ತಿಕೋಟಾ: ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕೆಲಸ ನಿರ್ವಹಿಸುವ ಕೂಲಿಕಾರರ ಕೂಲಿಮೊತ್ತವನ್ನು ರೂ.೩೧೬ರಿಂದ ರೂ.೩೪೯ಕ್ಕೆ ಹೆಚ್ಚಳ ಮಾಡಲಾಗಿದೆ, ಇದರ ಲಾಭವನ್ನು ಎಲ್ಲ ಗ್ರಾಮೀಣ ಭಾಗದ ಜನರು ಪಡೆಯಬೇಕೆಂದು ತಿಕೋಟಾ ತಾಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಪ್ರವೀಣಕುಮಾರ ಸಾಲಿ ಹೇಳಿದರು.
ಈಗಾಗಲೇ ಗ್ರಾಮೀಣ ಭಾಗದ ಜನರಿಗೆ ೧೦೦ ದಿನಗಳ ಅಕುಶಲ ಕೆಲಸ ನೀಡಲಾಗುತ್ತಿದೆ. ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಜನರಿಗೆ ಯಾವದೇ ಉದ್ಯೋಗ ದೊರೆಯದೇ ಇರುವ ಪ್ರಯುಕ್ತ ಈ ಅವಧಿಯಲ್ಲಿ ಅವರಿಗೆ ನಿರಂತರವಾಗಿ ಕೆಲಸ ನೀಡುವ ಉದ್ದೇಶದಿಂದ ಗ್ರಾಮೀಣ ಪ್ರದೇಶದಲ್ಲಿ ಮನೆ-ಮನೆಗೆ ಭೇಟಿ ನೀಡಿ ನರೇಗಾ ಮಾಹಿತಿ ನೀಡುವದರ ಜೊತೆಗೆ ನಮೂನೆ-೦೬ರಲ್ಲಿ ಕೆಲಸಕ್ಕೆ ಬೇಡಿಕೆ ಪಡೆಯಲಾಗುತ್ತಿದೆ. ಹಾಗೂ ಏಪ್ರೀಲ್ ಒಂದರಿಂದ ಎಲ್ಲ ಗ್ರಾಮಗಳಲ್ಲಿ ಬೇಡಿಕೆ ಸಲ್ಲಿಸುವ ಪ್ರತಿಯೊಬ್ಬರಿಗೂ ಮನರೇಗಾ ಯೋಜನೆಯಡಿ ಕೆಲಸ ನಿರ್ವಹಿಸಲು ಬೇಕಾದ ಸಿದ್ಧತೆ ಮಾಡಿಕೊಳ್ಳಲು ಎಲ್ಲಾ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಹಾಗೂ ಮಹಾತ್ಮ ಗಾಂಧಿ ನರೇಗಾ ಸಿಬ್ಬಂದಿಗಳಿಗೆ ಸೂಚನೆಗಳನ್ನು ನೀಡಲಾಗಿದೆ ಎಂದು ಅವರು ತಿಳಿಸಿದರು. ತಾಲೂಕಿನ ಪ್ರತಿ ಗ್ರಾಮದಲ್ಲಿ ಕೂಲಿ ಆಧಾರಿತ ಸಮುದಾಯ ಕಾಮಗಾರಿಗಳನ್ನು ಆರಂಭಿಸಿ, ಕೆಲಸ ಬಯಸುವ ಪ್ರತಿ ವ್ಯಕ್ತಿಗೂ ಉದ್ಯೋಗ ಕಲ್ಪಿಸಲಾಗುತ್ತದೆ. ವಿಶೇಷಚೇತನರು, ಮಹಿಳೆಯರು, ಹಿರಿಯ ನಾಗರಿಕರು, ಲಿಂಗತ್ವ ಅಲ್ಪಸಂಖ್ಯಾತರು, ದುರ್ಬಲ ವರ್ಗಗಳಿಗೆ ಆಧ್ಯತೆ ಮೇಲೆ ಕೆಲಸ ನೀಡಲಾಗುತ್ತಿದೆ. ಜೊತೆಗೆ ಕಾಮಗಾರಿ ಸ್ಥಳದಲ್ಲಿ ಕುಡಿಯುವ ನೀರು, ನೆರಳು, ಪ್ರಥಮ ಚಿಕಿತ್ಸೆ ಪೆಟ್ಟಿಗೆ ಸೇರಿ ವಿವಿಧ ಸೌಲಭ್ಯಗಳನ್ನು ಒದಗಿಸಲಾಗುತ್ತದೆ.
ಹೊಸ ನರೇಗಾ ಸಹಾಯವಾಣಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಡಿ ವಿವಿಧ ಯೋಜನೆಗಳ ಮಾಹಿತಿ ಮತ್ತು ಕುಂದು ಕೊರತೆಗಳ ನಿವಾರಣೆಗಾಗಿ ಏಕಿಕೃತ ಸಹಾಯವಾಣಿ “೮೨೭೭೫೦೬೦೦೦” ಯನ್ನು ಆರಂಭಿಸಲಾಗಿದೆ. ಮುಂಚೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಪರಿಹಾರ ಹಾಗೂ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಬೇರೆ ಬೇರೆ ಸಹಾಯವಾಣಿ ಕಾರ್ಯನಿರ್ವಹಿಸುತ್ತಿದ್ದವು. ಇಲಾಖೆಯ ಸಮಗ್ರ ಮಾಹಿತಿಗಾಗಿ ಏಕಿಕೃತ ಸಹಾಯವಾಣಿ “೮೨೭೭೫೦೬೦೦೦” ಯನ್ನು ಆರಂಭಿಸಲಾಗಿದೆ. ಇಲಾಖೆಗೆ ಸಂಬಂಧಿಸಿದ ದೂರು ಹಾಗೂ ಮಾಹಿತಿಗಾಗಿ ಈ ಸಹಾಯವಾಣಿಗೆ ಸಂಪರ್ಕಿಸಲು ತಿಳಿಸಿದೆ.
Subscribe to Updates
Get the latest creative news from FooBar about art, design and business.
Related Posts
Add A Comment

