Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹನುಮಪ್ಪನಾಯಕನ ಜಯಂತಿ ಆಚರಿಸಲು ಸರ್ಕಾರಕ್ಕೆ ಆಗ್ರಹ
(ರಾಜ್ಯ ) ಜಿಲ್ಲೆ

ಹನುಮಪ್ಪನಾಯಕನ ಜಯಂತಿ ಆಚರಿಸಲು ಸರ್ಕಾರಕ್ಕೆ ಆಗ್ರಹ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ: ಇಂದಿನ ಜನಾಂಗಕ್ಕೆ ಹಂಡೆ ಅರಸರ ಇತಿಹಾಸವನ್ನು ತಿಳಿಸುವ ಉದ್ದೇಶದಿಂದ ಹಂಡೆ ಅರಸರ ಕುಲತಿಲಕ, ಬಳ್ಳಾರಿಯ ನವನಿರ್ಮಾಪಕ ಹಂಡೆ ಅರಸ ಹನುಮಪ್ಪನಾಯಕ ಜಯಂತ್ಯೋತ್ಸವವನ್ನು ಪ್ರತಿವರ್ಷ ಏ.೯ ರಂದು ರಾಜ್ಯ ಸರ್ಕಾರದಿಂದ ಆಚರಿಸುವಂತೆ ಆಗಬೇಕೆಂದು ಅಖಿಲ ಕರ್ನಾಟಕ ವೀರಶೈವರ ಲಿಂಗಾಯತ ಹಂಡೆವಜೀರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಡಾ.ಎಸ್.ಎಸ್.ಪಾಟೀಲ ಹೇಳಿದರು.
ತಾಲೂಕಿನ ವಡವಡಗಿ ಗ್ರಾಮದ ನಂದಿಮಠದ ಆವರಣದಲ್ಲಿ ಅಖಿಲ ಕರ್ನಾಟಕ ವೀರಶೈವರ ಲಿಂಗಾಯತ ಹಂಡೆವಜೀರ ಕ್ಷೇಮಾಭಿವೃದ್ಧಿ ಸಂಘ, ಕಲಬುರಗಿಯ ಚಾಲುಕ್ಯ ಸಂಸ್ಕ್ರತಿ ಅಧ್ಯಯನ ಪೀಠ, ಸಂಘದ ಜಿಲ್ಲಾ, ತಾಲೂಕು, ಗ್ರಾಮ ಘಟಕದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಹಂಡೆ ಅರಸ ಹನುಮಪ್ಪನಾಯಕನ ಜಯಂತ್ಯೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈಗಾಗಲೇ ಕಲಬುರಗಿಯ ಚಾಲುಕ್ಯ ಸಂಸ್ಕ್ರತಿ ಅಧ್ಯಯನ ಪೀಠವು ಹಂಡೆ ಪಾಳೆಗಾರರ ಇತಿಹಾಸ ಪರಂಪರೆ ಸೇರಿದಂತೆ ಹಂಡೆ ಅರಸರ ಇತಿಹಾಸದ ಮೇಲೆ ಸಾಕಷ್ಟು ಕೃತಿಗಳನ್ನು ಹೊರತರುವ ಮೂಲಕ ಹಂಡೆ ಅರಸರ ಇತಿಹಾಸವನ್ನು ದಾಖಲೀಕರಣ ಮಾಡಿದೆ. ತಾಲೂಕಿನ ಮುತ್ತಗಿ ಗ್ರಾಮದಲ್ಲಿ ಜನಿಸಿದ ಹನುಮಪ್ಪನಾಯಕನು ಬಳ್ಳಾರಿ ಸೇರಿ ಇತರೆಡೆ ಕೋಟೆ, ಕೊತ್ತಲಗಳನ್ನು ಕಟ್ಟಿದ ಇತಿಹಾಸವಿದೆ. ಇಂತಹ ಧೀಮಂತ ಇತಿಹಾಸಪುರುಷನ ಇತಿಹಾಸ ಎಲ್ಲೆಡೆ ಪಸರಿಸುವಂತಾಗಬೇಕಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮುಂದಿನ ದಿನಗಳಲ್ಲಿ ಹಂಡೆ ಹನುಮಪ್ಪನಾಯಕನ ಜಯಂತಿಯನ್ನು ಆಚರಿಸಲು ಮುಂದಾಗಬೇಕೆಂದರು.
ಚಾಲುಕ್ಯ ಸಂಸ್ಕ್ರತಿ ಅಧ್ಯಯನ ಪೀಠದ ಅಧ್ಯಕ್ಷ ಜಿ.ಎನ್.ಪಾಟೀಲ ಮಾತನಾಡಿ, ಸಮಾಜಮುಖಿ, ಶಿಕ್ಷಣಮುಖಿ ಕೆಲಸ ಮಾಡಿದ ಹಂಡೆವಜೀರ ಸಮಾಜ ಬಾಂಧವರ ಸಾಮಾಜಿಕ ಕಾರ್ಯಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವ ಉದ್ದೇಶ ಹೊಂದಿದೆ. ಈಗಾಗಲೇ ಸಮಾಜದ ಇತಿಹಾಸವನ್ನು ದಾಖಲು ಮಾಡಲಾಗುತ್ತಿದೆ. ಮೊದಲ ಬಾರಿಗೆ ಬಸವನಬಾಗೇವಾಡಿಯಲ್ಲಿ ನಮ್ಮ ಸಮಾಜದ ರಾಜ್ಯಮಟ್ಟದ ಸಮಾವೇಶವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ನಮ್ಮ ಸಮಾಜದ ಇತಿಹಾಸದ ಸಂಶೋಧನೆ ಮಾಡಬೇಕೆಂಬ ಕ್ಷೇತ್ರಕಾರ್ಯ ಆರಂಭವಾಯಿತು. ಈಗಾಗಲೇ ನಮ್ಮ ಸಮಾಜದ ಕುರಿತು ಮೂರು ಪಿಎಚ್ಡಿ ಪ್ರಬಂಧಗಳು ಹೊರಬರುವ ಅನೇಕ ಕೃತಿಗಳು ಹೊರಬಂದಿವೆ. ಇತಿಹಾಸ ಅರಿತುಕೊಂಡು ಸಮಾಜದ ಅಭಿವೃದ್ಧಿಗೆ ಶ್ರಮಿಸಬೇಕೆಂದರು.
