Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ದೇಶದ ಉಳಿವಿಗಾಗಿ ಬಿಜೆಪಿಗೆ ಮತ ಹಾಕಬೇಕಿದೆ :ಶಾಸಕ ಯತ್ನಾಳ
(ರಾಜ್ಯ ) ಜಿಲ್ಲೆ

ದೇಶದ ಉಳಿವಿಗಾಗಿ ಬಿಜೆಪಿಗೆ ಮತ ಹಾಕಬೇಕಿದೆ :ಶಾಸಕ ಯತ್ನಾಳ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ನಮ್ಮ ರಕ್ಷಣೆಗಾಗಿ, ದೇಶ ಉಳಿವಿಗಾಗಿ ನಮ್ಮ ಮತ ಬಿಜೆಪಿಗೆ ಹಾಕುವ ಕಾಲ ಬಂದಿದೆ. ನಮ್ಮವರು, ನಮ್ಮ ಮನೆಗಳು ಉಳಿಯಬೇಕೆಂದರೆ ಮೋದಿಯವರು ಮತ್ತೊಮ್ಮೆ ಪ್ರಧಾನಿ ಆಗಬೇಕು ಎಂದು ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.
ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಶನಿವಾರ ನಡೆದ ಬಿಜೆಪಿ ಸಂಸ್ಥಾಪನಾ ದಿನಾಚರಣೆ ಹಾಗೂ ನಗರ ಮಂಡಲದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ದೇಶದಲ್ಲಿ ಕಳೆದ ೧೦ ವರ್ಷಗಳಲ್ಲಿ ಆಗಿರುವ ಅಭಿವೃದ್ಧಿಯಿಂದ ಯಾರನ್ನು ಕೇಳಿದರೂ ಮೋದಿಗೆ ಮತ ಎನ್ನುತ್ತಾರೆ. ಯಾವ ಗ್ಯಾರಂಟಿಯೂ ಬೇಡ, ನಮಗೆ ಮೋದಿಯವರೇ ಗ್ಯಾರಂಟಿ ಎನ್ನುತ್ತಿದ್ದಾರೆ. ದೇಶ ಉಳಿಯಬೇಕೆಂದರೆ, ಸನಾತನ ಧರ್ಮ ಉಳಿಯಬೇಕೆಂದರೆ ದೇಶಕ್ಕೆ ಮೋದಿಯವರು ಅನಿವಾರ್ಯ. ಎಲ್ಲರೂ ಕಂಕಣ ಬದ್ಧರಾಗಿ ಮೋದಿ ಸರ್ಕಾರದ ಸಾಧನೆಗಳನ್ನು ಮನೆ ಮನೆಗೆ ಮುಟ್ಟಿಸಲು ಸಲಹೆ ನೀಡಿದರು.
