Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಸಾಧಕರ ಆದರ್ಶಗಳನ್ನು ವಿಕಲಚೇತನರು ಪಾಲಿಸಿ :ಗುರವ

1.5 ವರ್ಷದ ಮಗು ಕಳ್ಳತನ ಪ್ರಕರಣ :ಪೊಲೀಸರಿಂದ ಸುಖಾಂತ್ಯ

ಜಮಖಂಡಿ ಬಳಿ ಭೀಕರ ಅಪಘಾತ :ನಾಲ್ವರ ಸಾವು

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ನನ್ನ ಗೆಲ್ಲಿಸಿ :ಜಿಗಜಿಣಗಿ
(ರಾಜ್ಯ ) ಜಿಲ್ಲೆ

ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ನನ್ನ ಗೆಲ್ಲಿಸಿ :ಜಿಗಜಿಣಗಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಬಲೇಶ್ವರ: ವಿಕಸಿತ‌ ಭಾರತದ ಸಂಕಲ್ಪ ತೊಟ್ಟಿರುವ ಸಮರ್ಥ ನಾಯಕ ನರೇಂದ್ರ ಮೋದಿಯವರು ಮೂರನೇ ಬಾರಿ ದೇಶದ ಪ್ರಧಾನಿಯಾಗುವುದನ್ನು ತಪ್ಪಿಸಲು ಯಾವ ಶಕ್ತಿಯಿಂದಲೂ‌ ಸಾಧ್ಯವಿಲ್ಲ. ಅವರು 3 ನೇ ಬಾರಿ ಪ್ರಧಾನಿಯಾಗಲು ಸಂಸತ್ ನಲ್ಲಿ ನಾನು ಅವರ ಪರವಾಗಿ ಮತ್ತೆ ಕೈ ಎತ್ತಬೇಕೆಂಬುದು ನನ್ನ ಕೊನೆಯ ಆಸೆಯಾಗಿದೆ ಎಂದು ಸಂಸದ ಹಾಗೂ ವಿಜಯಪುರ ಲೋಕಸಭಾ ಕ್ಷೇತ್ರದ ಎನ್.ಡಿ.ಎ ಮೈತ್ರಿಕೂಟದ ಅಭ್ಯರ್ಥಿ ರಮೇಶ ಜಿಗಜಿಣಗಿ ಅಭಿಲಾಷೆ ವ್ಯಕ್ತಪಡಿಸಿದರು.
ಲೋಕಸಭಾ ಚುನಾವಣಾ ಪ್ರಚಾರಾರ್ಥ ಬಬಲೇಶ್ವರ ಮತಕ್ಷೇತ್ರದ ಮಮದಾಪುರ ಬಿಜೆಪಿ ಮಹಾಶಕ್ತಿ‌ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕರ್ತರ ಸಭೆಯಲ್ಲಿ‌ ಅವರು ಮಾತನಾಡಿದರು.
ದೇಶದ ರಕ್ಷಣೆ ಮತ್ತು ಉಳಿವಿಗಾಗಿ ಈ ಹಿಂದೆ ಎರಡು ಬಾರಿ ಮೋದಿಯವರ ಪರವಾಗಿ ಕೈ ಎತ್ತಲು ವಿಜಯಪುರ ಜನ ನನಗೆ ಅವಕಾಶ ಮಾಡಿಕೊಟ್ಟಿದ್ದೀರಿ. ಇನ್ಮುಂದೆ ನಾನು‌ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಆದರೆ ಮೋದಿಯವರನ್ನು ಮೂರನೇ ಸಲ ಪ್ರಧಾನಿ ಮಾಡಲು ನಾನು ಈ ಬಾರಿಯೂ ಕೈ ಎತ್ತಬೇಕು ಎಂಬುದು ನನ್ನ ಕೊನೆಯ ಆಸೆ. ಹಾಗಾಗಿ ಈ ಬಾರಿಯೂ ವಿಜಯಪುರ ಜನತೆ ನನಗೆ ಆಶಿರ್ವದಿಸಬೇಕೆಂಬುದು ನನ್ನ ಪ್ರಾರ್ಥನೆ. ಪ್ರಧಾನಿಯಾಗಲು ಉತ್ಕೃಷ್ಠ ವ್ಯಕ್ತಿತ್ವ ಹೊಂದಿರುವ ಸಮರ್ಥ ನಾಯಕನಾಗಿರಬೇಕು. ಕಾಂಗ್ರೆಸ್ ನವರು ಪಪ್ಪು ಎಂದು ಕರೆಯುವ ಹುಡುಗನನ್ನು ದೇಶದ ಪ್ರಧಾನಿ ಮಾಡಲು ಹೊರಟ್ಟಿದ್ದಾರೆ. ಇಂತಹ ವ್ಯಕ್ತಿಯನ್ನು ಜನ ಒಪ್ಪಲು ಸಾಧ್ಯವೇ ಎಂದು ಜಿಗಜಿಣಗಿ ಪ್ರಶ್ನಿಸಿದರು.
