Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಏ.೧೨ರಿಂದ ನಾಮಪತ್ರ ಸ್ವೀಕಾರ :ಡಿಸಿ ಟಿ.ಭೂಬಾಲನ್
(ರಾಜ್ಯ ) ಜಿಲ್ಲೆ

ಏ.೧೨ರಿಂದ ನಾಮಪತ್ರ ಸ್ವೀಕಾರ :ಡಿಸಿ ಟಿ.ಭೂಬಾಲನ್

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಲೋಕಸಭಾ ಸಾರ್ವತ್ರಿಕ ಚುನಾವಣೆ ೨೦೨೪ ರ ನಾಮಪತ್ರಗಳನ್ನು ಸ್ವೀಕರಿಸಲು ಏ.೧೨ ರಿಂದ ೧೯ ರವರೆಗೆ ಚುನಾವಣಾ ಆಯೋಗ ಅವಕಾಶ ಕಲ್ಪಿಸಿರುತ್ತದೆ ಎಂದು ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳು ಆದ ಟಿ.ಭೂಬಾಲನ್ ಹೇಳಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಚುನಾವಣೆ ಅಧಿಸೂಚನೆ ಕುರಿತು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ನಾಮಪತ್ರಗಳನ್ನು ಸರಕಾರಿ ರಜಾ ದಿನಗಳನ್ನು ಹೊರತುಪಡಿಸಿ ಬೆಳಗ್ಗೆ ೧೧ಗಂಟೆಯಿಂದ ಮಧ್ಯಾಹ್ನ ೩ರವರೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸ್ಥಾಪಿಸಲಾದ ಚುನಾವಣಾಧಿಕಾರಿಗಳ ಕಾರ್ಯಾಲಯದಲ್ಲಿ ಸ್ವೀಕರಿಸಲಾಗುವುದು ಎಂದು ತಿಳಿಸಿದರು.
ನಾಮಪತ್ರ ಸಲ್ಲಿಸಲು ಏ.೧೯ ಕೊನೆಯ ದಿನವಾಗಿರುತ್ತದೆ. ೨೦ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ನಾಮಪತ್ರ ಹಿಂಪಡೆಯಲು ಏ.೨೨ರವರೆಗೆ ಕಾಲಾವಕಾಶವಿರುತ್ತದೆ. ಮೇ ೭ ರಂದು ಮತದಾನ ನಡೆಯಲಿದ್ದು, ಜು ೪ ರಂದು ಮತ ಎಣಿಕೆ ನಡೆಯಲಿದೆ. ಜು.೬ರಂದು ನೀತಿ ಸಂಹಿತೆ ಮುಕ್ತಾಯಗೊಳ್ಳಲಿದೆ ಎಂದು ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ಏ.೧೦ ರ ಅಂತ್ಯಕ್ಕೆ ೧೯,೪೩,೫೬೬ ಮತದಾರರಿದ್ದು ೯,೮೬,೭೭೮ ಪುರುಷ ಹಾಗೂ ೯,೫೬,೫೭೮ ಮಹಿಳಾ ಮತ್ತು ೨೧೦ ಇತರೆ ಮತದಾರರಿದ್ದಾರೆ. ಈ ಪೈಕಿ ೪೩,೪೬೮ ಯುವ ಮತದಾರರು, ೨೧,೭೬೪ ವೀಕಲಚೇತನ, ೧,೮೭೪ ಸೇವಾ ಮತದಾರರು ಇದ್ದಾರೆ ಎಂದರು. .
ಸುಗಮ, ಪಾರದರ್ಶಕ ಹಾಗೂ ನ್ಯಾಯ ಸಮ್ಮತ ಚುನಾವಣಾ ಜರಗಿಸುವ ದೃಷ್ಟಿಯಿಂದ ವಿಧಾನಸಭಾ ಮತಕ್ಷೇತ್ರವಾರು ಒಟ್ಟು ೧೬೭ ಸೆಕ್ಟರ್ ಅಧಿಕಾರಿಗಳು, ೭೨ ಪ್ಲಾಯಿಂಡ್ ಸ್ಕ್ವಾಡ್, ೮೭ ಸ್ಟೆಟಿಕ್ ಸರ್ವಲೈನಸ್ ಟೀಮ್, ೨೪ ವಿಡೀಯೋ ಸರ್ವಲೈನಸ್ ಟೀಮ್, ೮ ವಿಡೀಯೋ ವಿವ್ಹಿಂಗ್ ಟೀಮ್, ೮ ಅಕೌಂಟಿಂಗ್ ಟೀಮ್ ರಚನೆ ಮಾಡಲಾಗಿದೆ ಎಂದು ಹೇಳಿದರು.
