ಸಿಂದಗಿ: ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೋಲಿನ ಭೀತಿ ಎದುರಾದ ಹಿನ್ನಲೆ ಬಿಜೆಪಿ ಅಭ್ಯರ್ಥಿ ಕುರಿತಾಗಿ ಅಪಪ್ರಚಾರಕ್ಕೆ ಮುಂದಾಗಿದ್ದಾರೆ ಎಂದು ಬಿಜೆಪಿ ಸಿಂದಗಿ ತಾಲೂಕು ಎಸ್.ಟಿ ಮೋರ್ಚಾ ಅಧ್ಯಕ್ಷ ಪ್ರಶಾಂತ ಕದ್ದರಕಿ ಆಕ್ರೋಶ ವ್ಯಕ್ತಪಡಿಸಿದರು.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು ಸಂಸದ ರಮೇಶ ಜಿಗಜಿಣಗಿ ಎಲ್ಲಾ ಸಮುದಾಯವನ್ನು ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣೆ ಸ್ಪರ್ಧಿಸಿದ್ದಾರೆ. ಸೋಲಿನ ಭೀತಿಯಲ್ಲಿರುವ ಕಾಂಗ್ರೆಸ್ ಪಕ್ಷ ಬಿಜೆಪಿ ಪಕ್ಷದ ಅಭ್ಯರ್ಥಿಯ ವಿರುದ್ದ ಅಪಪ್ರಚಾರ ನಡೆಸುತ್ತಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ದಲಿತರಿಗೆ ಹಿಂದುಳಿದ ವರ್ಗದ ಜನರಿಗೆ ಮಾಡಿದ ಮೋಸ ಮರೆಯುವಂತಿಲ್ಲ. ೨೫ ಸಾವಿರ ಕೋಟಿ ಎಸ್.ಸಿ ಮೀಸಲಾತಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿ ಮೀಸಲಾತಿಗೆ ಒಳಪಡುವ ಸಮುದಾಯಗಳಿಗೆ ಅನ್ಯಾಯ ಮಾಡಿದ ನಿರ್ದಶನವಿದೆ. ಗ್ಯಾರಂಟಿ ಯೋಜನೆಯ ಹೆಸರಲ್ಲಿ ಮಾಡಿದ ಮೋಸ ಲೋಕಸಭೆ ಚುನಾವಣೆಯಲ್ಲಿ ನಡೆಯುವುದಿಲ್ಲ. ಸೋಲಿನ ಭೀತಿ ಎದುರಾದ ಹಿನ್ನಲೆ ಅಪಪ್ರಚಾರ ಸಲ್ಲದು ಎಂದು ಹೇಳಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