ಈ ಹಿಂದೆ ನಾನು ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಬೇರೆ ಬೇರೆ ಪಕ್ಷಗಳಿಂದ ಚುನಾವಣೆಯಲ್ಲಿ ಸ್ಪರ್ಧಿಸಿದರೂ‌ ಜನ ನನ್ನನ್ನು ಲಕ್ಷಾಂತರ‌ ಮತಗಳ ಅಂತರದಿಂದ‌ ಗೆಲ್ಲಿಸಿದರು. ರಾಮಕೃಷ್ಣ ಹೆಗಡೆ ಅವರ ನಿಧನ ನಂತರ ಬಹಳಷ್ಟು ಜನ ನನಗೆ ಕಾಂಗ್ರೆಸ್ ಪಕ್ಷ ಸೇರಿಕೊಳ್ಳುವಂತೆ ಒತ್ತಡ ಹಾಕಿದರು. ಕಾಂಗ್ರೆಸ್ ಪಕ್ಷ ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಅಂತ್ಯ ಸಂಸ್ಕಾರಕ್ಕೆ ಕೇವಲ 6 ಅಡಿ ಜಾಗ ನೀಡಲಿಲ್ಲ. ಅಂತಹ ಕಾಂಗ್ರೆಸ್ ಪಕ್ಷ ನಾನು ಸೇರುವುದಿಲ್ಲ ಎಂದು ತಿರಸ್ಕರಿಸಿದೆ. ಆಗಿನ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ಯಡಿಯೂರಪ್ಪ ಅವರಿಗೆ ಒತ್ತಡ ಹೇರಿ ನಾನು ಬಿಜೆಪಿ ಸೇರಿಕೊಂಡೆ.‌ ಅಂದಿನಿಂದ ಇಂದಿನವರೆಗೂ ಬಿಜೆಪಿಯಲ್ಲಿ ನಿಷ್ಠನಾಗಿದ್ದೇನೆ ಎಂದರು.
ವಿಜಯಪುರ ಲೋಕಸಭಾ ಕ್ಷೇತ್ರದಲ್ಲಿ 2004 ರಿಂದ ವಿಜಯಪುರ ಜನ ಸತತ ಮೂರು ಬಾರಿ ನನ್ನನ್ನು ಆರಿಸಿ ತಂದಿದ್ದೀರಿ. ಹಾಗೆಂದು ನಾನು ಸುಮ್ಮನೇ ಕೂಡದೇ ವಿಜಯಪುರ ಮತಕ್ಷೇತ್ರದ ಅಭಿವೃದ್ಧಿಗೆ ಜಿಲ್ಲೆಯಲ್ಲಿ ಈ ಹಿಂದಿನ ಕಾಂಗ್ರೆಸ್ ಸಂಸದರಾರೂ ತರಲಾರದಷ್ಟು ಹೆಚ್ಚು ಅನುದಾನ ಕೇಂದ್ರದಿಂದ ತಂದು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ‌. ನಮ್ಮ ಹಾಗೂ ದೇಶದ ರಕ್ಷಣೆಗಾಗಿ ಮೋದಿ‌ ಮತ್ತೊಮ್ಮೆ ಬರಲೇಬೇಕು ಎಂದು ಇಡಿ ದೇಶವೇ ಕೂಗಿ ಹೇಳುತ್ತಿದೆ ಎಂದರು.
ಬಿಜೆಪಿ ಮುಖಂಡ ವಿಜುಗೌಡ ಪಾಟೀಲ್ ಮಾತನಾಡಿ, ಅಭಿವೃದ್ಧಿಗೆ ಮತ್ತೊಂದು ಹೆಸರು ಬಿಜೆಪಿ. ಅಧಿಕಾರವಿರಲಿ, ಬಿಡಲಿ ಪಕ್ಷದ ಸಾಮಾನ್ಯ ಕಾರ್ಯರ್ತನಾಗಿ, ಬಬಲೇಶ್ವರ ಮತಕ್ಷೇತ್ರದ ಮನೆಯ ಮಗನಾಗಿ ಕೆಲಸ ಮಾಡಿಕೊಂಡು ಬಂದಿದ್ದೇನೆ. ಮೋದಿಯವರ ಕೈ ಬಲಪಡಿಸಲು ಬಬಲೇಶ್ವರ ಮತಕ್ಷೇತ್ರ ಹಾಗೂ ಜಿಲ್ಲೆಯ ಜನತೆ ಈ‌ ಬಾರಿಯೂ ರಮೇಶ ಜಿಗಜಿಣಗಿ ಅವರಿಗೆ ಮತ್ತೊಮ್ಮೆ ಆಶಿರ್ವದಿಸಬೇಕೆಂದು ಕೇಳಿಕೊಳ್ಳುತ್ತೇನೆ ಎಂದರು. ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ್ ಕೂಚಬಾಳ, ಜಿಲ್ಲಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಗುರುಲಿಂಗಪ್ಪ ಅಂಗಡಿ ಮಾತನಾಡಿದರು.
ಈ ವೇಳೆ ಜಿಲ್ಲಾ ಚುನಾವಣಾ ಸಂಚಾಲಕ ಅರುಣ ಶಹಾಪುರ, ಮಂಡಲ ಅಧ್ಯಕ್ಷ ಸಂತೋಷ ಕುರದಡ್ಡಿ, ಕ್ಷೇತ್ರ ಸಂಚಾಲಕ ಸಂಜಯ ಬಿ. ಪಾಟೀಲ ಕನಮಡಿ, ಕ್ಷೇತ್ರ ಪ್ರಭಾರಿ ಕೃಷ್ಣಾ ಗುನ್ನಾಳಕರ, ಜಿಲ್ಲಾ ಉಪಾಧ್ಯಕ್ಷ ಉಮೇಶ ಕೊಳಕುರ, ವಿವೇಕ ಡಬ್ಬಿ, ಮಂಡಲ ಪ್ರಧಾನ ಕಾರ್ಯದರ್ಶಿ ಈರಣ್ಣ ರಾವೂರ, ಸಾಬು ಮಾಶ್ಯಾಳ ಮಂಡಲ ಕಾರ್ಯಕಾರಿಣಿ ಸದಸ್ಯರು, ಮೋರ್ಚಾ ಕಾರ್ಯಕಾರಿಣಿ ಸದಸ್ಯರು, ಮಮದಾಪುರ ಮಹಾಶಕ್ತಿ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಗುರುಹಿರಿಯರು ಉಪಸ್ಥಿತರಿದ್ದರು.

