Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ದಾಸೋಹದ ಮಹತ್ವ ಸಾರಿದ ಡಾ.ಶಿವಕುಮಾರ ಸ್ವಾಮೀಜಿ
(ರಾಜ್ಯ ) ಜಿಲ್ಲೆ

ದಾಸೋಹದ ಮಹತ್ವ ಸಾರಿದ ಡಾ.ಶಿವಕುಮಾರ ಸ್ವಾಮೀಜಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ: ವಿಶ್ವಗುರು ಬಸವೇಶ್ವರರ ದಾಸೋಹ ತತ್ವವನ್ನು ಅಳವಡಿಸಿಕೊಳ್ಳುವ ಮೂಲಕ ಶೈಕ್ಷಣಿಕ ಕ್ಷೇತ್ರದಲ್ಲಿ ಅನೇಕ ವಿದ್ಯಾರ್ಥಿಗಳಿಗೆ ಜ್ಞಾನ, ಅನ್ನ ದಾಸೋಹವನ್ನು ಕೈಗೊಳ್ಳುವ ಮೂಲಕ ಇಡೀ ಜಗತ್ತಿಗೆ ದಾಸೋಹದ ಮಹತ್ವವನ್ನು ಸಿದ್ದಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ ತಿಳಿಸಿಕೊಟ್ಟಿದ್ದರಿಂದಲೇ ಅವರ ಜನ್ಮ ದಿನವನ್ನು ದಾಸೋಹ ದಿನವನ್ನಾಗಿ ಆಚರಿಸುವ ಮೂಲಕ ಅವರಿಗೆ ಇಡೀ ನಾಡು ನಮನ ಸಲ್ಲಿಸುತ್ತಿದೆ ಎಂದು ಯರನಾಳ ವಿರಕ್ತಮಠದ ಗುರುಸಂಗನಬಸವ ಸ್ವಾಮೀಜಿ ಹೇಳಿದರು.
ತಾಲೂಕಿನ ಸುಕ್ಷೇತ್ರ ಯರನಾಳ ಗ್ರಾಮದ ವಿರಕ್ತಮಠದ ಲಿಂ. ಪಂಪಾಪತಿ ಶಿವಯೋಗಿ ಜಾತ್ರಾಮಹೋತ್ಸವ ಹಾಗೂ ಗುರುಸಂಗನಬಸವ ಸ್ವಾಮೀಜಿಗಳ ಜನ್ಮಸುವರ್ಣ ಮಹೋತ್ಸವದಂಗವಾಗಿ ೧೭ ದಿನ ಕಾಲ ಹಮ್ಮಿಕೊಂಡಿರುವ ಸೊನ್ನಲಾಪೂರದ ಶಿವಯೋಗಿ ಸಿದ್ದರಾಮೇಶ್ವರ ಚರಿತ್ರೆ ಪುರಾಣದಲ್ಲಿ ಸೋಮವಾರ ಸಂಜೆ ದಾಸೋಹ ದಿನದಂಗವಾಗಿ ಹಮ್ಮಿಕೊಂಡಿದ್ದ ನುಡಿನಮನ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದ ಅವರು, ಡಾ. ಶಿವಕುಮಾರ ಸ್ವಾಮೀಜಿ ಅವರು ತಮಗಾಗಿ ಬದುಕದೇ ಇಡೀ ಸಮಾಜಕ್ಕಾಗಿ ಬದುಕಿದ ಸಂತ. ಇನ್ನೊಬ್ಬರ ಬದುಕು ಸುಂದರ ಮಾಡಬೇಕೆಂಬ ಸದುದ್ದೇಶದಿಂದ ನಾಡಿನ ಲಕ್ಷಾಂತರ ಮಕ್ಕಳಿಗೆ ಬೆಳಕಾದರು. ಇಡೀ ಸಮಾಜದ ಒಳಿತಿಗಾಗಿ ಶ್ರಮಿಸಿದರು. ಬಂಥನಾಳದ ಸಂಗನಬಸವ ಶಿವಯೋಗಿಗಳಂತೆ ಶಿವಕುಮಾರ ಸ್ವಾಮೀಜಿಯವರು ದಾಸೋಹಕ್ಕೆ ಮಹತ್ವ ನೀಡಿದ್ದರು. ಬಸವ ಪರಂಪರೆಯನ್ನು ಯಡಿಯೂರ ಸಿದ್ದಲಿಂಗೇಶ್ವರರು ಜಾಗೃತಿಗೊಳಿಸಿದರು. ದಾಸೋಹ, ಕಾಯಕ, ಶೈಕ್ಷಣಿಕ ಸೇವೆ ವಿರಕ್ತಮಠದ ಪರಂಪರೆಯಾಗಿದೆ ಎಂದರು.
