ಚಿಮ್ಮಡ: ನಮ್ಮ ಭಾಗದಲ್ಲಿಯೂ ಕಡಿಮೆ ಶುಲ್ಕದಲ್ಲಿ ವಿಶ್ವ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ಪ್ರಾರಂಭಿಸಲಾಗಿರುವ ಶಿಕ್ಷಣ ಸಂಸ್ಥೆಗೆ ಈ ಭಾಗದ ರೈತರು, ಶಿಕ್ಷಣ ಪ್ರೇಮಿ ಪಾಲಕರು ಸಹಕಾರ ನೀಡಬೇಕಾಗಿದೆ ಎಂದು ಶಾಸಕ ಸಿದ್ದು ಸವದಿ ಹೇಳಿದರು.
ಗ್ರಾಮದ ಶ್ರೀ ಪ್ರಭುಲಿಂಗೇಶ್ವರ ಇಂಟರನ್ಯಾಷನಲ್ ಸ್ಕೂಲ್ ಆವರಣದಲ್ಲಿ ರವಿವಾರ ಹಮ್ಮಿಕೊಳ್ಳಲಾಗಿದ್ದ ಬೇಸಿಗೆ ಶಿಬಿರ ಪ್ರಾರಂಭೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಗುಣಮಟ್ಟದ ಶಿಕ್ಷಣಕ್ಕಾಗಿ ನಮ್ಮ ಭಾಗದಿಂದ ಮೂಡಬಿದರಿ, ಉಡುಪಿ, ಮಂಗಳೂರು ವಿದ್ಯಾಕೇಂದ್ರಗಳಿಗೆ ಪ್ರತೀವರ್ಷ ನೂರಾರು ವಿದ್ಯಾರ್ಥಿಗಳು ಪ್ರವೇಶ ಪಡೆಯುತಿದ್ದು. ಆ ಭಾಗದಿಂದ ವಿದ್ಯಾರ್ಥಿಗಳು ನಮ್ಮ ಶಿಕ್ಷಣ ಸಂಸ್ಥೆಯಲ್ಲಿ ಪ್ರವೇಶ ಪಡೆಯುವಂಥಹ ಗುಣಮಟ್ಟದ ಶಿಕ್ಷಣವನ್ನು ಕಡಿಮೆ ಶುಲ್ಕದಲ್ಲಿ ನೀಡುವ ಉದ್ದೇಶ ಈ ಸಂಸ್ಥೆ ಹೊಂದಿದ್ದು ಇದೇ ಶೈಕ್ಷಣಿಕ ವರ್ಷದಲ್ಲಿ ಪ್ರವೇಶಗಳು ಪ್ರಾರಂಭವಾಗಲಿವೆ ಎಂದರು.
ನಿವೃತ್ತ ಪ್ರಾಂಶುಪಾಲ ಎಸ್.ಎಸ್. ಹೂಲಿ ಮಾತನಾಡಿ ಪ್ರತಿಯೊಬ್ಬ ಪಾಲಕರು ತಾವು ಎಷ್ಠೆ ತೊಂದರೆಯಲ್ಲಿದ್ದರು ತಮ್ಮ ಮಕ್ಕಳ ಶಿಕ್ಷಣ, ಭವಿಷ್ಯದ ಕುರಿತು ಯಾವುದೇ ರಾಜಿ ಮಾಡಿಕೊಳ್ಳದೆ ಶಿಕ್ಷಣ ನೀಡುತ್ತಿರುವುದು ಒಳ್ಳೆಯ ಬೆಳವಣಿಗೆ ಯಾಗಿದ್ದು ಅವರ ನಿರೀಕ್ಷೆಗೆ ತಕ್ಕ ಮೌಲ್ಯಯುತ ಶಿಕ್ಷಣವನ್ನು ಶಿಕ್ಷಣ ಸಂಸ್ಥೆಗಳು ನೀಡಬೇಕಾಗಿದೆ ಎಂದರು.
ಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿ ವಿದ್ಯಾಧರ ಸವದಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಜಿಲ್ಲಾ ಪಂಚಾಯತಿ ಮಾಜಿ ಸದಸ್ಯರಾದ ಬಾಬಾಗೌಡ ಪಾಟೀಲ, ಪುಂಡಲಿಕಪ್ಪಾ ಪಾಲಭಾವಿ, ಮಹಾಂತೇಶ ಹಿಟ್ಟಿನಮಠ, ಧರೆಪ್ಪಾ ಉಳ್ಳಾಗಡ್ಡಿ, ಮಹಾದೇವ ಧುಪದಾಳ, ಪರಶುರಾಮ ಬಸವ್ವಗೋಳ, ಮಾದುಗೌಡ ಪಾಟೀಲ, ಪರಪ್ಪಾ ಬ್ಯಾಕೋಡ, ಗಣಪತರಾವ್ ಹಜಾರೆ, ಶ್ರೀಶೈಲ ಬೀಳಗಿ, ರಾಮಣ್ಣ ಬಗನಾಳ, ಪುಂಡಲಿಕಪ್ಪಾ ಪೂಜಾರಿ, ಬಾಳಪ್ಪಾ ಹಳಿಂಗಳಿ, ಪರಪ್ಪಾ ಪಾಲಭಾವಿ ಸೇರಿದಂತೆ ಹಲವಾರು ಜನ ಪ್ರಮುಖರು ವೇದಿಕೆಯಲ್ಲಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

