Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶಾಲವಾಗಿ ಹಬ್ಬಿ ಬೆಳೆಯುವ ವಟವೃಕ್ಷ

ಮಧ್ಯಸ್ಥಗಾರರ 2.0 ಅಭಿಯಾನ ಸದುಪಯೋಗಕ್ಕೆ ನ್ಯಾ. ಶಶಿಧರ ಸೂಚನೆ

ದಿ.ಅಟಲ್ ಬಿಹಾರಿ ವಾಜಪೇಯಿ ಜನ್ಮದಿನೋತ್ಸವ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ದೇಶೀಯ ಕ್ರೀಡೆಗಳಿಂದ ದೇಹ-ಮನಸ್ಸು ಸದೃಢ
(ರಾಜ್ಯ ) ಜಿಲ್ಲೆ

ದೇಶೀಯ ಕ್ರೀಡೆಗಳಿಂದ ದೇಹ-ಮನಸ್ಸು ಸದೃಢ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ನಾಗೂರ ಯಮನೂರೇಶ್ವರ ಜಾತ್ರೆ | ಹೊನಲುಬೆಳಕಿನ ಕಬಡ್ಡಿ ಟೂರ್ನಾಮೆಂಟ್

ಬಸವನಬಾಗೇವಾಡಿ: ಗ್ರಾಮೀಣ ಕ್ರೀಡೆಗಳ ಉಳಿವು ಮತ್ತು ಬೆಳವಣಿಗೆಗೆ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದು ಮಣ್ಣೂರ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮಹೇಶ ಮುಳವಾಡ ಹೇಳಿದರು.
ಪಟ್ಟಣದ ಸಮೀಪವಿರುವ ನಾಗೂರ ಗ್ರಾಮದ ಆರಾಧ್ಯದೈವ ಯಮನೂರೇಶ್ವರ ಜಾತ್ರೆಯಂಗವಾಗಿ ಮಂಗಳವಾರ ಸಂಜೆ ಗೆಳೆಯರ ಬಳಗವು ಹಮ್ಮಿಕೊಂಡಿದ್ದ ಹೊನಲು-ಬೆಳಕಿನ ಕಬಡ್ಡಿ ಟೂರ್ನಾಮೆಂಟ್ ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮೀಣ ಕ್ರೀಡೆಯಾಗಿರುವ ಕಬಡ್ಡಿ ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಿನ ಮಹತ್ವ ಪಡೆಯಬೇಕಾಗಿದೆ. ಕಬಡ್ಡಿಯಲ್ಲಿ ಪ್ರತಿನಿಧಿಸುವ ಕ್ರೀಡಾಪಟುಗಳು ಸೋಲು-ಗೆಲುವುವನ್ನು ಸರಿ ಸಮಾನವಾಗಿ ಸ್ವೀಕರಿಸಬೇಕು. ಗ್ರಾಮೀಣ ಮಟ್ಟದಲ್ಲಿ ನಡೆಯುವ ಕ್ರೀಡೆಗಳಿಗೆ ಎಲ್ಲರೂ ಪ್ರೋತ್ಸಾಹ ನೀಡಬೇಕೆಂದರು.
