Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜಾನಪದ ಕಲಾವಿದರು ಸಾಂಸ್ಕೃತಿಕ ರಾಯಭಾರಿಗಳು
(ರಾಜ್ಯ ) ಜಿಲ್ಲೆ

ಜಾನಪದ ಕಲಾವಿದರು ಸಾಂಸ್ಕೃತಿಕ ರಾಯಭಾರಿಗಳು

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಜಾನಪದ ಸಂಭ್ರಮ | ಕಜಾಪ ವಡವಡಗಿ ವಲಯ ಘಟಕ ಉದ್ಘಾಟನೆ | ಗೋನಾಳ ಅಭಿಮತ

ಬಸವನಬಾಗೇವಾಡಿ: ಜಾನಪದ ಸಂಸ್ಕೃತಿಯು ಆಚಾರ-ವಿಚಾರ, ನೀತಿ-ನಿಯಮ, ನಂಬಿಕೆ – ಸಂಪ್ರದಾಯ, ಮಾತು -ಹರಟೆ, ಮತ್ತು ಆಚರಣೆಗಳ ಮೂಲಕ ಮೌಖಿಕ ಪರಂಪರೆಯ ಮೂಲಕ ಜನರ ಒಳಿತಿಗಾಗಿ ಉಳಿದುಕೊಂಡಿವೆ. ಸಾರ್ವತ್ರಿಕ ಮೌಲ್ಯಗಳನ್ನು ಪ್ರತಿಪಾದಿಸುತ್ತ ಇಡಿ ಜಗತ್ತಿಗೆ ಮಾದರಿಯಾಗಿವೆ ಎಂದು ಕನ್ನಡ ಜಾನಪದ ಪರಿಷತ್ ಮುದ್ದೇಬಿಹಾಳ ತಾಲೂಕಾಧ್ಯಕ್ಷ ಎ ಆರ್ ಮುಲ್ಲಾ ಹೇಳಿದರು.
ಬಸವನಬಾಗೇವಾಡಿ ತಾಲೂಕಿನ ಜಾಯವಾಡಗಿಯಲ್ಲಿ ಕನ್ನಡ ಜಾನಪದ ಪರಿಷತ್ ಜಿಲ್ಲಾ ಘಟಕ ವಿಜಯಪುರ ಮತ್ತು ತಾಲೂಕು ಘಟಕ ಬಸವನಬಾಗೇವಾಡಿ ಹಾಗೂ ಸೋಮನಾಥ ವ ಶಿವಪ್ಪ ಮುತ್ಯಾನ ಜಾತ್ರಾ ಸಮಿತಿ ಸಹಯೋಗದಲ್ಲಿ “ಜಾನಪದ ಸಂಭ್ರಮ” ಹಾಗೂ ” ಕ ಜಾ ಪ ವಡವಡಗಿ ವಲಯ ಘಟಕ” ಉದ್ಘಾಟಿಸಿ ಮಾತನಾಡಿದ ಅವರು ರಾಜ್ಯದಲ್ಲಿ ಡಾ ಎಸ್ ಬಾಲಾಜಿ ಮತ್ತು ಜಿಲ್ಲೆಯಲ್ಲಿ ಬಾಳನಗೌಡ ಪಾಟೀಲರ ನೇತೃತ್ವದಲ್ಲಿ ಜಾನಪದ ಸಂಸ್ಕೃತಿ ಉಳಿಸಿ ಬೆಳೆಸುವ ಕಾರ್ಯ ಭರದಿಂದ ಸಾಗುತ್ತಿದೆ. ಸಂಘ ಸಂಸ್ಥೆಗಳು ಸಹಕಾರ ನೀಡಬೇಕೆಂದು ಮನವಿ ಮಾಡಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಬಸವನಬಾಗೇವಾಡಿ ತಾಲೂಕು ಕ ಜಾ ಪ ಅಧ್ಯಕ್ಷ ದೇವೇಂದ್ರ ಗೋನಾಳ, ಜಾನಪದ ಕಲಾವಿದರು