Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜನನಿ ಮೊದಲ ಗುರು :ಶಾರದಾ ಮುಳ್ಳೂರ

ಕೃಷ್ಣಾ ನದಿಯನ್ನು ಗೌರವಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ :ಬೆಳ್ಳುಬ್ಬಿ

ಗುಂಟಾ ಪ್ಲಾಟ್‌ ನಿವಾಸಿಗಳಿಗೆ ಕಾನೂನು ಭದ್ರತೆ ಒದಗಿಸಲು ಮನವಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ದಾಸೋಹದ ಮಹತ್ವ ಸಾರಿದ ಡಾ.ಶಿವಕುಮಾರ ಸ್ವಾಮೀಜಿ
(ರಾಜ್ಯ ) ಜಿಲ್ಲೆ

ದಾಸೋಹದ ಮಹತ್ವ ಸಾರಿದ ಡಾ.ಶಿವಕುಮಾರ ಸ್ವಾಮೀಜಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ: ವಿಶ್ವಗುರು ಬಸವೇಶ್ವರರ ದಾಸೋಹ ತತ್ವವನ್ನು ಅಳವಡಿಸಿಕೊಳ್ಳುವ ಮೂಲಕ ಶೈಕ್ಷಣಿಕ ಕ್ಷೇತ್ರದಲ್ಲಿ ಅನೇಕ ವಿದ್ಯಾರ್ಥಿಗಳಿಗೆ ಜ್ಞಾನ, ಅನ್ನ ದಾಸೋಹವನ್ನು ಕೈಗೊಳ್ಳುವ ಮೂಲಕ ಇಡೀ ಜಗತ್ತಿಗೆ ದಾಸೋಹದ ಮಹತ್ವವನ್ನು ಸಿದ್ದಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ ತಿಳಿಸಿಕೊಟ್ಟಿದ್ದರಿಂದಲೇ ಅವರ ಜನ್ಮ ದಿನವನ್ನು ದಾಸೋಹ ದಿನವನ್ನಾಗಿ ಆಚರಿಸುವ ಮೂಲಕ ಅವರಿಗೆ ಇಡೀ ನಾಡು ನಮನ ಸಲ್ಲಿಸುತ್ತಿದೆ ಎಂದು ಯರನಾಳ ವಿರಕ್ತಮಠದ ಗುರುಸಂಗನಬಸವ ಸ್ವಾಮೀಜಿ ಹೇಳಿದರು.
ತಾಲೂಕಿನ ಸುಕ್ಷೇತ್ರ ಯರನಾಳ ಗ್ರಾಮದ ವಿರಕ್ತಮಠದ ಲಿಂ. ಪಂಪಾಪತಿ ಶಿವಯೋಗಿ ಜಾತ್ರಾಮಹೋತ್ಸವ ಹಾಗೂ ಗುರುಸಂಗನಬಸವ ಸ್ವಾಮೀಜಿಗಳ ಜನ್ಮಸುವರ್ಣ ಮಹೋತ್ಸವದಂಗವಾಗಿ ೧೭ ದಿನ ಕಾಲ ಹಮ್ಮಿಕೊಂಡಿರುವ ಸೊನ್ನಲಾಪೂರದ ಶಿವಯೋಗಿ ಸಿದ್ದರಾಮೇಶ್ವರ ಚರಿತ್ರೆ ಪುರಾಣದಲ್ಲಿ ಸೋಮವಾರ ಸಂಜೆ ದಾಸೋಹ ದಿನದಂಗವಾಗಿ ಹಮ್ಮಿಕೊಂಡಿದ್ದ ನುಡಿನಮನ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದ ಅವರು, ಡಾ. ಶಿವಕುಮಾರ ಸ್ವಾಮೀಜಿ ಅವರು ತಮಗಾಗಿ ಬದುಕದೇ ಇಡೀ ಸಮಾಜಕ್ಕಾಗಿ ಬದುಕಿದ ಸಂತ. ಇನ್ನೊಬ್ಬರ ಬದುಕು ಸುಂದರ ಮಾಡಬೇಕೆಂಬ ಸದುದ್ದೇಶದಿಂದ ನಾಡಿನ ಲಕ್ಷಾಂತರ ಮಕ್ಕಳಿಗೆ ಬೆಳಕಾದರು. ಇಡೀ ಸಮಾಜದ ಒಳಿತಿಗಾಗಿ ಶ್ರಮಿಸಿದರು. ಬಂಥನಾಳದ ಸಂಗನಬಸವ ಶಿವಯೋಗಿಗಳಂತೆ ಶಿವಕುಮಾರ ಸ್ವಾಮೀಜಿಯವರು ದಾಸೋಹಕ್ಕೆ ಮಹತ್ವ ನೀಡಿದ್ದರು. ಬಸವ ಪರಂಪರೆಯನ್ನು ಯಡಿಯೂರ ಸಿದ್ದಲಿಂಗೇಶ್ವರರು ಜಾಗೃತಿಗೊಳಿಸಿದರು. ದಾಸೋಹ, ಕಾಯಕ, ಶೈಕ್ಷಣಿಕ ಸೇವೆ ವಿರಕ್ತಮಠದ ಪರಂಪರೆಯಾಗಿದೆ ಎಂದರು.
ನಾವೆಲ್ಲರೂ ಆರ್ಯ ಪದ್ಧತಿ ಕೈಬಿಡಬೇಕಿದೆ. ಪುರುಷ ಪ್ರಧಾನ ಸಮಾಜ ಅಳಿದು ತಾಯಿಂದಿರಿಗೂ ಗೌರವ ಸಿಗುವಂತಾಗಬೇಕು. ಅಂದಾಗ ಬಸವೇಶ್ವರರ ಸಮಾನತೆಗೆ ಒಂದು ಮೌಲ್ಯ ಬರಲು ಸಾಧ್ಯ. ಲಿಂಗ ಕಟ್ಟಿಕೊಂಡ ಎಲ್ಲ ಮಹಿಳೆಯರೂ ಸುಮಂಗಲೆಯರೇ ಆಗಿದ್ದಾರೆ. ನಮ್ಮ ಜಾತ್ರಾಮಹೋತ್ಸವದಲ್ಲಿ ಲಿಂಗ ಕಟ್ಟಿಕೊಂಡ ಎಲ್ಲ ಮಹಿಳೆಯರಿಗೆ ಏ.13 ರಂದು ಉಡಿ ತುಂಬುವ ಕಾರ್ಯಕ್ರಮ ಮಾಡಲಾಗುವುದು. ನಮ್ಮ ಜನ್ಮ ಸುವರ್ಣ ಮಹೋತ್ಸವದಂಗವಾಗಿ ೫೦ ಸಾವಿರ ಸಸಿಗಳನ್ನು ನೆಡುವ ಸಂಕಲ್ಪ ಇದೆ. ನಾವು ಮುಂಬರುವ ದಿನಗಳಲ್ಲಿ ಪ್ರಸಾದ ರೂಪದಲ್ಲಿ ಭಕ್ತರಿಗೆ ಸಸಿಗಳನ್ನು ನೀಡಿ ಅವು ಬೆಳೆಯುವಂತೆ ನೋಡಿಕೊಳ್ಳಬೇಕೆಂದು ಹೇಳುವುದಾಗಿ ಹೇಳಿದರು.
ಹೂವಿನಹಿಪ್ಪರಗಿ ಪತ್ರಿವನ ಮಠದ ದ್ರಾಕ್ಷಾಯಿಣಿ ಅಮ್ಮನವರು ಮಾತನಾಡಿದರು.
ವಿಜಯಪುರದ ಶಾಂತಾಶ್ರಮದ ಗುರುಶಾಂತೇಶ್ವರ ಸ್ವಾಮೀಜಿ ಮಾತನಾಡಿದರು.
ವೇದಿಕೆಯಲ್ಲಿ ಪ್ರವಚನಕಾರ ಕೊಡೆಕಲ್ಲದ ಗಂಗಾಧರ ಶಾಸ್ತ್ರೀಜಿ, ಬಸವರಾಜ ಮಣ್ಣೂರ ಇದ್ದರು. ವಿರೇಶ ವಾಲಿ, ಸಿದ್ದಾರ್ಥ ಬೈಚಬಾಳ, ಬಾಗೇಕುಮಾರ ಗಂಗಾಪೂರ, ಪುನೀತ ತಾವರಖೇಡ ಅವರಿಂದ ಸಂಗೀತ ಸುಧೆ ಹರಿಯಿತು. ಶರಣಬಸು ಹಳೆಮನಿ ನಿರೂಪಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜನನಿ ಮೊದಲ ಗುರು :ಶಾರದಾ ಮುಳ್ಳೂರ

