ಅಫಜಲಪುರ: ಭಾರತ ಸಂವಿಧಾನದಲ್ಲಿ ಮತದಾನದ ಅರ್ಹತೆ ಪಡೆದ ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡೂವ ಮೂಲಕ ಮತದಾನದ ಶ್ರೇಷ್ಠತೆಯನ್ನು ಕಾಪಾಡಿಕೊಳ್ಳಬೇಕು ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಹೇಳಿದರು.
ಪಟ್ಟಣದ ತಾಲೂಕು ಸಭಾಂಗಣದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ನಡೆದ ಮತದಾನದ ಪ್ರತಿಜ್ಞಾ ವಿಧಿ ಬೋಧನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಚುನಾವಣೆಗಳು ಶಾಂತಿಯುತವಾಗಿ ನಡೆಯುವಂತೆ ಸಾರ್ವಜನಿಕರಲ್ಲಿ ಮತದಾನದ ಮಹತ್ವದ ಕುರಿತು ತಿಳಿ ಹೇಳಬೇಕು. ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಬರುವ ಪ್ರತಿಯೊಬ್ಬ ಸಿಬ್ಬಂದಿಗಳು ಮತದಾನದ ಕುರಿತು ಜಾಗೃತಿ ಮೂಡಿಸುವ ಕೆಲಸ ಮಾಡಬೇಕು. ಯಾವುದೇ ಆಸೆ ಆಮಿಷಗಳಿಗೊಳಗಾಗದೆ ಮತದಾನ ಮಾಡಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಎಡಿ ರಮೇಶ ಪಾಟೀಲ, ಕ್ಷೇತ್ರ ಶಿಕ್ಷಣಾಧಿಕಾರಿ ಹಾಜಿಮಲಂಗ, ಪಿಡಿಒ ಈರಯ್ಯ ಹಿರೇಮಠ, ಪಾರ್ವತಿ ಪೂಜಾರಿ, ಮೇಗಾ ಪಾಟೀಲ, ಸಾವಿತ್ರಿ ಮೇತ್ರಿ, ಅನಸೂಯಾ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

