Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವೃತ್ತಪತ್ರಿಕೆಗಳು ಮಾನವ ಕಳಕಳಿಯ ಪ್ರತಿಬಿಂಬಗಳು

ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವುದು ನನ್ನ ಸಂಕಲ್ಪ

ವೈದ್ಯಕೀಯ ಚಿಕಿತ್ಸೆಗೆ ನಾವಿನ್ಯತೆಯ ಸ್ಪರ್ಶನೀಡಿ ಆಯುರ್ವೇದ ಉಳಿಸಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»1000 ಮಕ್ಕಳಿಗೆ ಸಮವಸ್ತ್ರ ವಿತರಣೆಗೆ ಸಜ್ಜು :ನುಗ್ಗಲಿ
(ರಾಜ್ಯ ) ಜಿಲ್ಲೆ

1000 ಮಕ್ಕಳಿಗೆ ಸಮವಸ್ತ್ರ ವಿತರಣೆಗೆ ಸಜ್ಜು :ನುಗ್ಗಲಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಆಲಮಟ್ಟಿಯಲ್ಲಿ ಮೌಲ್ಯಾಂಕನ ಪರೀಕ್ಷೆಯ ಮೌಲ್ಯಮಾಪನ ಯಶಸ್ವಿ

ಆಲಮಟ್ಟಿ: ಪ್ರಸಕ್ತ ಸಾಲಿನ ಮೌಲ್ಯಾಂಕನ ಪರೀಕ್ಷೆಗೆ ಸಾಕಷ್ಟು ಅಡೆತಡೆ ಬಂದಿದ್ದರೂ, ಸರ್ಕಾರ ಮೊದಲೇ ನಿರ್ಧರಿಸಿದ ನಿರ್ಧಾರಕ್ಕೆ ಬದ್ದವಾಗಿ ನಿಂತು ಪರೀಕ್ಷೆ ಯಶಸ್ವಿಯಾಗಿ ನಡೆಸಿದೆ, ಅದಕ್ಕೆ ಪೂರಕವಾಗಿಯೂ ಶಿಕ್ಷಕರು ಕೂಡಾ ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸಿದ್ದಾರೆ ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಘಟಕದ ಪ್ರಧಾನಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ ಹೇಳಿದರು.
ಇಲ್ಲಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿದ 5 ನೇ ವರ್ಗದ ಮೌಲ್ಯಾಂಕನ ಪರೀಕ್ಷೆಯ ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ಭಾಗವಹಿಸಿದ ನಿಡಗುಂದಿ ತಾಲ್ಲೂಕಿನ ಸರ್ವ ಶಿಕ್ಷಕರ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಶಿಕ್ಷಣದ ಗುಣಮಟ್ಟದ ಕಲಿಕೆಯ ಅಳತೆಗೋಲಿಗೆ ಮೌಲ್ಯಾಂಕನ ಪರೀಕ್ಷೆ ಮಕ್ಕಳಲ್ಲಿ ಸ್ಪರ್ಧಾತ್ಮಕ ಮನೋಭಾವನೆ ಬೆಳೆಯಲಿದೆ ಎಂದರು. ಶಿಕ್ಷಕ ಸಂಘಟನೆಯ ರಾಜ್ಯ ಘಟಕದ ಪ್ರಯತ್ನದ ಫಲವಾಗಿ 2006 ಕ್ಕೂ ಮುಂಚೆ ನೇಮಕಾತಿ ಅಧಿಸೂಚನೆ ಹೊರಡಿಸಿ, 2007 ರಲ್ಲಿ ನೇಮಕಗೊಂಡ ನೌಕರರಿಗೆ ಎನ್ ಪಿಎಸ್ ಬದಲಾಗಿ ಓಪಿಎಸ್ ಜಾರಿಮಾಡಿಸಲಾಗಿದೆ. 7 ವೇತನ ಆಯೋಗದಲ್ಲಿ ಹೆಚ್ಚಿನ ವೇತನ ಶ್ರೇಣಿ ಕೊಡಿಸಲಾಗಿದೆ ಎಂದರು. ಮುಖ್ಯೋಪಾಧ್ಯರಿಗೆ ಪ್ರತ್ಯೇಕ ವೇತನ ಶ್ರೇಣಿ ನಿಗದಿಗೊಳಿಸುವ ಪ್ರಯತ್ನ ಮುಂದುವರೆದಿದೆ ಎಂದರು.
