Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮನಷ್ಯನ ಜೀವನ ಭಗವಂತನ ಬಳುವಳಿ :ಜಾಲಹಳ್ಳಿ ಶ್ರೀ
(ರಾಜ್ಯ ) ಜಿಲ್ಲೆ

ಮನಷ್ಯನ ಜೀವನ ಭಗವಂತನ ಬಳುವಳಿ :ಜಾಲಹಳ್ಳಿ ಶ್ರೀ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಶ್ರೀ ಜಗದಾರಾಧ್ಯ ಜಯಶಾಂತಲಿಂಗೇಶ್ವರ ಜಾತ್ರಾ ಮಹೋತ್ಸವಕ್ಕೆ ಚಾಲನೆ |ಜೀವನಜಾಗೃತಿ ಸಂಗೋಷ್ಠಿ

ಕಲಕೇರಿ: ಮನಷ್ಯನ ಜೀವನ ಭಗವಂತನ ಬಳುವಳಿಯಾಗಿದ್ದು, ಬದುಕಿನುದ್ದಕ್ಕೂ ಸತ್ಯ ನ್ಯಾಯ ನೀತಿಯ ಪರಿಪಾಲನೆಯೊಂದಿಗೆ ಗುರುಗಳ ಮಾರ್ಗದರ್ಶನದಲ್ಲಿ ಜೀವನ ಜಾಗೃತಿಗೊಳಿಸಿಕೊಳ್ಳುವುದರೊಂದಿಗೆ ಸದಾ ಭಗವಂತನ ಚಿಂತನದಲ್ಲಿ ತೊಡಗಿಕೊಳ್ಳಬೇಕು, ನಮ್ಮ ಜೀವನವನ್ನು ಸುಂದರ ಮತ್ತು ಸಾರ್ಥಕಗೊಳಿಸಿಕೊಳ್ಳುವುದೇ ಜೀವನದ ಪರಮ ಗುರಿಯಾಗಿರಬೇಕು ಎಂದು ಜಗದಾರಾಧ್ಯ ಜಯಶಾಂತಲಿಂಗೇಶ್ವರ ಶಿವಾಚಾರ್ಯರು ಹೇಳಿದರು.
ಗ್ರಾಮದ ಶ್ರೀ ಜಗದಾರಾಧ್ಯ ಜಯಶಾಂತಲಿಗೇಶ್ವರ ಮಹಾಸಂಸ್ಥಾನಮಠದಲ್ಲಿ ಜಾತ್ರಾ ಮಹೋತ್ಸವದ ಪ್ರಯುಕ್ತ ನಡೆದ ಜೀವನಜಾಗೃತಿ ಸಂಗೋಷ್ಠಿ ಕಾರ್ಯಕ್ರಮದ ಪಾವನ ಸಾನಿಧ್ಯವಹಿಸಿ ಅವರು ಮಾತನಾಡಿದರು.
ಹುಟ್ಟಿದಾಗ ಉಸಿರು ಇರುತ್ತದೆ ಆದರೆ ಹೆಸರು ಇರುವುದಿಲ್ಲ, ನಾವು ಸತ್ತಾಗ ಹೆಸರು ಇರುತ್ತದೆ ಆದರೆ ಉಸಿರು ಇರುವುದಿಲ್ಲ. ಈ ಉಸಿರು ಮತ್ತು ಹೆಸರಿನ ಮಧ್ಯದ ನಮ್ಮ ಅಲ್ಪ ಜೀವನದಲ್ಲಿ ನಮ್ಮ ಸುಂದರ ಕಾರ್ಯಗಳ ಮೂಲಕ ಶ್ರೇಷ್ಠ ಬದುಕು ನಮ್ಮದಾಗಿಸಿಕೊಳ್ಳಲು ಮುಂದಾಗಬೇಕು ಎಂದು ಅವರು ಹೇಳಿದರು.