ದೇಶೀಯ ಆಟಗಳಾದ ಕಬಡ್ಡಿ, ಹಾಕಿ, ಖೋ ಖೋ, ಕುಸ್ತಿಯಂತಹ ಕ್ರೀಡೆಗಳನ್ನು ಆಯೋಜಿಸುವ ಮೂಲಕ ಇಂತಹ ಕ್ರೀಡೆಗಳಲ್ಲಿ ಯುವಜನಾಂಗ ಭಾಗವಹಿಸುವಂತೆ ಪ್ರೇರಣೆ ನೀಡುವಂತಾಗಬೇಕು. ದೇಶೀಯ ಕ್ರೀಡೆಗಳಿಂದ ನಮ್ಮ ದೇಹ, ಮನಸ್ಸು ಸದೃಢವಾಗುತ್ತದೆ. ಇಂದು ಪಾಶ್ಚಿಮಾತ್ಯ ಕ್ರೀಡೆಯಾದ ಕ್ರಿಕೆಟ್ ಹೆಚ್ಚು ಜನಪ್ರಿಯತೆ ಪಡೆದುಕೊಳ್ಳುತ್ತಿದೆ. ಇದೇ ರೀತಿಯಲ್ಲಿ ನಮ್ಮ ದೇಶೀಯ ಕ್ರೀಡೆಗಳು ಜನಪ್ರಿಯತೆ ಗಳಿಸುವಂತೆ ಮಾಡಬೇಕಿದೆ ಎಂದರು.
ಈ ಸಂದರ್ಭದಲ್ಲಿ ಮಣ್ಣೂರ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಾಲು ಸುಬ್ಬು ಲಮಾಣಿ, ಸುನೀಲ ಹೊನ್ನುಟಗಿ, ಕುಮಾರ ನಿಡಗುಂದಿ, ಬಂದೇನವಾಜ ವಾಲೀಕಾರ, ಮುತ್ತಪ್ಪ ಮಣಗೂರ, ಮೌಲಾಲಿ ಕೊಲ್ಹಾರ, ಶ್ರೀಶೈಲ ತೆಲಗಿ, ಗುರಯ್ಯ ಶೀಕಳವಾಡಿ, ಅಯ್ಯಪ್ಪ ಕಡ್ಲಿಮಟ್ಟಿ, ದಾನಪ್ಪ ಬಾಗೇವಾಡಿ,ಉಮೇಶ ಚಲವಾದಿ, ಚನ್ನಯ್ಯ ಹಾಲ್ಯಾಳಮಠ, ಮಂಜುನಾಥ ಮುಳವಾಡ, ಗಿರಿಯಪ್ಪ ಹೆಬ್ಬಾಳ, ಮಹಾಂತೇಶ ಗೌರಾ, ಯಮನಪ್ಪ ಪೂಜಾರಿ, ಶರಣಯ್ಯ ಸ್ವಾಮಿ, ಶಿವಯ್ಯ ಶೀಕಳವಾಡಿ, ಸತ್ಯಪ್ಪ ಬಂಡಿವಡ್ಡರ, ನಿಂಗಪ್ಪ ಮಸೂತಿ, ವಿರೇಶ ಮರೋಳ, ಮಹಿಬೂಬ ವಾಲೀಕಾರ, ಏಕಾನಂದ ಪೂಜಾರಿ, ಮುತ್ತು ಪೂಜಾರಿ, ಮುತ್ತಪ್ಪ ಬಂಡಿವಡ್ಡರ, ಮಹೇಶ ಮರೋಳ ಇತರರು ಇದ್ದರು.
ವಿಜೇತ ತಂಡಗಳುಃ ಜಾತ್ರೆಯಂಗವಾಗಿ ಹಮ್ಮಿಕೊಂಡಿದ್ದ ಹೊನಲು-ಬೆಳಕಿನ ಕಬಡ್ಡಿ ಟೂರ್ನಾಮೆಂಟ್ದಲ್ಲಿ ವಿವಿಧೆಡೆಗಳಿಂದ ಆಗಮಿಸಿದ್ದ ೨೫ ತಂಡಗಳು ಭಾಗವಹಿಸಿದ್ದವು. ಪ್ರತಿಯೊಂದು ತಂಡಗಳ ನಡುವೆ ನಡೆದ ಕಬಡ್ಡಿ ಪಂದ್ಯಾವಳಿ ರೋಚಕವಾಗಿ ನಡೆದವು. ರಾತ್ರಿ ೧೦ ಗಂಟೆಗೆ ಆರಂಭವಾದ ಕಬಡ್ಡಿ ಪಂದ್ಯಾವಳಿ ಬೆಳಗ್ಗೆ ೧೦.೩೦ ರವರೆಗೆ ನಡೆಯಿತು. ಪ್ರಥಮ ಸ್ಥಾನ ನಾಗೂರ ತಂಡ, ದ್ವಿತೀಯ ಸ್ಥಾನ ಸಾರವಾಡ ತಂಡ, ತೃತೀಯ ಸ್ಥಾನ ಬಾಗಲಕೋಟ ತಂಡ ಪಡೆದುಕೊಂಡವು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶಾಲವಾಗಿ ಹಬ್ಬಿ ಬೆಳೆಯುವ ವಟವೃಕ್ಷ