BIJAPUR NEWS bjp public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಸಾಧಕರ ಆದರ್ಶಗಳನ್ನು ವಿಕಲಚೇತನರು ಪಾಲಿಸಿ :ಗುರವ

1.5 ವರ್ಷದ ಮಗು ಕಳ್ಳತನ ಪ್ರಕರಣ :ಪೊಲೀಸರಿಂದ ಸುಖಾಂತ್ಯ

ಜಮಖಂಡಿ ಬಳಿ ಭೀಕರ ಅಪಘಾತ :ನಾಲ್ವರ ಸಾವು

ವೃಕ್ಷಥಾನ್ ಹೆರಿಟೇಜ್ ರನ್: ಚಿತ್ರಕಲೆ ನಿಬಂಧ ಸ್ಪರ್ಧೆಗಳ ವಿಜೇತರು

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಸಾಧಕರ ಆದರ್ಶಗಳನ್ನು ವಿಕಲಚೇತನರು ಪಾಲಿಸಿ :ಗುರವ
    In (ರಾಜ್ಯ ) ಜಿಲ್ಲೆ
  • 1.5 ವರ್ಷದ ಮಗು ಕಳ್ಳತನ ಪ್ರಕರಣ :ಪೊಲೀಸರಿಂದ ಸುಖಾಂತ್ಯ
    In (ರಾಜ್ಯ ) ಜಿಲ್ಲೆ
  • ಜಮಖಂಡಿ ಬಳಿ ಭೀಕರ ಅಪಘಾತ :ನಾಲ್ವರ ಸಾವು
    In (ರಾಜ್ಯ ) ಜಿಲ್ಲೆ
  • ವೃಕ್ಷಥಾನ್ ಹೆರಿಟೇಜ್ ರನ್: ಚಿತ್ರಕಲೆ ನಿಬಂಧ ಸ್ಪರ್ಧೆಗಳ ವಿಜೇತರು
    In (ರಾಜ್ಯ ) ಜಿಲ್ಲೆ
  • ಇಬ್ರಾಹಿಂಪುರದಲ್ಲಿ ಜಯರಾಮೇಶ್ವರ ಮಹಾರಾಜರ ಜಾತ್ರೆ
    In (ರಾಜ್ಯ ) ಜಿಲ್ಲೆ
  • ಭಕ್ತರ ಭವಭೀತಿ ಪರಿಹರಿಸುವ ದತ್ತನ ಸ್ಥಳ ಸುಕ್ಷೇತ್ರ ಗಾಣಗಾಪುರ
    In ವಿಶೇಷ ಲೇಖನ
  • “ಡಿ.೫ ರಿಂದ ಸುವರ್ಣ ಮಹೋತ್ಸವ ಕಾರ್ಯಕ್ರಮ :ಗೊಳಸಂಗಿ
    In (ರಾಜ್ಯ ) ಜಿಲ್ಲೆ
  • ವಿಕಲಚೇತನರು ಆತ್ಮವಿಶ್ವಾಸದಿಂದ ಜೀವನ ನಡೆಸಲು ಅವಕಾಶ ನೀಡಿ
    In (ರಾಜ್ಯ ) ಜಿಲ್ಲೆ
  • ಬಿ.ಎಲ್.ಡಿ.ಇ ಧ್ವನಿ 98.6 ಎಫ್‌.ಎಂ ರೇಡಿಯೋ ಕೇಂದ್ರ ಆರಂಭ
    In (ರಾಜ್ಯ ) ಜಿಲ್ಲೆ
  • ೫೧ ವರ್ಷಗಳ ಹೋರಾಟಕ್ಕೆ ದೊರಕಿದ ನ್ಯಾಯ :ಪಟ್ಟಣಶೆಟ್ಟಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.