ಕಾರ್ಯಕ್ರಮಕ್ಕೂ ಮುನ್ನ ಓಂಕಾರ ಧ್ವಜಾರೋಹಣ ನೆರವೇರಿಸಿದ ಕಲಕೇರಿ ಹಿರೇಮಠದ ಸಿದ್ಧರಾಮ ಶಿವಾಚಾರ್ಯರು ಮತ್ತು ಜೀವನಜಾಗೃತಿ ಸಂಗೋಷ್ಠಿ ಕಾರ್ಯಕ್ರಮವನ್ನು ಉದ್ಘಾಟಿಸಿದ ಕೊಡೆಕಲ್ಲ ದುರುದುಂಡೇಶ್ವರ ವಿರಕ್ತಮಠದ ಶಿವಕುಮಾರ ಮಹಾಸ್ವಾಮಿಗಳು ಮಾತನಾಡಿ ಪ್ರಾಣಿ ಪಕ್ಷಿಗಳು ತನ್ನತನವನ್ನು ಮರೆತಿಲ್ಲ, ಆದರೆ ಮನುಷ್ಯ ಮಾತ್ರ ನಾ ಎಂಬ ಅಹಂಕಾರ, ಸ್ವಾರ್ಥ ತುಂಬಿಕೊಂಡು ಮನುಷ್ಯತ್ವವನ್ನು ಮರೆತಿದ್ದರಿಂದ ಆತನಲ್ಲಿರುವ ಅರಿಷಡ್‌ವರ್ಗಗಳ ವಿಕೃತ ಕಾರ್ಯಗಳಿಂದ ಆತನ ಜೀವನವನ್ನು ಹಾಳು ಮಾಡುತ್ತಿವೆ. ಹಾಗಾಗಿ ತನ್ನನ್ನು ತಾನರಿವುದೇ ಜೀವನದ ಉದ್ದೇಶವಾಗಿಸಿಕೊಂಡು, ಸಂಪತ್ತು ಅಧಿಕಾರ ಶಾಶ್ವತವಲ್ಲ ಎನ್ನುವ ಅರಿವು ನಮ್ಮಲ್ಲಿ ಸದಾ ಜಾಗೃತವಾಗಿಟ್ಟುಕೊಂಡು ಗುರುಗಳ ಮಾರ್ಗದರ್ಶನದಲ್ಲಿ ಸತ್ಯ ಧರ್ಮದ ನೆಲೆಗಟ್ಟಿನಲ್ಲಿ ಚಿಕಿತ್ಸಕ ಬುದ್ಧಿಯ ಮೂಲಕ ಜೀವನವನ್ನು ಅರಿತು ನಡೆದಾಗ ಜೀವನ ಸುಂದರವಾಗುತ್ತದೆ, ಅಲ್ಲದೇ ಜೀವಾತ್ಮ ಪರಮಾತ್ಮನಾಗಲು ಸಾಧ್ಯ ಎಂದು ಹೇಳಿದರು.
ಬೆಳಿಗ್ಗೆ ಶ್ರೀ ಜಗದಾರಾಧ್ಯ ಜಯಶಾಂತಲಿಗೇಶ್ವರ ಶಿವಲಿಂಗಕ್ಕೆ ರುದ್ರಾಭಿಷೇಕ, ಸಹಸ್ರ ಬಿಲ್ವಾರ್ಚನೆ ಹಾಗೂ ಮಹಾಮಂಗಳಾರತಿ ನಂತರ ಗಣಾರಾಧನೆ ಹಾಗೂ ಅನ್ನಸಂತರ್ಪಣೆ ನಡೆಯಿತು, ಗದ್ದುಗೆಮಠದ ಮಡಿವಾಳೇಶ್ವರ ಶಿವಾಚಾರ್ಯರು, ಜಾಲಹಳ್ಳಿಮಠದ ರವಿಕಿರಣ ದೇವರು, ಚಬನೂರ ಹಿರೇಮಠದ ರಾಮಲಿಂಗಯ್ಯ ಮಹಾಸ್ವಾಮಿಗಳು ಸೇರಿದಂತೆ ಇತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.