ದೂರು ನಿರ್ವಹಣೆಯಲ್ಲಿ ಪ್ರಥಮ ಸ್ಥಾನ:
ಜಿಲ್ಲೆಯಲ್ಲಿ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಾದ ದಿನದಿಂದ ಇಲ್ಲಿಯವರೆಗೆ ಸಿವಿಜಿಲ್ ತಂತ್ರಾAಶದಲ್ಲಿ ೩,೯೨೯ ದೂರುಗಳು ದಾಖಲಾಗಿದ್ದು, ಬಂದಂತಹ ದೂರುಗಳನ್ನು ಸಮರ್ಪಕವಾಗಿ ಬಗೆಹರಿಸಲಾಗಿರುತ್ತದೆ, ರಾಜ್ಯದಲ್ಲಿ ವಿಜಯಪುರ ಜಿಲ್ಲೆ ದೂರುಗಳ ನಿವಾರಣೆ ಮಾಡುವಲ್ಲಿ ಪ್ರಥಮ ಸ್ಥಾನ ಪಡೆದಿದೆ ಎಂದು ತಿಳಿಸಿದರು.
ಚುನಾವಣೆಯಲ್ಲಿ ಅಕ್ರಮ ನಡೆಯದಂತೆ ಮುಂಜಾಗೃತವಾಗಿ ಜಿಲ್ಲೆಯಲ್ಲಿ ಸ್ಥಾಪಿಸಲಾದ ಚೆಕ್‌ಪೋಸ್ಟಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಸಲಾಗಿದ್ದು, ಇಲ್ಲಿಯವರೆಗೆ ೩ ಕೋಟಿ ೨೪ ಲಕ್ಷ ದಾಖಲೆ ಇಲ್ಲದ ಹಣವನ್ನು ವಶಕ್ಕೆ ಪಡೆಯಲಾಗಿದೆ. ೩,೭೦೭ ಲೀಟರ್ ಮದ್ಯ, ೬೨೪ ಗ್ರಾಂ ಡ್ರಗ್ಸ್ನ್ನು ವಶಕ್ಕೆ ಪಡೆಯಲಾಗಿದೆ. ಹಣ ಸೇರಿದಂತೆ ವಶಪಡಿಸಿಕೊಳ್ಳಲಾದ ಮಧ್ಯ, ಡ್ರಗ್ಸ್ನ ನ ಒಟ್ಟು ಮೌಲ್ಯ ೩ ಕೋಟಿ ೩೯ ಲಕ್ಷವಾಗುತ್ತದೆ ಎಂದು ಮಾಹಿತಿ ನೀಡಿದರು.
ಮುಕ್ತ, ಶಾಂತಿಯುತ ಹಾಗೂ ಸಮರ್ಪಕವಾಗಿ ಚುನಾವಣೆ ನಡೆಸಲು ಮತಗಟ್ಟೆ ಅಧಿಕಾರಿಗಳು ಹಾಗೂ ಸಹಾಯಕ ಮತಗಟ್ಟೆ ಅಧಿಕಾರಿಗಳಿಗೆ ಈಗಾಗಲೇ ಮೊದಲನೇ ಹಂತದ ತರಬೇತಿಯನ್ನು ನೀಡಲಾಗಿದೆ. ಬರುವ ದಿನಗಳಲ್ಲಿ ಎರಡನೇ ಹಂತದ ತರಬೇತಿ ಕಾರ್ಯಕ್ರಮವನ್ನು ನಡೆಸಲಾಗುವುದು. ಈಗಾಗಲೇ ಚುನಾವಣೆ ವೀಕ್ಷಕರು ನೀಯೋಜನೆಗೊಂಡಿರುತ್ತಾರೆ. ಜಿಲ್ಲೆಯಲ್ಲಿ ಪರವಾನಿಗೆ ಪಡೆದ ಶಸ್ತ್ರಾಸ್ತ್ರಗಳನ್ನು ಠೇವಣಿ ಇರಿಸಲಾಗಿರುತ್ತದೆ. ಜಿಲ್ಲೆಯಲ್ಲಿ ಪರವಾನಿಗೆ ಹೊಂದಿರುವ ೨,೯೦೦ ಶಸ್ತಾçಸ್ತçಗಳಿದ್ದು, ಈ ಪೈಕಿ ಕೇವಲ ೪೫ ಶಸ್ತ್ರಾಸ್ತ್ರಗಳಿಗೆ ಜೀವಬೆದರಿಕೆ ಇರುವ ವ್ಯಕ್ತಿ ಹಾಗೂ ಬ್ಯಾಂಕ್‌ನ ಭದ್ರತಾ ದೃಷ್ಟಿಯಿಂದ ವಿನಾಯತಿ ನೀಡಲಾಗಿದೆ, ಇನ್ನೂ ೭ ಅರ್ಜಿಗಳು ಪರಿಶೀಲನೆ ಹಂತದಲ್ಲಿವೆ ಎಂದು ಎಂದು ತಿಳಿಸಿದರು. ಅವಹೇಳನಕಾರಿ ಪ್ರಚೋದನೆ ಮತ್ತು ಧಾರ್ಮಿಕ ಸ್ಥಳಗಳಲ್ಲಿ ಚುನಾವಣೆ ಪ್ರಚಾರ ಮಾಡಿದ ಹಿನ್ನಲೆಯಲ್ಲಿ ಗಾಂಧಿ ಚೌಕ್ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿವೆ ಎಂದು ಮಾಹಿತಿ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.