Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 29, 2026

ಪರೀಕ್ಷಾ ನಿಯಮಗಳಿಂದ ಗ್ರಾಮೀಣ ಅಭ್ಯರ್ಥಿಗಳಿಗೆ ಅನ್ಯಾಯ

ನೂತನ ವ್ಯವಸ್ಥಾಪಕರಿಗೆ ಎಸ್‌ಸಿ-ಎಸ್‌ಟಿ ನೌಕರ ಸಂಘದಿಂದ ಸ್ವಾಗತ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಾಹಿತ್ಯ ಪ್ರಕಾರಗಳಲ್ಲಿ ವಚನ ಸಾಹಿತ್ಯ ಶ್ರೇಷ್ಠ :ಕುಲಕರ್ಣಿ
(ರಾಜ್ಯ ) ಜಿಲ್ಲೆ

ಸಾಹಿತ್ಯ ಪ್ರಕಾರಗಳಲ್ಲಿ ವಚನ ಸಾಹಿತ್ಯ ಶ್ರೇಷ್ಠ :ಕುಲಕರ್ಣಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಯಡ್ರಾಮಿ: ಪ್ರಾಚೀನ ಕಾಲದಿಂದಲೂ ಹುಟ್ಟಿ ಬೆಳೆದು ಬಂದ ಕನ್ನಡದ ಅನೇಕ ಸಾಹಿತ್ಯ ಪ್ರಕಾರಗಳಲ್ಲಿ ಅಣ್ಣ ಬಸವಣ್ಣನವರು ಹುಟ್ಟು ಹಾಕಿದ ವಚನ ಸಾಹಿತ್ಯ ಮೇಲ್ಪಂಕ್ತಿಯಲ್ಲಿ ನಿಲ್ಲುತ್ತದೆ ಎಂದು ನಿವೃತ್ತ ಆರೋಗ್ಯಾಧಿಕಾರಿ, ಚನ್ನಬಸವಣ್ಣನವರ ವಂಶಸ್ಥರಾದ ದತ್ತಾತ್ರೇಯ ಕುಲಕರ್ಣಿ ಇಂಗಳೇಶ್ವರ ಅವರು ಹೇಳಿದರು.
ತಾಲೂಕಿನ ಸಗರಾದ್ರಿ ಸಾಂಸ್ಕೃತಿಕ ಸಂಗಮ ಟ್ರಸ್ಟ್ ಹಾಗೂ ಶ್ರೀ ಮುರಘೇಂದ್ರ ಶಿವಯೋಗಿ ಫೌಂಡೇಶನ್ ಸಹಯೋಗದಲ್ಲಿ ಆಯೋಜಿಸಿದ್ದ ಹುಣ್ಣಿಮೆಯ ಆನ್ಲೈನ್ ಸಂಗಮ (ಸರಣಿ -58) ದಲ್ಲಿ ಅವರು ಮಾತನಾಡಿದರು.
ಇಂಗಳೇಶ್ವರ ಈ ಹಿಂದೆ ಪ್ರಖ್ಯಾತ ಅಗ್ರಹಾರವಾಗಿತ್ತು. ಬಸವಣ್ಣನವರು‌ ಇಂಗಳೇಶ್ವರದ ಬ್ರಾಹ್ಮಣ ಕುಟುಂಬದಲ್ಲಿ ಹುಟ್ಟಿ ಲಿಂಗಾಯತ ಧರ್ಮ ಹುಟ್ಟು ಹಾಕಿದರು. ವೈದಿಕ ‌ಸಂಪ್ರದಾಯದಂತೆ ಬಸವಣ್ಣನವರಿಗೆ ಉಪನಯನ ಕಾರ್ಯಕ್ರಮ ನೆರವೇರಿತ್ತು. ಆದರೆ ಕೆಲವರು ಉಪನಯನವೇ ಆಗಿಲ್ಲ ಎಂದು ಹೇಳುತ್ತಾರೆ. ಆದರೆ ಉಪನಯನ ನೆರವೇರಿದ್ದನ್ನು ಅವರ ಜೀವನ ಮತ್ತು ವಚನ ಸಾಹಿತ್ಯದಿಂದ ಸ್ಪಷ್ಟಪಡಿಸಬಹುದು. ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಸರ್ಕಾರ ಘೋಷಣೆ ಮಾಡಿದ್ದು ಸ್ವಾಗತಾರ್ಹವಾಗಿದೆ. ಜಾತಿ ವ್ಯವಸ್ಥೆಯಿಂದ ಕ್ರೋಧಗೊಂಡ ಬಸವಣ್ಣನವರು ಹರಿಜನರಿಗೂ ಇಷ್ಟಲಿಂಗ ನೀಡುವುದರ ಮೂಲಕ ಬಹು ದೊಡ್ಡ ಸಾಮಾಜಿಕ ಕ್ರಾಂತಿ ಮಾಡಿದರು. ಸಮಾಜದುದ್ಧಾರ ಬಯಸಿ ರಚಿತಗೊಂಡದ್ದೇ ವಚನ ಸಾಹಿತ್ಯವಾಗಿದೆ. ಅಹಂಭಾವವಿಲ್ಲದ ಸೋಹಂಭಾವವೇ ಬಸವಣ್ಣನವರ ನಡೆಯಾಗಿತ್ತು. ಸಾಮಾಜಿಕ ಸಮಾನತೆಗಾಗಿ ಅವರು ಮಾಡಿದ ಕ್ರಾಂತಿ ಅಸಾಮಾನ್ಯವಾದುದು. ಬಸವಣ್ಣನವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ನಡೆದಾಗ ಮಾತ್ರ ಸಾಂಸ್ಕೃತಿಕ ನಾಯಕನಿಗೆ ನೀಡುವ ದೊಡ್ಡ ಗೌರವವೆನಿಸುತ್ತದೆ ಎಂದರು. ನಂತರ, ಆನ್ಲೈನ್ ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದ ಪೂಜ್ಯ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು ಆಶೀರ್ವಚನ ನೀಡಿ, ಬಸವಣ್ಣನವರು ಪದವಿಗಳನ್ನು ತಿರಸ್ಕರಿಸಿದವರು. ಐಕ್ಯ ಸ್ಥಲದಿಂದ ಭಕ್ತ ಸ್ಥಲವನ್ನು ಅಪ್ಪಿಕೊಂಡವರು ಬಸವಣ್ಣನವರು ಎಂದು ನುಡಿದರು.
ಇದಕ್ಕೂ ಮೊದಲು ಸಗರನಾಡು ಸೇವಾ ಪ್ರತಿಷ್ಠಾನದ ಅಧ್ಯಕ್ಷ ಪ್ರಕಾಶ ಸಾಹು ಅಂಗಡಿ ಕನ್ನೆಳ್ಳಿ ಅವರು ಆಶಯ ನುಡಿಗಳನ್ನಾಡಿದರು.
ಆನ್ಲೈನ್ ಕಾರ್ಯಕ್ರಮದಲ್ಲಿ ಸಂಗಮದ ಕಾರ್ಯದರ್ಶಿ ಪ್ರಕಾಶ ಸಾಹು ಬೆಲ್ಲದ, ನಿಂಗನಗೌಡ ಪೊಲೀಸ್ ಪಾಟೀಲ, ಪ್ರಶಾಂತ ಕುನ್ನೂರ, ಸುಧೀಂದ್ರ ಕುಲಕರ್ಣಿ, ವಿಜಯೇಂದ್ರ ಕುಲಕರ್ಣಿ, ಗೀತಾ ಕುಲಕರ್ಣಿ, ಮಲ್ಲಿಕಾರ್ಜುನ ಮಾನಶೆಟ್ಟಿ, ಪ್ರಮೋದಕುಮಾರ ಮಳ್ಳಿ, ಡಾ. ಭಾಗ್ಯವತಿ ಕೆಂಭಾವಿ, ರಮೇಶ ಬಡಿಗೇರ, ಬಾಪೂಜಿ ಕುಲಕರ್ಣಿ, ಮಹಾದೇವಿ ಕೋರವಾರ, ಗೊಲ್ಲಾಳಪ್ಪ ಪತ್ತಾರ, ವೀರಭದ್ರ ಪತ್ತಾರ, ಶ್ರೀರಂಗ ಕುಲಕರ್ಣಿ, ಬಿ.ಬಿ.ವಾರದ, ಆರ್.ಜಿ. ಪುರಾಣಿಕ, ಬಸವರಾಜ ಬೋರಗಿ, ರಾಜಶ್ರೀ ಪಾಟೀಲ, ಮುತ್ತು ಕುಲಕರ್ಣಿ, ಸಿದ್ರಾಮಯ್ಯ ಮಠ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
ಡಾ. ಸಂತೋಷ ನವಲಗುಂದ ನಿರೂಪಿಸಿ, ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 29, 2026

