ಚುನಾವಣಾ ಪ್ರಚಾರಾರ್ಥ ಕಾರ್ಯಕರ್ತರ ಸಭೆ | ಶಾಸಕ ಅಶೋಕ ಮನಗೂಳಿ ಮನವಿ
ಮೋರಟಗಿ: ಕಳೆದ ಎರಡು ಬಾರಿಯೂ ಕೂಡಾ ಬಿಜೆಪಿ ಸರ್ಕಾರ ಸುಳ್ಳು ಭರವಸೆಗಳನ್ನು ನೀಡುವ ಮೂಲಕ ಮತದಾರರಿಗೆ ಮರಳು ಮಾಡಿ ಅಧಿಕಾರಕ್ಕೆ ಬಂದಿದೆ ಹೊರತು ಅಭಿವೃದ್ಧಿಯಿಂದಲ್ಲ, ದೇಶದ ಅಭಿವೃದ್ಧಿಗಾಗಿ ಕಾಂಗ್ರೆಸ್ ಅಭ್ಯರ್ಥಿಗೆ ಗೆಲ್ಲಿಸಿ ಎಂದು ಶಾಸಕ ಅಶೋಕ ಮನಗೂಳಿ ಮನವಿ ಮಾಡಿದರು.
ಲೋಕಸಭಾ ಚುನಾವಣೆ ಪ್ರಯುಕ್ತ ಮಂಗಳವಾರ ಸಾಯಂಕಾಲ ಗ್ರಾಮದ ಕೇರಿಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಚುನಾವಣಾ ಪ್ರಚಾರಾರ್ಥವಾಗಿ ಹಮ್ಮಿಕೊಂಡಿದ್ದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.
ನಮ್ಮ ಸರಕಾರ ಚುನಾವಣೆ ಪೂರ್ವದಲ್ಲಿ ಜನರಿಗೆ ಕೊಟ್ಟ ಭರವಸೆಗಳನ್ನು ಸಂಪೂರ್ಣವಾಗಿ ಈಡೇರಿಸಿದೆ ಸದ್ಯಕ್ಕೆ ರಾಹುಲ್ ಗಾಂಧಿ ಅವರು ಕೊಟ್ಟಿರುವ ಎಲ್ಲ ಭರವಸೆಗಳು ಕೂಡಾ ಖಂಡಿತವಾಗಿಯೂ ಈಡೇರಿಸುತ್ತಾರೆ ಎನ್ನುವ ಭರವಸೆ ನಮ್ಮಲ್ಲಿದೆ ದೇಶದ ಸಮಗ್ರ ಅಭಿವೃದ್ಧಿಗಾಗಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು.
ನಂತರ ಮಾಜಿ ಶಾಸಕ ಶರಣಪ್ಪ ಸುಣಗಾರ ಮಾತನಾಡಿ, ಈ ದೇಶದಲ್ಲಿರುವ ನಿರ್ಗತಿಕರ ಬಡವರ ದೀನ ದಲಿತರ ಹಿಂದುಳಿದ ವರ್ಗಗಳ ಪಾಲಿನ ಆಶಾ ಕಿರಣವಾಗಿ ನಿಂತಿ ಏಕೈಕ ಪಕ್ಷ ಕಾಂಗ್ರೆಸ್ ಪಕ್ಷ, ಲೋಕಸಭಾ ಚುನಾವಣೆಯ ಅಭ್ಯರ್ಥಿ ಪ್ರೋ, ರಾಜು ಆಲಗೂರ ಅವರು ಎರಡು ಬಾರಿ ಶಾಸಕರಾಗಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ಮಾಡಿದ ಅನಿಭವವಿದೆ ಅವರ ಗೆಲುವಿಗಾಗಿ ಕಾರ್ಯಕರ್ತರು ಭೂತಮಟ್ಟದಲ್ಲಿ ಸಂಚರಿಸಿ ಕಾಂಗ್ರೆಸ್ ಸಾದನೆಗಳು ಜನರಿಗೆ ತಿಳಿಸಿ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಕೈಜೋಡಿಸಬೇಕು ಎಂದರು.
ಅಭ್ಯರ್ಥಿ ಪ್ರೋ, ರಾಜು ಆಲಗೂರ ಮಾತನಾಡಿ, ಚುನಾವಣೆ ಬಂದಾಗ ಬಿಜೆಪಿಯವರು ಕುತಂತ್ರ ರಾಜಕೀಯ ಆರಂಭವಾಗುತ್ತದೆ ಸುಳ್ಳಿನ ಸರಮಾಲೆಗಳು ಶುರುವಾಗುತ್ತವೆ. ಸಾರ್ವಜನಿಕರು ಸುಳ್ಳು ಬಿಜೆಪಿ ಸರ್ಕಾರಕ್ಕೆ ತಕ್ಕ ಪಾಠ ಕಲಿಸುವ ಸಂದರ್ಭ ಬಂದಿದೆ. ತಾವೆಲ್ಲರೂ ಒಗ್ಗಟ್ಟಿನಿಂದ ಚುನಾವಣೆ ಎದುರಿಸಬೇಕು. ನನ್ನನ್ನು ಗೆಲ್ಲಿಸುವುದರ ಜೊತೆಗೆ ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರ ಕೈ ಬಲಪಡಿಸಬೇಕು ಎಂದರು.
ಕಾರ್ಯಕರ್ತರ ಸಭೆಯಲ್ಲಿಮಾಜಿ ಸಿಂದಗಿ ಬ್ಲಾಕ್ ಅಧ್ಯಕ್ಷ ಸುರೇಶ ಪೂಜಾರಿ, ಆಲ್ಮೆಲ್ ಬ್ಲಾಕ್ ಅಧ್ಯಕ್ಷ ಸಾದಿಕ್ ಸುಂಬಡ್ ಮಾಜಿ ಜಿ ಪಂ ಸದಸ್ಯ ಎನ್ ಆರ್ ತಿವಾರಿ, ಎಂ ಕೆ ಕಣ್ಣಿ, ಮುತ್ತಪ್ಪ ಸಿಂಗೆ ರಜಾಕ್ ಬಾಗವಾನ, ಬಂದೇನವಾಜ ಕಣ್ಣಿ, ಅರವಿಂದ ಹಂಗರಗಿ, ಚನ್ನು ವಾರದ, ಶ್ರೀಶೈಲ್ ಕವಲಗಿ, ಸೇರಿದಂತೆ ಮೋರಟಗಿ ಸುತ್ತಲಿನ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತರು ಇದ್ದರು.