ನಾವೆಲ್ಲರೂ ಆರ್ಯ ಪದ್ಧತಿ ಕೈಬಿಡಬೇಕಿದೆ. ಪುರುಷ ಪ್ರಧಾನ ಸಮಾಜ ಅಳಿದು ತಾಯಿಂದಿರಿಗೂ ಗೌರವ ಸಿಗುವಂತಾಗಬೇಕು. ಅಂದಾಗ ಬಸವೇಶ್ವರರ ಸಮಾನತೆಗೆ ಒಂದು ಮೌಲ್ಯ ಬರಲು ಸಾಧ್ಯ. ಲಿಂಗ ಕಟ್ಟಿಕೊಂಡ ಎಲ್ಲ ಮಹಿಳೆಯರೂ ಸುಮಂಗಲೆಯರೇ ಆಗಿದ್ದಾರೆ. ನಮ್ಮ ಜಾತ್ರಾಮಹೋತ್ಸವದಲ್ಲಿ ಲಿಂಗ ಕಟ್ಟಿಕೊಂಡ ಎಲ್ಲ ಮಹಿಳೆಯರಿಗೆ ಏ.13 ರಂದು ಉಡಿ ತುಂಬುವ ಕಾರ್ಯಕ್ರಮ ಮಾಡಲಾಗುವುದು. ನಮ್ಮ ಜನ್ಮ ಸುವರ್ಣ ಮಹೋತ್ಸವದಂಗವಾಗಿ ೫೦ ಸಾವಿರ ಸಸಿಗಳನ್ನು ನೆಡುವ ಸಂಕಲ್ಪ ಇದೆ. ನಾವು ಮುಂಬರುವ ದಿನಗಳಲ್ಲಿ ಪ್ರಸಾದ ರೂಪದಲ್ಲಿ ಭಕ್ತರಿಗೆ ಸಸಿಗಳನ್ನು ನೀಡಿ ಅವು ಬೆಳೆಯುವಂತೆ ನೋಡಿಕೊಳ್ಳಬೇಕೆಂದು ಹೇಳುವುದಾಗಿ ಹೇಳಿದರು.
ಹೂವಿನಹಿಪ್ಪರಗಿ ಪತ್ರಿವನ ಮಠದ ದ್ರಾಕ್ಷಾಯಿಣಿ ಅಮ್ಮನವರು ಮಾತನಾಡಿದರು.
ವಿಜಯಪುರದ ಶಾಂತಾಶ್ರಮದ ಗುರುಶಾಂತೇಶ್ವರ ಸ್ವಾಮೀಜಿ ಮಾತನಾಡಿದರು.
ವೇದಿಕೆಯಲ್ಲಿ ಪ್ರವಚನಕಾರ ಕೊಡೆಕಲ್ಲದ ಗಂಗಾಧರ ಶಾಸ್ತ್ರೀಜಿ, ಬಸವರಾಜ ಮಣ್ಣೂರ ಇದ್ದರು. ವಿರೇಶ ವಾಲಿ, ಸಿದ್ದಾರ್ಥ ಬೈಚಬಾಳ, ಬಾಗೇಕುಮಾರ ಗಂಗಾಪೂರ, ಪುನೀತ ತಾವರಖೇಡ ಅವರಿಂದ ಸಂಗೀತ ಸುಧೆ ಹರಿಯಿತು. ಶರಣಬಸು ಹಳೆಮನಿ ನಿರೂಪಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.