ಪರೀಕ್ಷಾ ನಿಯಮಗಳಿಂದ ಗ್ರಾಮೀಣ ಅಭ್ಯರ್ಥಿಗಳಿಗೆ ಅನ್ಯಾಯ

ನೂತನ ವ್ಯವಸ್ಥಾಪಕರಿಗೆ ಎಸ್‌ಸಿ-ಎಸ್‌ಟಿ ನೌಕರ ಸಂಘದಿಂದ ಸ್ವಾಗತ

ಯುವ ಪ್ರತಿಭೆಗಳ ಕನಸಿಗೆ ರೆಕ್ಕೆ ನೀಡುವ ಕೃತಕ ಬುದ್ದಿಮತ್ತೆ ವೇದಿಕೆಗಳು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 29, 2026
    In ದಿನಪತ್ರಿಕೆ
  • ಪರೀಕ್ಷಾ ನಿಯಮಗಳಿಂದ ಗ್ರಾಮೀಣ ಅಭ್ಯರ್ಥಿಗಳಿಗೆ ಅನ್ಯಾಯ
    In (ರಾಜ್ಯ ) ಜಿಲ್ಲೆ
  • ನೂತನ ವ್ಯವಸ್ಥಾಪಕರಿಗೆ ಎಸ್‌ಸಿ-ಎಸ್‌ಟಿ ನೌಕರ ಸಂಘದಿಂದ ಸ್ವಾಗತ
    In (ರಾಜ್ಯ ) ಜಿಲ್ಲೆ
  • ಯುವ ಪ್ರತಿಭೆಗಳ ಕನಸಿಗೆ ರೆಕ್ಕೆ ನೀಡುವ ಕೃತಕ ಬುದ್ದಿಮತ್ತೆ ವೇದಿಕೆಗಳು
    In (ರಾಜ್ಯ ) ಜಿಲ್ಲೆ
  • ಆರೋಗ್ಯ ಸೇವೆಗಳ ವಿಸ್ತರಣೆಗೆ ಬಿ.ಎಲ್.ಡಿ.ಇ ಸಂಸ್ಥೆ ಸದಾ ಬದ್ಧ
    In (ರಾಜ್ಯ ) ಜಿಲ್ಲೆ
  • ನೂತನ ಪದಾಧಿಕಾರಿಗಳ ಪದಗ್ರಹಣ ಯಶಸ್ವಿ
    In (ರಾಜ್ಯ ) ಜಿಲ್ಲೆ
  • ಆಲಮಟ್ಟಿ-ನಾರಾಯಣಪುರದಿಂದ ಕಾಲುವೆಗಳಿಗೆ ನೀರು
    In (ರಾಜ್ಯ ) ಜಿಲ್ಲೆ
  • ಜು.೨೯ ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಮಾಜಿ ಸೈನಿಕರ ಮಕ್ಕಳಿಗೆ ಜನರಲ್ ಕೆ.ಎಸ್.ತಿಮ್ಮಯ್ಯ ನಗದು ಪ್ರಶಸ್ತಿ: ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಶಿಷ್ಯವೇತನ, ಪುಸ್ತಕ ಅನುದಾನಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.