ವಿಜಯಪುರ: ಆಕಸ್ಮಿಕವಾಗಿ ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ಬೆಂಕಿ ಅವಘಡ ಸಂಭವಿಸಿದ ರಾಜಾಜಿನಗರದ ಮಹಾದೇವ ದಿಂಡವಾರ ಅವರ ಮನೆಗೆ, ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರು ಶುಕ್ರವಾರ ಭೇಟಿ ನೀಡಿ ಸಾಂತ್ವನ ಹೇಳಿ, ವೈಯಕ್ತಿಕವಾಗಿ ರೂ.50 ಸಾವಿರ ಸಹಾಯಧನ ನೀಡಿದರು.
ಮಾ.19 ರಂದು ನಡೆದ ದುರ್ಘಟನೆಯಲ್ಲಿ ಓರ್ವ ಬಾಲಕ ಮೃತಪಟ್ಟಿದ್ದು, ಮೂರು ಜನರು ಗಾಯಗೊಂಡಿದ್ದರು. ಈ ಹಿನ್ನೆಲೆ ಮನೆಗೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಸಹಾಯಧನ ನೀಡಿದರು.
ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತದ ನಿರ್ದೇಶಕ ರಾಮನಗೌಡ ಪಾಟೀಲ ಯತ್ನಾಳ, ಬಿಜೆಪಿ ನಗರ ಮಂಡಲದ ಅಧ್ಯಕ್ಷ ಶಂಕರ ಹೂಗಾರ ಮತ್ತಿತರರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