ಅಲ್ಪಸಂಖ್ಯಾತರ ಅಭಿವೃದ್ಧಿಯೇ ಕಾಂಗ್ರೆಸ್ ಮೂಲಮಂತ್ರವಾಗಿದೆ. ಅವರ ಪ್ರಣಾಳಿಕೆಯಲ್ಲಿ ಕಾಶ್ಮೀರದ ೩೭೦ ಕಲಂ ರದ್ದು, ಅಲ್ಪಸಂಖ್ಯಾತರ ರಕ್ಷಣೆಗಾಗಿ ಮತ್ತೊಂದು ಹೊಸ ಕಾನೂನು ಜಾರಿ, ಅಗ್ನಿಪಥ್ ರದ್ದು ಹೀಗೆ ಪ್ರತಿಯೊಂದು ದೇಶ ಹಾಳುಗೆಡುವ ಉದ್ದೇಶಗಳನ್ನೆ ಹೊಂದಿವೆ. ಇವರಿಗೆ ದೇಶದ ಸುರಕ್ಷತೆ, ಹಿಂದೂ ಧರ್ಮ, ದಲಿತರ ರಕ್ಷಣೆ ಬೇಕಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದ್ದೆ ತಡ ಬೆಳಗಾವಿ ಮತ್ತಿತರೆಡೆ ಪಾಕ್ ಧ್ವಜ ಹಾರಿಸಿದರು. ವಿಧಾನಸೌಧ ಆವರಣದಲ್ಲೇ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದರು. ಅದನ್ನು ಕಾಂಗ್ರೆಸ್ ನವರು ಸುಳ್ಳೆಂದು ವಾದ ಮಾಡಿದರೆ ಹೊರತು ಖಂಡಿಸಲಿಲ್ಲ. ನಮ್ಮ ದೇವಸ್ಥಾನಗಳ ಹಣವನ್ನು ಅಲ್ಪಸಂಖ್ಯಾತರ ಅಭಿವೃದ್ಧಿಗೆ, ಅವರ ಆಸ್ತಿ ರಕ್ಷಣೆಗೆ ನೀಡುತ್ತಾರೆ. ಹಿಂದೂಗಳು, ದಲಿತರು, ಹಿಂದುಳಿದ ವರ್ಗದವರು ಏನು ಮಾಡಬೇಕು ಎಂದು ಪ್ರಶ್ನಿಸಿದರು.
೧೦ ವರ್ಷದಲ್ಲಿ ಮೋದಿಯವರು ಏನು ಮಾಡಿದರು ಅಂತಾರೆ. ದೇಶದ ಆರ್ಥಿಕ ವ್ಯವಸ್ಥೆ ಸುಧಾರಿಸುವ ಜೊತೆಗೆ ಸುರಕ್ಷತೆ ನೀಡಿದಲ್ಲದೆ, ಆಯುಷ್ಮಾನ ಭಾರತ ಮೂಲಕ ಪ್ರತಿ ಕುಟುಂಬಕ್ಕೆ ರೂ.೫ ಲಕ್ಷ ವರೆಗೆ ಉಚಿತ ಚಿಕಿತ್ಸೆ, ಕೃಷಿ ಸಮ್ಮಾನ್ ಮೂಲಕ ನೇರವಾಗಿ ರೈತರ ಖಾತೆಗೆ ಹಣ, ಸ್ವ ಉದ್ಯೋಗಕ್ಕಾಗಿ ಸಬ್ಸಿಡಿ ಸಹಿತ ಸಾಲ ಸೌಲಭ್ಯ ಹೀಗೆ ನೂರಾರು ಜನೊರ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಲಕ್ಷಾಂತರ ಕಿ.ಮೀ ರಸ್ತೆಗಳನ್ನು ಅಭಿವೃದ್ಧಿ ಮಾಡಿದ್ದಾರೆ ಎಂದು ಹೇಳಿದರು.
ದೇಶದಲ್ಲಿದ್ದ ಸರ್ವಾಧಿಕಾರಿ ಆಡಳಿತ ನಡೆಸುತ್ತಿದ್ದ ಇಂದಿರಾ ಗಾಂಧಿ ಸೋಲಿಸಲು ಜನತಾ ಪಕ್ಷ ಸ್ಥಾಪಿಸಲಾಯಿತು. ಆಗ ಇಂದಿರಾ ಗಾಂಧಿ ಸೋಲಿಸಿ, ಜನತಾ ಪಕ್ಷ ಅಧಿಕಾರಕ್ಕೆ ತರಲಾಯಿತು. ನಂತರ ಕೆಲವರು ಆರ್.ಎಸ್.ಎಸ್ ಸದಸ್ಯರನ್ನು ಒಪ್ಪುವುದಿಲ್ಲ ಎಂದು ಹೇಳಿದಾಗ, ಜನತಾ ಪಕ್ಷದಿಂದ ಹೊರ ಬಂದು, ವಾಜಪೇಯಿ, ಅಡ್ವಾನಿ ಸೇರಿ ಹಲವು ನಾಯಕರು ಬಿಜೆಪಿ ಸ್ಥಾಪನೆ ಮಾಡಿದರು. ಹಂತ ಹಂತವಾಗಿ ಪಕ್ಷ ಗಟ್ಟಿ ಆಗುತ್ತ, ಇಂದು ಹೆಮ್ಮರವಾಗಿ ಬೆಳೆದು ನಿಂತಿದೆ. ಇಂದು ಯಾವುದೇ ಪಕ್ಷದ ಬೆಂಬಲವಿಲ್ಲದೆ, ಸ್ವಂತತ್ರವಾಗಿ ಮೋದಿಜಿ ಅವರ ನೇತೃತ್ವದಲ್ಲಿ ಅತ್ಯುತ್ತಮ ಆಡಳಿತ ನಡೆಯುತ್ತಿದೆ ಎಂದು ತಿಳಿಸಿದರು.