ಈ ಬಾರಿ ಪ್ರತಿ ಸರ್ಕಾರಿ ಶಾಲೆಗಳಿಗೆ ವಾರ್ಷಿಕ ಶಾಲಾ ಅನುದಾನ ಕನಿಷ್ಠ 45,000 ರೂಗಳನ್ನು ಕೊಡಿಸಲಾಗಿದೆ. ಹೆಚ್ಚು ಮಕ್ಕಳಿದ್ದಲ್ಲಿ ಆ ಅನುದಾನ ಇನ್ನೂ ಹೆಚ್ಚಿದೆ ಎಂದರು. ಸಂಘಟನೆಯ ಪ್ರಯತ್ನದ ಫಲವಾಗಿ ಕಳೆದ ವರ್ಷ ಸುಮಾರು 30 ಸಾವಿರಕ್ಕೂ ಪ್ರಾಥಮಿಕ ಶಾಲಾ ಶಿಕ್ಷಕರು ವರ್ಗಾವಣೆ ಹೊಂದಿದ್ದಾರೆ. ಈಗ ಮತ್ತೆ ವರ್ಗಾವಣೆಗೆ ಅನುಮತಿ ಕೊಡಿಸಲಾಗಿದೆ. ಈಗಾಗಲೇ ವರ್ಗಾವಣೆಯ ಅಧಿಸೂಚನೆಯೂ ಹೊರಬಂದಿದೆ ಎಂದರು.
1000 ಮಕ್ಕಳಿಗೆ ಸಮವಸ್ತ್ರ: ಸರ್ಕಾರ ನೀಡುವ ಎರಡು ಜತೆ ಉಚಿತ ಸಮವಸ್ತ್ರದ ಜತೆ, ಬೆಂಗಳೂರಿನ ಸಂಘಟನೆಯೊಂದನ್ನು ಸಂರ್ಪಕಿಸಲಾಗಿದ್ದು, ಅವರು ತಾಲ್ಲೂಕಿನ 1000 ಸರ್ಕಾರಿ ಶಾಲೆಯ ಮಕ್ಕಳಿಗೆ ಒಂದು ಜತೆ ಸಮವಸ್ತ್ರ ನೀಡಲು ಒಪ್ಪಿದ್ದು, ಅದನ್ನು ಜೂನ್ ನಲ್ಲಿ ಕೊಡಿಸಲಾಗುವುದು ಎಂದು ನುಗ್ಗಲಿ ತಿಳಿಸಿದರು.
ವೈಯಕ್ತಿಕವಾಗಿ 100 ಮಕ್ಕಳಿಗೆ ಉಚಿತ ಸ್ಕೂಲ್ ಬ್ಯಾಗ್ ಕೊಡಿಸಲಾಗುವುದು ಎಂದರು. ಈಗಾಗಲೇ ಇನ್ಫೋಸಿಸ್ ಫೌಂಡೇಶನ್ ಸಂರ್ಪಕಿಸಿ 50 ಲಕ್ಷ ರೂ ವೆಚ್ಚದಲ್ಲಿ ತಾಲ್ಲೂಕಿನ ಪ್ರತಿ ಶಾಲೆಗೂ ಕಂಪ್ಯೂಟರ್ ನೀಡಲಾಗಿದೆ ಎಂದರು.
ಶಿಕ್ಷಕ ಸಂಘಟನೆಯ ನಿಡಗುಂದಿ ತಾಲ್ಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಸಲೀಂ ದಡೆದ ಮಾತನಾಡಿ, ತಾಲ್ಲೂಕಿನ ಪ್ರತಿ ಶಿಕ್ಷಕರಿಗೂ ಈ ಬಾರಿ ಉಚಿತವಾಗಿ ಆದಾಯ ತೆರಿಗೆಯ ಮಾಹಿತಿ ನೀಡಲಾಗಿದೆ. ಗುರುತಿನ ಚೀಟಿ ನೀಡಲಾಗಿದೆ. ಈಗ ಪ್ರತಿ ಶಿಕ್ಷಕರಿಗೂ ಸೇವಾ ಪುಸ್ತಕದ ಆಧಾರದಲ್ಲಿ ಜ್ಯೋತಿ ಸಂಜೀವಿನಿಯ ಆರೋಗ್ಯ ಕಾರ್ಡ್ ನ್ನು ಜೂನ್ ವೇಳೆಗೆ ನೀಡಲಾಗುವುದು ಎಂದರು. ತಾಲ್ಲೂಕಿನ ಪ್ರತಿ ಶಿಕ್ಷಕರ ಬಾಕಿಯಿರುವ ಸಂಪೂರ್ಣ ಅರಿಅರ್ಸ್ ಹಣದ ಬಿಲ್ ಮಾಡಿಸಲಾಗಿದೆ ಎಂದರು.
ವೇದಿಕೆಯಲ್ಲಿ ಸಂಘಟನೆಯ ಮುಖಂಡರಾದ ಆರ್.ಎಸ್. ಕಮತ, ಸಲೀಂ ದಡೆದ, ಬಿ.ಎಸ್. ಯರವಿನತೆಲಿಮಠ, ಎಂ.ಎಂ. ಮುಲ್ಲಾ, ಮುತ್ತು ಹೆಬ್ಬಾಳ, ಪವಾಡೆಪ್ಪ ಚಲವಾದಿ, ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಸುರೇಶ ಹುರಕಡ್ಲಿ, ಭಾಷಾಸಾಬ್ ಮನಗೂಳಿ, ಬಿ.ಐ. ಖ್ಯಾಡಿ, ಎಸ್.ಐ. ಕಾರಕೂನ ಮತ್ತೀತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವೃತ್ತಪತ್ರಿಕೆಗಳು ಮಾನವ ಕಳಕಳಿಯ ಪ್ರತಿಬಿಂಬಗಳು

ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವುದು ನನ್ನ ಸಂಕಲ್ಪ

ವೈದ್ಯಕೀಯ ಚಿಕಿತ್ಸೆಗೆ ನಾವಿನ್ಯತೆಯ ಸ್ಪರ್ಶನೀಡಿ ಆಯುರ್ವೇದ ಉಳಿಸಿ

ಬಾಂಗ್ಲಾದ ಅಲ್ಪಸಂಖ್ಯಾತ ಹಿಂದೂಗಳಿಗೆ ರಕ್ಷಣೆ ಒದಗಿಸಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವೃತ್ತಪತ್ರಿಕೆಗಳು ಮಾನವ ಕಳಕಳಿಯ ಪ್ರತಿಬಿಂಬಗಳು
    In (ರಾಜ್ಯ ) ಜಿಲ್ಲೆ
  • ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವುದು ನನ್ನ ಸಂಕಲ್ಪ
    In (ರಾಜ್ಯ ) ಜಿಲ್ಲೆ
  • ವೈದ್ಯಕೀಯ ಚಿಕಿತ್ಸೆಗೆ ನಾವಿನ್ಯತೆಯ ಸ್ಪರ್ಶನೀಡಿ ಆಯುರ್ವೇದ ಉಳಿಸಿ
    In (ರಾಜ್ಯ ) ಜಿಲ್ಲೆ
  • ಬಾಂಗ್ಲಾದ ಅಲ್ಪಸಂಖ್ಯಾತ ಹಿಂದೂಗಳಿಗೆ ರಕ್ಷಣೆ ಒದಗಿಸಿ
    In (ರಾಜ್ಯ ) ಜಿಲ್ಲೆ
  • ಕರಡಕಲ್ ಗ್ರಾಪಂ ಅಧ್ಯಕ್ಷರಾಗಿ ದೇವಿಂದ್ರಪ್ಪ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಗಣಿತ ಜೀವನದ ಅವಿಭಾಜ್ಯ ಅಂಗ :ಶಿಕ್ಷಕ ಸಂಗನಬಸವ
    In (ರಾಜ್ಯ ) ಜಿಲ್ಲೆ
  • ವಿವಾದಗಳಿಗೆ ಸಂಧಾನದ ಮಾರ್ಗ: ಜ೨ ರಿಂದ ಮಧ್ಯಸ್ಥಿಕೆ ಅಭಿಯಾನ
    In (ರಾಜ್ಯ ) ಜಿಲ್ಲೆ
  • ಮನೆಯಿಂದಲೇ ಇ-ಖಾತಾ ಪಡೆವ ಕುರಿತು ಜಾಗೃತಿ
    In (ರಾಜ್ಯ ) ಜಿಲ್ಲೆ
  • ಕುಡಿವ ನೀರು ಸಮರ್ಪಕ ಪೂರೈಕೆಗೆ ಆಗ್ರಹಿಸಿ ಗ್ರಾಮಸ್ಥರಿಂದ ಮನವಿ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕರು ಜನಸಂಪರ್ಕ ಸಭೆಗೆ ಬರದಂತೆ ಕಾರ್ಯನಿರ್ವಹಿಸಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.