ದೇವರಹಿಪ್ಪರಗಿ: ಲೋಕಸಭೆಯ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಬಿ.ಎಲ್.ಡಿ.ಇ ಸಂಸ್ಥೆಯ ಎ.ಬಿ.ಸಾಲಕ್ಕಿ ಕಾಲೇಜು ಆವರಣಕ್ಕೆ ಜಿಲ್ಲಾಧಿಕಾರಿ ಟಿ.ಭೂಬಾಲನ್, ಎಸ್.ಪಿ ಋಷಿಕೇಶ ಸೋನಾವಣೆ ಭೇಟಿ ನೀಡಿ ಸಿದ್ಧತಾಕಾರ್ಯ ಪರಿಶೀಲಿಸಿದರು.
ಪಟ್ಟಣದ ಬಿ.ಎಲ್.ಡಿ.ಇ ಸಂಸ್ಥೆಯ ಎ.ಬಿ.ಸಾಲಕ್ಕೆ ಕಾಲೇಜು ಆವರಣಕ್ಕೆ ಗುರುವಾರ ಭೇಟಿ ನೀಡಿದ ಅಧಿಕಾರಿಗಳು, ಚುನಾವಣಾ ಆಯೋಗದ ಮಾರ್ಗಸೂಚಿ ಅನುಗುಣವಾಗಿ ಇರುವ ಸ್ಟಾçಂಗ್ ರೂಮ್ ವ್ಯವಸ್ಥೆ, ಸೌಲಭ್ಯಗಳು, ಪೂರ್ವತಯಾರಿಗಳ ಕುರಿತು ಪರಿಶೀಲಿಸಿದರು. ನಂತರ ಆಗಬೇಕಾದ ಸಿದ್ಧತೆಗಳ ಕುರಿತು ಮಾಹಿತಿ ನೀಡಿದರು.
ತಹಶೀಲ್ದಾರ ಪ್ರಕಾಶ ಸಿಂದಗಿ, ಸಹಾಯಕ ಚುನಾವಣಾಧಿಕಾರಿ ಪ್ರವೀಣ ಜೈನ್, ಶಿರಸ್ತೇದಾರ ಸುರೇಶ ಮ್ಯಾಗೇರಿ, ಪಿಎಸೈ, ಬಸವರಾಜ ತಿಪ್ಪಾರೆಡ್ಡಿ ಸರ್ವೆ ತಪಾಸಕ ವಿ.ವೈ.ಹಳ್ಳಿ, ಕೃಷಿ ಅಧಿಕಾರಿ ಸೋಮನಗೌಡ ಬಿರಾದಾರ, ಅನೀಲಕುಮಾರ ರಾಠೋಡ, ಸಂಗಮೇಶ ಗ್ವಾಳೇದ, ಕುಮಾರ ಅವರಾದಿ, ರವಿ ಮೆಟಗಾರ ಸೇರಿದಂತೆ ತಾಲ್ಲೂಕು ಆಡಳಿತದ ಸಿಬ್ಬಂದಿ ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