ಜಿಲ್ಲಾ ಘಟಕದ ಅಧ್ಯಕ್ಷ ಆರ್.ಎಸ್.ಪಾಟೀಲ ಕೂಚಬಾಳ ಮಾತನಾಡಿ, ಕಾಂಗ್ರೆಸ್ ನವರು ಎಂದೂ ದೇಶದ ಹಿತ, ಕಲ್ಯಾಣದ ಬಗ್ಗೆ ಯೋಚನೆಯೇ ಮಾಡಲಿಲ್ಲ. ಬರೀ ಕುಟುಂಬದ ಸ್ವಾರ್ಥ ಬಯಸಿದರು. ಈಗ ಪ್ರಾಮಾಣಿಕಕತೆ ಹಾಗೂ ಅಭಿವೃದ್ಧಿ ಕಾಳಜಿ ಹೊಂದಿರುವ ಪ್ರಧಾನಿ ಮೋದಿಯವರ ಪ್ರಭಾವ ಸಹಿಸಲಾಗದೆ ಸುಳ್ಳು ಹೇಳಿಕೆ ನೀಡುತ್ತಿದ್ದಾರೆ ಎಂದರು.
ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರು ದೇಶ, ಧರ್ಮದ ವಿಷದಲ್ಲಿ ರಾಜಿಯೇ ಮಾಡಿಕೊಳ್ಳುವುದಿಲ್ಲ. ಸದಾ ಹಿಂದುತ್ವ, ದೇಶದ ಸಂಸ್ಕೃತಿ, ಪರಂಪರೆ, ಮಹಾಪುರುಷರ ಪರ ಗಟ್ಟಿ ಧ್ವನಿ ತಾಳುತ್ತಾರೆ ಎಂದು ಹೇಳಿದರು.
ಸಂಸದ ರಮೇಶ ಜಿಗಜಿಣಗಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಳುಗೌಡ ಪಾಟೀಲ, ಮತಕ್ಷೇತ್ರ ಪ್ರಭಾರಿ ವಿವೇಕಾನಂದ ಡಬ್ಬಿ, ನಗರ ಮಂಡಲ ಅಧ್ಯಕ್ಷ ಶಂಕರ ಹೂಗಾರ ಮಾತನಾಡಿದರು. ಮುಖಂಡ ದಯಾಸಾಗರ ಪಾಟೀಲ, ಮತಕ್ಷೇತ್ರ ಸಂಚಾಲಕ ಬಸವರಾಜ ಬೈಚಬಾಳ, ಮಹಿಳಾ ಘಟಕದ ಜಿಲ್ಲಾಧ್ಯಕ್ಷ ಸ್ವಪ್ನಾ ಕಣಮುಚನಾಳ, ನಗರ ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ಲಕ್ಷ್ಮಿ ಕನ್ನೋಳ್ಳಿ ಮತ್ತಿತರರು ಇದ್ದರು.
ನಗರ ಮಂಡಲ ಪ್ರಧಾನ ಕಾರ್ಯದರ್ಶಿ ಪಾಪುಸಿಂಗ್ ರಜಪೂತ ನಿರೂಪಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.