ಮಧ್ಯಸ್ಥಗಾರರ 2.0 ಅಭಿಯಾನ ಸದುಪಯೋಗಕ್ಕೆ ನ್ಯಾ. ಶಶಿಧರ ಸೂಚನೆ

ದಿ.ಅಟಲ್ ಬಿಹಾರಿ ವಾಜಪೇಯಿ ಜನ್ಮದಿನೋತ್ಸವ

ಇರ್ಫಾನ್ ಬೀಳಗಿ ಗೆ ರಾಷ್ಟ್ರೀಯ ಮಾಧ್ಯಮ ಸೇವಾ ರತ್ನ ಪ್ರಶಸ್ತಿ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶಾಲವಾಗಿ ಹಬ್ಬಿ ಬೆಳೆಯುವ ವಟವೃಕ್ಷ
    In ವಿಶೇಷ ಲೇಖನ
  • ಮಧ್ಯಸ್ಥಗಾರರ 2.0 ಅಭಿಯಾನ ಸದುಪಯೋಗಕ್ಕೆ ನ್ಯಾ. ಶಶಿಧರ ಸೂಚನೆ
    In (ರಾಜ್ಯ ) ಜಿಲ್ಲೆ
  • ದಿ.ಅಟಲ್ ಬಿಹಾರಿ ವಾಜಪೇಯಿ ಜನ್ಮದಿನೋತ್ಸವ
    In (ರಾಜ್ಯ ) ಜಿಲ್ಲೆ
  • ಇರ್ಫಾನ್ ಬೀಳಗಿ ಗೆ ರಾಷ್ಟ್ರೀಯ ಮಾಧ್ಯಮ ಸೇವಾ ರತ್ನ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಕಾಯಂ ವ್ಯವಸ್ಥೆಗೆ ಕೋರಿ ಮುಂದಿನ ಕ್ರಮ: ಎಂ.ಬಿ.ಪಾಟೀಲ
    In (ರಾಜ್ಯ ) ಜಿಲ್ಲೆ
  • ಮಕ್ಕಳ ಸಾಹಿತ್ಯ ಸಂಗಮದ ಅಧ್ಯಕ್ಷರಾಗಿ ಲಕ್ಷ್ಮೀಪುತ್ರ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಪ್ರಜಾಪ್ರಭುತ್ವ ಮೌಲ್ಯಗಳ ಬಲಪಡಿಸಲು ಡಿಜಿಟಲ್ ವೇದಿಕೆಗಳು ಅಗತ್ಯ
    In (ರಾಜ್ಯ ) ಜಿಲ್ಲೆ
  • ವಿಜ್ಞಾನ-ತಂತ್ರಜ್ಞಾನವೇ ದೇಶದ ಭವಿಷ್ಯಶಕ್ತಿ :ಡಾ.ಕಾಕೋಡಕರ
    In (ರಾಜ್ಯ ) ಜಿಲ್ಲೆ
  • ದಲಿತರು-ಮುಸಲ್ಮಾನರು ಒಗ್ಗಟ್ಟಿನಿಂದ ಹೋರಾಟ ಮಾಡಿ
    In (ರಾಜ್ಯ ) ಜಿಲ್ಲೆ
  • ಆಧ್ಯಾತ್ಮ ನಮ್ಮನ್ನು ಪ್ರಸನ್ನರನ್ನಾಗಿ ಮಾಡುತ್ತದೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.