, ಸಂಶೋಧಕ ಅಕ್ಕಿಯವರು ಮಳ್ಳಿ ಗ್ರಾಮದ ಮೊಮ್ಮಗ, ಅಳಿಯನಾಗಿ ತಮ್ಮ ಬಾಲ್ಯದ ದಿನಗಳನ್ನು ಅತಿ ಹೆಚ್ಚು ಮಳ್ಳಿಯಲ್ಲಿ ಕಳೆದಿದ್ದಾರೆ. ಗ್ರಾಮದಲ್ಲಿ ದೊಡ್ಡ ಗೆಳೆಯರ ಬಳಗವೇ ಇದೆ. ಅಕ್ಕಿಯವರ ಬಾಲ್ಯದ ಸ್ನೇಹಿತರಾದ ಶರಣಗೌಡ ಪೊಲೀಸ್ ಪಾಟೀಲ, ಗೊಲ್ಲಾಳಪ್ಪಗೌಡ ಪೊಲೀಸ್ ಪಾಟೀಲ, ಸಂಗಣ್ಣ ಪತ್ತಾರ, ಹಾಗೂ ಯಡ್ರಾಮಿ ಸಗರಾದ್ರಿ ಸಾಂಸ್ಕೃತಿಕ ಸಂಗಮ ಟ್ರಸ್ಟ್ ಅಧ್ಯಕ್ಷರಾದ ಪೂಜ್ಯ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು, ಕಾರ್ಯದರ್ಶಿ ಪ್ರಕಾಶ ಸಾಹು ಬೆಲ್ಲದ, ಯುವ ಸಾಹಿತಿ ಡಾ. ಸಂತೋಷ ನವಲಗುಂದ, ಪ್ರಶಾಂತ ಕುನ್ನೂರ, ಆರ್.ಜಿ. ಪುರಾಣಿಕ, ಬಿ.ಬಿ. ವಾರದ, ಪ್ರಹ್ಲಾದ ಪತ್ತಾರ, ಪತ್ರಕರ್ತ ಮಲ್ಲಿಕಾರ್ಜುನ ಯಾದಗಿರಿ, ಇತರರು ಹರ್ಷ ವ್ಯಕ್ತಪಡಿಸಿ, ಅಭಿನಂದನೆ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಕ್ಕಳ ಸಾಹಿತ್ಯ ನಿರಂತರ ಹರಿವ ನದಿ ಇದ್ದಂತೆ

ಚಡಚಣ ತಾಲೂಕು ಕಾ.ನಿ.ಪನೂತನ ಪದಾಧಿಕಾರಿಗಳಿಗೆ ಸನ್ಮಾನ

ಕದಂಬ ಸೈನ್ಯ ಜಿಲ್ಲಾಧ್ಯಕ್ಷರಾಗಿ ಹಿರೇಮಠ ನೇಮಕ

ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ವಾಲಿ ಚನ್ನಪ್ಪ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಕ್ಕಳ ಸಾಹಿತ್ಯ ನಿರಂತರ ಹರಿವ ನದಿ ಇದ್ದಂತೆ
    In (ರಾಜ್ಯ ) ಜಿಲ್ಲೆ
  • ಚಡಚಣ ತಾಲೂಕು ಕಾ.ನಿ.ಪನೂತನ ಪದಾಧಿಕಾರಿಗಳಿಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಕದಂಬ ಸೈನ್ಯ ಜಿಲ್ಲಾಧ್ಯಕ್ಷರಾಗಿ ಹಿರೇಮಠ ನೇಮಕ
    In (ರಾಜ್ಯ ) ಜಿಲ್ಲೆ
  • ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ವಾಲಿ ಚನ್ನಪ್ಪ
    In ವಿಶೇಷ ಲೇಖನ
  • ಅತಿಯಾದ ಯೋಚನೆಗೆ ಹಾಕಿ ಪೂರ್ಣ ವಿರಾಮ
    In ವಿಶೇಷ ಲೇಖನ
  • ಕೃಷಿ ಅಧಿಕಾರಿ ಮನೆ ಮೇಲೆ ದಾಳಿ: ರೂ.2.5 ಕೋಟಿ ಅಕ್ರಮ ಆಸ್ತಿ ಪತ್ತೆ
    In (ರಾಜ್ಯ ) ಜಿಲ್ಲೆ
  • ದೌರ್ಜನ್ಯ ಪ್ರಕರಣ ಗಂಭೀರವಾಗಿ ಪರಿಗಣಿಸಿ ಇತ್ಯರ್ಥಗೊಳಿಸಿ
    In (ರಾಜ್ಯ ) ಜಿಲ್ಲೆ
  • ಯಶಸ್ಸು ಸಾಧನೆಗೆ ಆಧ್ಯಾತ್ಮಿಕತೆ ನೆರವು :ಮೋಕ್ಷಾನಂದಜಿ
    In (ರಾಜ್ಯ ) ಜಿಲ್ಲೆ
  • ಬೆಂಬಲ ಬೆಲೆ ಯೋಜನೆ: ಮೆಕ್ಕೆಜೋಳ ಖರೀದಿಗೆ ರೈತರಿಂದ ನೋಂದಣಿ
    In (ರಾಜ್ಯ ) ಜಿಲ್ಲೆ
  • ಬೂದಿ ತುಂಬಿದ ವಾಹನಗಳಿಂದ ವಾಯು ಮಾಲಿನ್ಯ ತಡೆಗಟ್ಟಲು ಆಗ್ರಹ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.