ರಾಜ್ಯ ಸಂಘದ ಉಪಾಧ್ಯಕ್ಷ ಎಸ್.ಜಿ.ಪಾಟೀಲ ಮಾತನಾಡಿ, ನಮ್ಮ ಸಂಘದಿಂದ ೧೦ ವರ್ಷಕೊಮ್ಮೆ ಸಮ್ಮೇಳನವನ್ನು ಆಯೋಜನೆ ಮಾಡಲಾಗುತ್ತಿದೆ. ಈ ಸಲ ಬರುವ ನವೆಂಬರ್ ತಿಂಗಳಲ್ಲಿ ಮುದ್ದೇಬಿಹಾಳದಲ್ಲಿ ಆಯೋಜನೆ ಮಾಡಲಾಗುತ್ತಿದೆ. ನಮ್ಮ ಸಮಾಜದ ಎಲ್ಲ ಕಾರ್ಯಗಳಿಗೆ ಅನೇಕರು ಸಹಕಾರ ನೀಡಿದ್ದಾರೆ ಎಂದರು.
ನೆಲ್ಲೂರಿನ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಡಿ.ಎನ್.ಪಾಟೀಲ ಮಾತನಾಡಿದರು.
ಶಿಕ್ಷಕ ವೈ.ಎಸ್.ಗಂಗಶೆಟ್ಟಿ ಹಂಡೆಹನುಮಪ್ಪನಾಯಕ ಕುರಿತು ಮಾತನಾಡಿದರು.
ಸಾನಿಧ್ಯ ವಹಿಸಿದ್ದ ವೀರಸಿದ್ದ ಸ್ವಾಮೀಜಿ, ನಿವೃತ್ತ ಪ್ರಾಂಶುಪಾಲ ಎಸ್.ಬಿ.ಬಿರಾದಾರ, ಬಸವರಾಜ ಡೆಂಗಿ ಮಾತನಾಡಿದರು.
ಸಾನಿಧ್ಯವನ್ನು ಬೃಂಗೀಶ್ವರಲಿಂಗ ಶಿವಾಚಾರ್ಯ ಸ್ವಾಮೀಜಿ, ನಾಗಭೂಷಣ ಶಾಸ್ತ್ರೀಜಿ ವಹಿಸಿದ್ದರು.
ವೇದಿಕೆಯಲ್ಲಿ ರಾಜಶೇಖರ ಮ್ಯಾಗೇರಿ, ಬಾಪುಗೌಡ ಬ್ಯಾಕೋಡ, ಪ್ರೇಮಕುಮಾರ ಮ್ಯಾಗೇರಿ, ಅವ್ವಣ್ಣಗೌಡ ಗ್ವಾತಗಿ, ಶಂಕರಗೌಡ ರಾಯಗೊಂಡ, ಸಂಗಮೇಶ ಕರಭಂಟನಾಳ, ಸಂಗನಗೌಡ ಯಂಕಂಚಿ, ಪ್ರಭುಗೌಡ ಬೆಳ್ಳಿ, ಎಂ.ಬಿ.ಪಾಟೀಲ, ನಾಗರಾಜ ತಂಗಡಗಿ, ಎಸ್.ಎಸ್.ಪಾಟೀಲ, ಹನಮಂತರಾಯಗೌಡ ಪಾಟೀಲ, ಲಲಿತಾ ಬಿರಾದಾರ, ಪೂರ್ಣಿಮಾ ಹೆಬ್ಬಾಳ, ಶಿವಣ್ಣ ಬ್ಯಾಕೋಡ, ಮಲ್ಲಿಕಾರ್ಜುನ ಹಡಪದ, ಶರಣು ಬಡಿಗೇರ, ಬಾಬು ಬಗಲಿ, ರಮೇಶ ಕಟಗೂರ,ಸಿದ್ದನಗೌಡ ಪಾಟೀಲ, ಎಸ್.ಎಸ್.ಅವರಾದಿ, ಮಡಿವಾಳಪ್ಪಗೌಡ ಬಿರಾದಾರ ಇತರರು ಇದ್ದರು. ಸಂಗಮೇಶ ಶಿವಣಗಿ ಪ್ರಾರ್ಥಿಸಿದರು. ಆರ್.ಎಸ್.ಪಾಟೀಲ ಸ್ವಾಗತಿಸಿದರು. ದೇವೇಂದ್ರ ಗೋನಾಳ ನಿರೂಪಿಸಿದರು. ಪ್ರಭಾಕರ ಖೇಡದ ವಂದಿಸಿದರು.
ಕಾರ್ಯಕ್ರಮಕ್ಕೂ ಮುನ್ನ ಗ್ರಾಮದ ಪ್ರಮುಖ ಬೀದಿಗಳಲ್ಲಿ ಹಂಡೆಹನುಮಪ್ಪನಾಯಕ ಭಾವಚಿತ್ರದ ಮೆರವಣಿಗೆ ಕುಂಭಮೇಳ, ವಿವಿಧ ವಾದ್ಯಮೇಳದೊಂದಿಗೆ ಜರುಗಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.