ವಿಜಯಪುರ: ಮಿಸಲು ಲೋಕಸಭಾ ಚುನಾವಣೆ ನಿಮಿತ್ತ ಕಾಂಗ್ರೆಸ್ ಅಭ್ಯರ್ಥಿ ರಾಜು ಆಲಗೂರ ಅವರು ದಿ.31 ರವಿವಾರ ಬಬಲೇಶ್ವರ ವಿಧಾನಸಭಾ ಕ್ಷೇತ್ರ ಹಾಗೂ ಇಂಡಿ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರ ಸಭೆಗಳನ್ನು ಕೈಗೊಂಡಿದ್ದಾರೆ.
ದಿ.31 ರವಿವಾರ ಬೆ.10ಗಂ. ಬಬಲೇಶ್ವರದಲ್ಲಿ ವಿ.ಎಸ್.ಪಾಟೀಲ ಅವರ ತೋಟದಲ್ಲಿ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಬಬಲೇಶ್ವರ ಪಟ್ಟಣ, ಸಾರವಾಡ ಜಿಲ್ಲಾ ಪಂಚಾಯತ ಮತ್ತು ಕಾಖಂಡಕಿ ಜಿಲ್ಲಾ ಪಂಚಾಯತ ಮುಖಂಡರು, ಪದಾಧಿಕಾರಿಗಳು, ಯುವಕರು, ಕಾರ್ಯಕರ್ತರು ಸಭೆಯಲ್ಲಿ ಉಪಸ್ಥಿತರಿರಲಿದ್ದಾರೆ.
ನಂತರ ಸಂ.4 ಗಂ. ಇಂಡಿ ವಿಧಾನಸಭಾ ಕ್ಷೇತ್ರದ ಇಂಡಿ ನಗರದ ಅಮರ ಹೋಟೆಲ್ ಹತ್ತಿರ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಅವರ ನೇತೃತ್ವದಲ್ಲಿ ಏರ್ಪಡಿಸಿದ ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನಕಾರ್ಯದರ್ಶಿ ವಸಂತ ಹೊನಮೊಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
