ವಿಜಯಪುರ: ಏ,೦೧- ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಹಮ್ಮಿಕೊಂಡ ೫ನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮಕ್ಕೆ ವಿಜಯಪುರ ಉಪ ವಿಭಾಗಾಧಿಕಾರಿ ಶ್ರೀಮತಿ ಶ್ವೇತಾ ಬೀಡಕರ ಚಾಲನೆ ನೀಡಿದರು.
ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ವತಿಯಿಂದ ಹಮ್ಮಿಕೊಂಡ ಲಸಿಕಾ ಕಾರ್ಯಕ್ರಮಕ್ಕೆ ಸೋಮವಾರ ಬುರಣಾಪುರದ ಸರ್ಕಾರಿ ಗೋಶಾಲೆಯಲ್ಲಿ ಗೋ ಪೂಜೆ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಏ.೧ ರಿಂದ ೩೦ರವರೆಗೆ ಲಸಿಕಾ ಕಾರ್ಯಕ್ರಮಕ್ಕೆ ಹಮ್ಮಿಕೊಂಡಿದ್ದು, ಲಸಿಕಾಕರಣ ಸಂದರ್ಭದಲ್ಲಿ ಲಸಿಕೆಯಿಂದ ಯಾವುದೇ ಜಾನುವಾರುಗಳು ವಂಚಿತವಾಗದಂತೆ ಎಲ್ಲ ಜಾನುವಾರುಗಳಿಗೆ ಲಸಿಕೆ ಹಾಕುವಂತೆ ತಿಳಿಸಿದ ಅವರು, ರೈತರು ಸಹ ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡು ತಮ್ಮ ಜಾನುವಾರುಗಳಿಗೆ ಲಸಿಕೆ ಹಾಕಿಸಿಕೊಳ್ಳುವಂತೆ ಅವರು ಮನವಿ ಮಾಡಿಕೊಂಡರು.
ಈ ಸಂದರ್ಭದಲ್ಲಿ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಉಪನಿರ್ದೇಶಕ ಡಾ.ಅಶೋಕ ಗೊಣಸಗಿ, ಮುಖ್ಯ ಪಶು ವೈದ್ಯಾಧಿಕಾರಿ ಡಾ.ಬಿ.ಎಸ್.ಕನಮಡಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