ಈ ದೇಶದ ಸನಾತನ ಸಂಸ್ಕೃತಿಯನ್ನು ಒಂದು ತಲೆಮಾರಿನಿಂದ ಇನ್ನೊಂದು ತಲೆಮಾರಿಗೆ ಸಾಗಿಸುತ್ತಾ, ಸಾಂಸ್ಕೃತಿಕ ರಾಯಭಾರಿಗಳಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕಲಾವಿದರಿಗೆ ಸರಕಾರ ಸಹಾಯ,ಸವಲತ್ತು ಮತ್ತು ಗೌರವ ನೀಡಬೇಕೆಂದು ಹೇಳಿದರು.
ನಿಡಗುಂದಿ ತಾಲೂಕು ಕ ಜಾ ಪ ಅಧ್ಯಕ್ಷ ವೈ ಎಸ್ ಗಂಗಶೆಟ್ಟಿ ವಲಯ ಘಟಕದ ನೂತನ ಪದಾಧಿಕಾರಿಗಳಿಗೆ ಪದಪತ್ರ ನೀಡಿ ಜಾನಪದ ಸಂಸ್ಕೃತಿ ಜೀವಂತವಾಗಿಡಲು ಹಳ್ಳಿಗಳು ಕಾರಣಿಭೂತವಾಗಿವೆ.ಅದಕ್ಕಾಗಿ ಕ ಜಾ ಪ ವಲಯ ಘಟಕ ಸ್ಥಾಪನೆ ಮಾಡುತ್ತಿದ್ದೇವೆ. ಈ ಮೂಲಕ ಜಾನಪದ ಉಳಿಸಿ ಬೆಳೆಸಲು ಸಹಕಾರಿಯಾಗುತ್ತಿದೆ ಎಂದರು.
ಕನ್ನಡ ಜಾನಪದ ಪರಿಷತ್ ಜಿಲ್ಲಾ ಸಂಚಾಲಕ ಪ್ರೊ ಗುರುರಾಜ ಹಳ್ಳೂರ ಪ್ರಾಸ್ತಾವಿಕವಾಗಿ ಮಾತನಾಡಿ ಪರಿಷತ್ತಿನ ಕಾರ್ಯ ಚಟುವಟಿಕೆ ತಿಳಿಸಿದರು. ಹಿರೇಮುರಾಳ ವಲಯ ಅಧ್ಯಕ್ಷ ಗಿರೀಶಗೌಡ ಪಾಟೀಲ ಮತ್ತು ಜಾನಪದ ಚಿಂತಕ ಕಾಶಿನಾಥ ಅಗಸಬಾಳ ಮಾತನಾಡಿದರು.
ವೇದಿಕೆಯಲ್ಲಿ ಜಾತ್ರಾ ಸಮಿತಿಯ ಬಸನಗೌಡ ಪಾಟೀಲ, ಶರಣಗೌಡ ನರಸಲಗಿ, ಪರಸಪ್ಪ ಪೂಜಾರಿ,ಶರಣಗೌಡ ಪಾಟೀಲ, ಮುದಕನಗೌಡ ಕಾಶಿನಕುಂಟಿ ಮತ್ತಿತರರು ಉಪಸ್ಥಿತರಿದ್ದರು. ವಲಯ ಘಟಕದ ನೂತನ ಪದಾಧಿಕಾರಿಗಳಿಗೆ ಸನ್ಮಾನಿಸಿ ಪರಿಷತ್ತಿನ ಪದಪತ್ರ ನೀಡಲಾಯಿತು.
ವಲಯ ಘಟಕದ ನೂತನ ಅಧ್ಯಕ್ಷ ಮಹಾಂತಗೌಡ ಗೌಡರ ಸ್ವಾಗತಿಸಿದರು.ಪ್ರಭುಸ್ವಾಮಿ ಹಿರೇಮಠ ನಿರೂಪಿಸಿ ವಂದಿಸಿದರು.
ಕಾರ್ಯಕ್ರಮದಲ್ಲಿ ಭಜನಾಪದ, ಡೊಳ್ಳಿನಪದ, ಸಂಪ್ರದಾಯ ಪದ, ಗೀಗೀಪದ ಪ್ರದರ್ಶನ ನಡೆಯಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.