Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವೃತ್ತಪತ್ರಿಕೆಗಳು ಮಾನವ ಕಳಕಳಿಯ ಪ್ರತಿಬಿಂಬಗಳು

ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವುದು ನನ್ನ ಸಂಕಲ್ಪ

ವೈದ್ಯಕೀಯ ಚಿಕಿತ್ಸೆಗೆ ನಾವಿನ್ಯತೆಯ ಸ್ಪರ್ಶನೀಡಿ ಆಯುರ್ವೇದ ಉಳಿಸಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜನಸೇವೆ ಮಾಡಲು ಒಳ್ಳೆಯ ಹೃದಯವಿರಬೇಕು: ಯತ್ನಾಳ
(ರಾಜ್ಯ ) ಜಿಲ್ಲೆ

ಜನಸೇವೆ ಮಾಡಲು ಒಳ್ಳೆಯ ಹೃದಯವಿರಬೇಕು: ಯತ್ನಾಳ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಜನ ಸೇವೆ ಮಾಡುವುದಕ್ಕೆ ಒಳ್ಳೆಯ ಹೃದಯವಿರಬೇಕೆ ಹೊರತು ಅಧಿಕಾರವಲ್ಲ. ಅಧಿಕಾರವೆಂಬುದು ಕೇವಲ ಸೇವೆ ಮಾಡುವುದಕ್ಕೆ ಇರುವಂತ ಒಂದು ಅವಕಾಶ ಅದನ್ನು ನಾನು ಸಮರ್ಪಕವಾಗಿ ಬಳಕೆ ಮಾಡಿಕೊಂಡಿದ್ದೇನೆ. ನಿಸ್ವಾರ್ಥ ಸೇವೆ ಮಾಡುವ ಮೂಲಕ ಸಮಾಜದ ಹಲವಾರು ರಂಗಗಳಲ್ಲಿ ತೊಡಗಿಸಿಕೊಂಡಿದ್ದೇನೆ. ಅದರ ಒಂದು ಭಾಗವೇ ಇಂದು ಆರೋಗ್ಯ ಕ್ಷೇತ್ರದಲ್ಲಿ ಸಿದ್ಧೇಶ್ವರ ಸಂಸ್ಥೆ ಹೊಸ ಕ್ರಾಂತಿ ಮಾಡುತ್ತಿದೆ ಎಂದು ವಿಜಯಪುರದ ನಗರ ಶಾಸಕರಾದ ಬಸನಗೌಡ ರಾ ಪಾಟೀಲ್ ಯತ್ನಾಳ ಹೇಳಿದರು.
ಇಂಡಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ನೂತನವಾಗಿ ನಿರ್ಮಾಣ ಮಾಡಲಾದ ಸಿದ್ಧೇಶ್ವರ ೨೪/೭ ಮೆಡಿಕಲ್‌ನ ಐದನೇ ಮಳಿಗೆಯ ಲೋಕಾರ್ಪಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿಜಯಪುರ ನಗರವನ್ನು ಮಾದರಿಯ ನಗರವನ್ನಾಗಿ ಮಾಡುವ ಉದ್ಧೇಶದಿಂದ ಶತಮಾನದ ಇತಿಹಾಸವುಳ್ಳ ಸಿದ್ಧೇಶ್ವರ ಸಂಸ್ಥೆಯನ್ನು ಆರೋಗ್ಯ ಕ್ಷೇತ್ರದ ಕಡೆಗೆ ಮುಖಮಾಡಿ ನಿಲ್ಲುವಂತೆ ಮಾಡಿದ್ದರ ಪರಿಣಾಮವಾಗಿ ಸಿದ್ಧಸಿರಿ ಹಾಗೂ ಸಿದ್ಧೇಶ್ವರ ಸಂಸ್ಥೆಯ ಸಹಯೋಗದಲ್ಲಿ ಶ್ರೀ ಸಿದ್ಧೇಶ್ವರ ಲೋಕ ಕಲ್ಯಾಣ ಚಾರಿಟೇಬಲ್ ಟ್ರಸ್ಟ್ ಸ್ಥಾಪನೆಯಾಯಿತು. ಇದರ ಮೂಲಕವಾಗಿ ಶ್ರೀ ಈಶ್ವರಗೌಡ ರಾ ಪಾಟೀಲ್ ಯತ್ನಾಳ ಚಾರಿಟಿ ಡಯಾಲಿಸಿಸ್ ಕೇಂದ್ರದ ಮೂಲಕ ಅತ್ಯಂತ ಕಡಿಮೆ ದರದಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿಯೇ ಅತ್ಯುತ್ತಮವಾದ ಹೈಟೆಕ್ ಡಯಾಲಿಸಿಸ್ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಜ್ಞಾನಯೋಗಿ ಶ್ರೀ ಸಿದ್ಧೇಶ್ವರ ಸ್ವಾಮೀಜಿಯವರ ಹೆಸರಲ್ಲಿ ನಿರ್ಮಾಣವಾದ ಜೆಎಸ್‌ಎಸ್ ಆಸ್ಪತ್ರೆಯಲ್ಲಿ ಅತ್ಯಂತ ಕಡಿಮೆ ದರದಲ್ಲಿ ಕಿಡ್ನಿ ಕಸಿ ಮಾಡುವ ಮೂಲಕ ಬಡವರಿಗೆ ನೆರವಾಗುತ್ತಲಿದ್ದೇವೆ. ರಾಮಮಂದಿರ ಉದ್ಘಾಟನೆಯ ಸಂದರ್ಭದಲ್ಲಿ ಸತತ ಏಳು ದಿನಗಳ ವರೆಗೂ ಉಚಿತ ಹೆರಿಯನ್ನು ಘೋಷಿಸುವ ಮೂಲಕ ೬೪ ಹೆರಿಗೆಗಳನ್ನು ಉಚಿತವಾಗಿ ನೆರವೇರಿಸಿ ಸಾರ್ವಜನಿಕರ ಆರ್ಥಿಕ ಹೊರೆಯನ್ನು ತಗ್ಗಿಸಿದ್ದೇವೆ. ಸಿದ್ಧೇಶ್ವರ ೨೪/೭ ಮಡಿಕಲ್‌ಗಳನ್ನು ಪ್ರಾರಂಭಿಸುವ ಮೂಲಕ ಹನ್ನೆರಡರಿಂದ ಇಪ್ಪತ್ತು ಪ್ರತಿಷತ ರಿಯಾಯಿತಿಯನ್ನು ನೀಡುವುದರೊಂದಿಗೆ ಮಧ್ಯರಾತ್ರಿಯಾದರೂ ಒಂದು ರೂಪಾಯಿಯ ಮಾತ್ರೆಯನ್ನು ಸಹ ಮನೆ ಬಾಗಿಲಿಗೆ ತಲುಪಿಸುವ ಕಾರ್ಯವನ್ನು ಮಾಡುತ್ತ ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದು ಆ ಸೇವೆಯನ್ನು ಇಂದು ಇಂಡಿಗೆ ವಿಸ್ತರಣೆ ಮಾಡುವ ಮೂಲಕ ಇಂಡಿ ಭಾಗದ ಜನರು ನನಗೆ ಮಾಡಿದ ಆಶಿರ್ವಾದದ ಋಣವನ್ನು ತೀರಿಸುವುದಕ್ಕೆ ಯತ್ನಿಸುತ್ತಿದ್ದೇನೆ ಎಂದು ಹೇಳಿದ ಅವರು ಸಿದ್ಧೇಶ್ವರ ಡೈಗ್ನೊಸ್ಟಿಕ್ ಮೂಲಕ ರಕ್ತ ಹಾಗೂ ಮೂತ್ರ ತಪಾಸಣಾ ಸೇವೆಯನ್ನು ಮನೆ ಬಾಗಿಲಿಗೆ ತಲುಪಿಸುತ್ತಿರುವುದು ಸಾರ್ವಜನಿಕರಿಗೆ ಅತ್ಯಂತ ಉಪಯುಕ್ತವಾಗಿದೆ. ನಮ್ಮ ಸಂಸ್ಥೆಯ ಈ ಎಲ್ಲ ಸೇವೆಗಳನ್ನು ಪಡೆದುಕೊಳ್ಳುವ ಮೂಲಕ ಸಾರ್ವಜನಿಕರು ಸದೃಢ ಆರೋಗ್ಯವಂತ ಸಮಾಜದ ನಿರ್ಮಾಣಕ್ಕೆ ಜೊತೆಯಾಗಬೇಕು ಎಂದು ಹೇಳಿದರು.
ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಇಂಡಿಯ ಮಾಜಿ ಶಾಸಕ ಎಸ್‌ಎಸ್ ಬಗಲಿಯವರು, ಇಂದು ಸಿದ್ಧೇಶ್ವರ ಲೋಕ ಕಲ್ಯಾಣ ಚಾರಿಟೇಬಲ್ ಟ್ರಸ್ಟ್ ಜಿಲ್ಲೆಯ ಹಲವು ಭಾಗಗಳಲ್ಲಿ ರಿಯಾಯಿತಿ ದರದ ಮೆಡಿಕಲ್ ಸೇವೆಯನ್ನು ಒದಗಿಸುತ್ತಿರುವುದು ನಿಜಕ್ಕೂ ಸಾರ್ವಜನಿಕರಿಗೆ ಬಹಳಷ್ಟು ನೆರವಾಗುತ್ತಿದೆ. ಅದರಲ್ಲೂ ಮಧ್ಯರಾತ್ರಿಯಲ್ಲಿ ಮನೆ ಬಾಗಿಲಿಗೆ ಮಾತ್ರೆಗಳನ್ನು ತಲುಪಿಸುವ ಕಾರ್ಯ ಸುಲಭವಲ್ಲ. ಅಂಥಹ ಕಾರ್ಯವನ್ನು ಮಾಡುತ್ತಿರುವ ಸಿದ್ಧೇಶ್ವರ ಸಂಸ್ಥೆಗೆ ಆ ದೇವರು ಒಳ್ಳೆಯದನ್ನು ಮಾಡಲಿ ಎಂದು ಹೇಳುವ ಮೂಲಕ ಮುಂದಿನ ದಿನಗಳಲ್ಲಿ ಈ ರೀತಿಯ ಸೇವೆ ಕರ್ನಾಟಕದ ಎಲ್ಲ ಭಾಗಗಳಲ್ಲಿಯೂ ಹಬ್ಬಲಿ ಹಾಗೂ ಇನ್ನೂ ಹೆಚ್ಚಿನ ಸೇವೆಯನ್ನು ಮಾಡುವ ಅವಕಾಶ ಬಸನಗೌಡ ರಾ ಪಾಟೀಲ್ ಯತ್ನಾಳ ಅವರಿಗೆ ನೀಡಲಿ ಎಂದು ಶುಭ ಹಾರೈಸಿದರು.
ಬಿಜೆಪಿ ಮುಖಂಡ ಕಾಸುಗೌಡ ಬಿರಾದಾರ, ಜನತಾದಳದ ಮುಖಂಡ ಬಿ.ಡಿ.ಪಾಟೀಲ ಅವರು ಕಾರ್ಯಕ್ರಮವನ್ನು ಉದ್ಧೇಶಿಸಿ ಮಾತನಾಡಿದರು.
ಗೊಳಸಾರ ಮಠದ ಅಭಿನವ ಶ್ರೀ ಅಭಿನವ ಪುಂಡಲಿಂಗ ಶ್ರೀಗಳು ಸಾನಿಧ್ಯ ವಹಿಸಿದ್ದರು.
ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತದ ನಿರ್ದೇಶಕ ರಾಮನಗೌಡ ಬ. ಪಾಟೀಲ್ ಯತ್ನಾಳ, ಜೆಎಸ್‌ಎಸ್ ನ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಡಾ.ಶರಣ ಮಳಖೆಡ್ಕರ್, ತಾಲೂಕಾ ವೈದ್ಯಾಧಿಕಾರಿ ಅರ್ಚನಾ ಕುಲಕರ್ಣಿ, ಡಾ. ಎಂ.ಜಿ.ಪಾಟೀಲ, ಸಿ.ಎಂ.ಶಹಾ, ರಮೇಶ ಗುತ್ತೇದಾರ, ಜಗದೀಶ ಕ್ಷತ್ರಿ ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವೃತ್ತಪತ್ರಿಕೆಗಳು ಮಾನವ ಕಳಕಳಿಯ ಪ್ರತಿಬಿಂಬಗಳು

ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವುದು ನನ್ನ ಸಂಕಲ್ಪ

ವೈದ್ಯಕೀಯ ಚಿಕಿತ್ಸೆಗೆ ನಾವಿನ್ಯತೆಯ ಸ್ಪರ್ಶನೀಡಿ ಆಯುರ್ವೇದ ಉಳಿಸಿ

ಬಾಂಗ್ಲಾದ ಅಲ್ಪಸಂಖ್ಯಾತ ಹಿಂದೂಗಳಿಗೆ ರಕ್ಷಣೆ ಒದಗಿಸಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವೃತ್ತಪತ್ರಿಕೆಗಳು ಮಾನವ ಕಳಕಳಿಯ ಪ್ರತಿಬಿಂಬಗಳು
    In (ರಾಜ್ಯ ) ಜಿಲ್ಲೆ
  • ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವುದು ನನ್ನ ಸಂಕಲ್ಪ
    In (ರಾಜ್ಯ ) ಜಿಲ್ಲೆ
  • ವೈದ್ಯಕೀಯ ಚಿಕಿತ್ಸೆಗೆ ನಾವಿನ್ಯತೆಯ ಸ್ಪರ್ಶನೀಡಿ ಆಯುರ್ವೇದ ಉಳಿಸಿ
    In (ರಾಜ್ಯ ) ಜಿಲ್ಲೆ
  • ಬಾಂಗ್ಲಾದ ಅಲ್ಪಸಂಖ್ಯಾತ ಹಿಂದೂಗಳಿಗೆ ರಕ್ಷಣೆ ಒದಗಿಸಿ
    In (ರಾಜ್ಯ ) ಜಿಲ್ಲೆ
  • ಕರಡಕಲ್ ಗ್ರಾಪಂ ಅಧ್ಯಕ್ಷರಾಗಿ ದೇವಿಂದ್ರಪ್ಪ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಗಣಿತ ಜೀವನದ ಅವಿಭಾಜ್ಯ ಅಂಗ :ಶಿಕ್ಷಕ ಸಂಗನಬಸವ
    In (ರಾಜ್ಯ ) ಜಿಲ್ಲೆ
  • ವಿವಾದಗಳಿಗೆ ಸಂಧಾನದ ಮಾರ್ಗ: ಜ೨ ರಿಂದ ಮಧ್ಯಸ್ಥಿಕೆ ಅಭಿಯಾನ
    In (ರಾಜ್ಯ ) ಜಿಲ್ಲೆ
  • ಮನೆಯಿಂದಲೇ ಇ-ಖಾತಾ ಪಡೆವ ಕುರಿತು ಜಾಗೃತಿ
    In (ರಾಜ್ಯ ) ಜಿಲ್ಲೆ
  • ಕುಡಿವ ನೀರು ಸಮರ್ಪಕ ಪೂರೈಕೆಗೆ ಆಗ್ರಹಿಸಿ ಗ್ರಾಮಸ್ಥರಿಂದ ಮನವಿ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕರು ಜನಸಂಪರ್ಕ ಸಭೆಗೆ ಬರದಂತೆ ಕಾರ್ಯನಿರ್ವಹಿಸಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.