ಡಾ.ಬಾಬು ಜಗಜೀವನ ರಾಮ್ ೧೧೭ನೇ ಜಯಂತಿ ಆಚರಣೆಯಲ್ಲಿ ಡಿಸಿ ಟಿ ಭೂ ಬಾಲನ್ ಅಭಿಮತ
ವಿಜಯಪುರ: ಭಾರತ ದೇಶದ ಅಭಿವೃದ್ಧಿ ಹಾಗೂ ಬೆಳವಣಿಗೆಗೆ ಪ್ರಮಖ ಪಾತ್ರ ವಹಿಸಿದ ಡಾ.ಬಾಬು ಜಗಜೀವನರಾಮ್ ರವರು ಅನನ್ಯ ಕೊಡುಗೆಗಳನ್ನು ನೀಡಿದ್ದಾರೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು.
ಶುಕ್ರವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಡಾ. ಬಾಬು ಜನಜೀವನರಾಮ್ ಅವರ ೧೧೭ ನೇ ಜಯಂತಿ ಅಂಗವಾಗಿ ಭಾವಚಿತ್ರಕ್ಕೆ ಪುಷ್ಪ ನಮನ ಅರ್ಪಿಸಿ ಅವರು ಮಾತನಾಡಿ, ಭಾತದ ಪ್ರಥಮ ಕೃಷಿ ಸಚಿವರಾಗಿ ರೈತರ ಅಭಿವೃದ್ಧಿಗಾಗಿ ಮಹತ್ತರ ಬದಲಾವಣೆಗಳನ್ನು ತಂದು ದೇಶದಲ್ಲಿ ಹಸಿರು ಕ್ರಾಂತಿಯನ್ನೆ ಮಾಡಿದ ಮಹಾನ್ ನಾಯಕರಾಗಿ ಬೆಳೆದು ಬರುವುದರೊಂದಿಗೆ ರಕ್ಷಣಾ ಸಚಿವರಾಗಿ ಭಾರತ ಹಾಗೂ ಪಾಕಿಸ್ತಾನ ಯುದ್ಧ ಸಂದರ್ಭದಲ್ಲಿ ಯುದ್ಧದ ನೇತ್ರೃತ್ವವನ್ನು ವಹಿಸಿ ಯುದ್ಧದಲ್ಲಿ ಜಯಶಾಲಿಯಾಗಲು ಪ್ರಮುಖ ಪಾತ್ರ ವಹಿಸಿದ್ದರು ಅವರು ಸ್ವಾತಂತ್ರ ಹೋರಾಟಗಾರರಾಗಿ ಸಾಮಾಜಿಕ ನ್ಯಾಯದ ಹೋರಾಟಗಾರರಾಗಿ ದೇಶದ ಅಭಿವೃದ್ಧಿಗೆ ಶ್ರಮಿಸಿದ ಅವರ ಆದರ್ಶ ನಮಗೆ ಮಾದರಿಯಾಗಿವೆ ಎಂದು ಅವರು ಹೇಳಿದರು.
ಜಿಲ್ಲಾ ಪಂಚಾಯತ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಮಾತನಾಡಿ ಡಾ. ಬಾಬು ಜಗಜೀವನರಾಮ್ ಅವರ ಬಾಲ್ಯದ ಕಷ್ಟದ ದಿನಗಳಲ್ಲಿ ನಿರಂತರ ಛಲ ಬಿಡದೆ ವಿದ್ಯಾಭ್ಯಾಸ ಮಾಡುವುದರೊಂದಿಗೆ ಶಾಲಾ ದಿನಗಳಲ್ಲಿ ಹೋರಾಟದ ಮನೋಬಾವ ಬೆಳೆಸಿಕೊಂಡಿದ್ದರು. ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ಭಾಗವಹಿಸಿ ಜೈಲು ಶಿಕ್ಷೆಯನ್ನು ಅನುಭವಿಸಿದ ಅವರು ಸಾಮಾಜಿಕ ಕಳಕಳಿ ಜೊತೆಗೆ ರೈತರ ಕರಿತು ಅಪಾರ ಕಾಳಜಿ ಹೊಂದಿದ್ದರು ಅವರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಅವರು ಹೇಳಿದರು.
ಪೊಲೀಸ್ ವರಿಷ್ಟಾಧಿಕಾರಿ ಋಷಿಕೇಶ ಸೋನಾವಣೆ ಮಾತನಾಡಿ ಚುನಾವಣೆ ನೀತಿ ಸಂಹಿತೆ ಕಾರಣ ಡಾ.ಬಾಬು ಜಗಜೀವನರಾಮ್ ಜಯಂತಿ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಮಹನೀಯರ ಜಯಂತಿಗಳನ್ನು ಅರ್ಥಪೂರ್ಣವಾಗಿ ಹಾಗೂ ಅದ್ದೂರಿಯಾಗಿ ಆಚರಿಸೋಣ ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಮಹದೇವ ಮುರಗಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಪುಂಡಲೀಕ ಮಾನವರ, ಅಡಿವೆಪ್ಪ ಸಾಲಗಲ್ಲ, ಪರಸು ಚಲವಾದಿ, ಬೀಮರಾಯ ಜಿಗಜಿಣಗಿ, ದೇವೇಂದ್ರ ಮೀರೆಕರ, ವಿದ್ಯಾವತಿ ಅಂಕಲಗಿ, ಮುದಕಪ್ಪ ಕೋಟ್ಯಾಳ, ಚಿಕ್ಕಯ್ಯ ಮಂಚರ, ಹಾಜಿಲಾಲ ಕಬಾಡೆ, ಶ್ರೀನಿವಾಸ ಶಹಾಪುರ,ನಾಗರಾಜ ಕಬಾಡೆ, ತಬ್ಬಣ್ಣಾ ಹೊನ್ನಕಸ್ತೂರಿ, ಬಿ.ಎಸ್. ಗಸ್ತಿ, ದೇವೇಂದ್ರ ಕಬಾಡೆ, ದೇವೇಂದ್ರ ಹೊನ್ನಕಸ್ತೂರಿ, ಮತಿನ ಕುಮಾರ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

