ವಿಜಯಪುರ: ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನ ರಾಮ್ ರವರ 117 ನೇ ಜಯಂತಿ ಆಚರಣೆಯನ್ನು, ಲೋಕಸಭೆ ಸಾರ್ವತ್ರಿಕ ಚುನಾವಣಾ ನೀತಿ ಸಂಹಿತೆ ಹಿನ್ನಲೆಯಲ್ಲಿ, ಜಿಲ್ಲಾಡಳಿತದಿಂದ
ಏಪ್ರೀಲ್ 05 ರಂದು ಬೆಳಿಗ್ಗೆ 10ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವುದರ ಮೂಲಕ ಸರಳವಾಗಿ ಆಚರಿಸಲಾಗುವುದು.
ಅದಕ್ಕೂ ಮುಂಚೆ ಬೆಳಿಗ್ಗೆ 8 ಗಂಟೆಗೆ ನಗರದ ಗೋದಾವರಿ ಹೋಟೆಲ್ ಹತ್ತಿರವಿರುವ ಡಾ.ಬಾಬು ಜಗಜೀವನರಾಮ್ ರವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಸಮರ್ಪಿಸಲಾಗುವುದು. ಸಾರ್ವಜನಿಕರು, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಎಲ್ಲ ಸಿಬ್ಬಂದಿ ಭಾಗವಹಿಸಲು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
