ಬಸವನಬಾಗೇವಾಡಿ: ಪಟ್ಟಣ ಸೇರಿದಂತೆ ಅಖಂಡ ತಾಲೂಕಿನಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯ ಗಣಿತ ವಿಷಯ ಪರೀಕ್ಷೆ ಮಂಗಳವಾರ ಶಾಂತಿಯುತವಾಗಿ ಜರುಗಿತು. ಅಖಂಡ ತಾಲೂಕಿನ ಒಟ್ಟು ೧೮ ಪರೀಕ್ಷಾ ಕೇಂದ್ರಗಳಿವೆ. ಗಣಿತ ವಿಷಯ ಪರೀಕ್ಷೆಗೆ ೫,೪೪೬ ವಿದ್ಯಾರ್ಥಿಗಳು ನೋಂದಾಯಿಸಿದ್ದರು. ಇದರಲ್ಲಿ ೧೧೭ ವಿದ್ಯಾರ್ಥಿಗಳು ಗೈರು ಉಳಿಯುವ ಮೂಲಕ ೫,೩೨೯ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ಇಂದು ನಡೆದ ಪರೀಕ್ಷೆಯಲ್ಲಿ ಅಖಂಡ ತಾಲೂಕಿನಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯು ವ್ಯವಸ್ಥಿತವಾಗಿ ನಡೆಯಿತು. ಯಾವುದೇ ಡಿಬಾರ್ ಆಗಿಲ್ಲ ಎಂದು ಕ್ಷೇತ್ರಶಿಕ್ಷಣಾಧಿಕಾರಿ ವಸಂತ ರಾಠೋಡ ತಿಳಿಸಿದರು.
Subscribe to Updates
Get the latest creative news from FooBar about art, design and business.
Related Posts
Add A Comment