ಕೃಷ್ಣಾ ನದಿಯನ್ನು ಗೌರವಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ :ಬೆಳ್ಳುಬ್ಬಿ

ಗುಂಟಾ ಪ್ಲಾಟ್‌ ನಿವಾಸಿಗಳಿಗೆ ಕಾನೂನು ಭದ್ರತೆ ಒದಗಿಸಲು ಮನವಿ

ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜನನಿ ಮೊದಲ ಗುರು :ಶಾರದಾ ಮುಳ್ಳೂರ
    In (ರಾಜ್ಯ ) ಜಿಲ್ಲೆ
  • ಕೃಷ್ಣಾ ನದಿಯನ್ನು ಗೌರವಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ :ಬೆಳ್ಳುಬ್ಬಿ
    In (ರಾಜ್ಯ ) ಜಿಲ್ಲೆ
  • ಗುಂಟಾ ಪ್ಲಾಟ್‌ ನಿವಾಸಿಗಳಿಗೆ ಕಾನೂನು ಭದ್ರತೆ ಒದಗಿಸಲು ಮನವಿ
    In (ರಾಜ್ಯ ) ಜಿಲ್ಲೆ
  • ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಬರ ಸೆಳೆದ ಭೂಮಿಗೆ ಪರ್ಯಾಯ ಬೆಳೆ ಸಂಜೀವಿನಿ
    In ವಿಶೇಷ ಲೇಖನ
  • ಕಳೆದುಕೊಂಡು ಅಳುವುದಕ್ಕಿಂತ..?
    In ವಿಶೇಷ ಲೇಖನ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 29, 2026
    In ದಿನಪತ್ರಿಕೆ
  • ಪರೀಕ್ಷಾ ನಿಯಮಗಳಿಂದ ಗ್ರಾಮೀಣ ಅಭ್ಯರ್ಥಿಗಳಿಗೆ ಅನ್ಯಾಯ
    In (ರಾಜ್ಯ ) ಜಿಲ್ಲೆ
  • ನೂತನ ವ್ಯವಸ್ಥಾಪಕರಿಗೆ ಎಸ್‌ಸಿ-ಎಸ್‌ಟಿ ನೌಕರ ಸಂಘದಿಂದ ಸ್ವಾಗತ
    In (ರಾಜ್ಯ ) ಜಿಲ್ಲೆ
  • ಯುವ ಪ್ರತಿಭೆಗಳ ಕನಸಿಗೆ ರೆಕ್ಕೆ ನೀಡುವ ಕೃತಕ ಬುದ್ದಿಮತ್ತೆ ವೇದಿಕೆಗಳು
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.