ವಿಜಯಪುರ: ಜಿಲ್ಲೆಯ ಇಂಡಿ ತಾಲೂಕಿನ ಚಿಕ್ಕ ಗ್ರಾಮ ಚವಡಿಹಾಳ ಗ್ರಾಮದಲ್ಲಿರುವ ಶ್ರೀ ಭಾಗ್ಯವಂತಿ ವಿದ್ಯಾವರ್ಧಕ ಸಂಘದ ಶ್ರೀ ಭಾಗ್ಯವಂತಿ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಪದವಿ ಪೂರ್ವ ಕಾಲೇಜಿನ ವ್ಯಾಸಂಗಮಾಡಿದ ಬಡವ
ಮತ್ತು ರೈತರ ಮಕ್ಕಳಾದ ಬಾಲಕಿಯರು ಕಲಾ, ವಿಜ್ಞಾನ & ವಾಣಿಜ್ಯ ವಿಭಾಗದಲ್ಲಿ ೯೯%, ೯೮%, ಮತ್ತು ೯೬% ಅಂಕಗಳನ್ನು ಪಡೆದು ತಾಲೂಕಾ ಮಟ್ಟದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತಿರ್ಣರಾಗಿ ಜಿಲ್ಲೆಯ ಶೈಕ್ಷಣಿಕ
ಸಾಧನೆಗೆ ಗರಿ ಮೂಡಿಸಿದ್ದಾರೆ.
ಇಂಡಿ ತಾಲೂಕಿನ ಗಡಿಭಾಗದಹಳ್ಳಿ ಚವಡಿಹಾಳ ಒಂದ ಚಿಕ್ಕ ಗ್ರಾಮ. ರೈತರು, ಬಡವರ ಮದ್ಯಮ ವರ್ಗದ
ಮತ್ತು ಹಿಂದುಳಿದ ಶ್ರಮಜೀವಿಗಳು ಹೆಚ್ಚಿನ ಸಂಖ್ಯೆಯಲ್ಲಿ ವಾಸವಾಗಿರುವ ಜನಸಮುದಾಯದ ಈ ಹಳ್ಳಿಯಲ್ಲಿ
ಹಿಂದುಳಿದ ವರ್ಗದ ಆಡಳಿತದಲ್ಲಿ ನಡೆಯುತ್ತಿರುವ ಶಿಕ್ಷಣ ಸಂಸ್ಥೆ ಶ್ರೀ ಭಾಗ್ಯವಂತಿ ವಿದ್ಯಾವರ್ಧಕ ಸಂಘ. ಇದು ಅಪ್ಪಟ ಗ್ರಾಮಿಣ ಪ್ರದೇಶವಾಗಿದ್ದು ಭಿಮಾತೀರದ ಸೆರಗಿನಲ್ಲಿದ್ದ ಈ ಗ್ರಾಮದ ಶಾಂತಪ್ಪ. ಪಂಚಪ್ಪ ದಶವಂತ ಎಂಬುವರು
ಈ ಭಾಗದ ಬಡಮಕ್ಕಳಿಗೆ ಶಿಕ್ಷಣ ದೊರೆತರೆ, ಬಡವ ಬದುಕು ಹಸನಾಗುವುದೆಂಬ ಯೋಚನೆಯಿಂದ ೧೯೯೧ರಲ್ಲಿ
ಪ್ರಾಥಮಿಕ ಶಾಲೆಯಿಂದ ಶಿಕ್ಷಣ ಸಂಸ್ಥೆಯನ್ನು ಪ್ರಾರಂಭಿಸಿ, ೨೦೨೧ರಲ್ಲಿ ಪದವಿ ಪೂರ್ವ ಶಿಕ್ಷಣವನ್ನು ಪ್ರಾರಂಭಿಸಿದ ಮೊದಲ ಹಂತದಲ್ಲಿಯೇ ಈ ಕಾಲೇಜಿನ ವಿದ್ಯಾರ್ಥಿನಿಯರು ಕಲಾ, ವಿಜ್ಞಾನ ಮತ್ತು ವಾಣಿಜ್ಯ
ವಿಭಾಗದಲ್ಲಿ ಜಿಲ್ಲೆಯ ಶೈಕ್ಷಣಿಕ ಕ್ಷೇತ್ರಕ್ಕೆ ಗ್ರಾಮಿಣ ಭಾಗದ ದೊಡ್ಡ ಸಾಧನೆಯ ಕೊಡುಗೆಯನ್ನು
ನೀಡಿದ್ದಾರೆ.
ಕಾಲೇಜು ಪ್ರಾರಂಭವಾದ ಮೊದಲ ವರ್ಷದಲ್ಲಿಯೇ ಕಲಾ ವಿಭಾಗದ ವಿದ್ಯಾರ್ಥಿನಿ ಗೌರಮ್ಮ ಕುಂಬಾರ
೯೯%(೫೮೭) ಅಂಕಗಳನ್ನು, ವಿಜ್ಞಾನ ವಿಭಾಗದಲ್ಲಿ ಕುಮಾರಿ ವಿದ್ಯಾಶ್ರೀ ಗಣಾಚಾರಿ ೯೮%(೫೮೭) ಅಂಕಗಳನ್ನು
ಮತ್ತು ವಾಣಿಜ್ಯ ವಿಭಾಗದಲ್ಲಿ ಕುಮಾರಿ ವಿದ್ಯಾವತಿ ಬಿರಾದಾರ ೯೬%(೫೭೪) ಅಂಕಗಳನ್ನು ಪಡೆದು ಪ್ರಥಮ ಸ್ಥಾನ ಪಡೆಯುವದರೊಂದಿಗೆ ವಿಜ್ಞಾನ ವಿಭಾಗದಲ್ಲಿ ೫೮ ಡಿಸ್ಟಿಂಕಷನ್, ೦೪ ಪ್ರಥಮಶ್ರೇಣಿ, ಕಲಾ ವಿಭಾಗದಲ್ಲಿ ೧೬ ಡಿಸ್ಟಿಂಕಷನ್ ಮತ್ತು ೫ ಪ್ರಥಮಶ್ರೇಣಿ ಮತ್ತು ವಾಣಿಜ್ಯ ವಿಭಾಗದಲ್ಲಿ ೮ ಡಿಸ್ಟಿಂಕಷನ್ ಮತ್ತು ೦೪ ಪ್ರಥಮಶ್ರೇಣಿಯ
ಫಲಿತಾಂಶವನ್ನು ನೀಡಿ ಕಾಲೇಜಿನ ಒಟ್ಟು ಫಲಿತಾಂಶವನ್ನು ೧೦೦ಕ್ಕೆ ೧೦೦ರಷ್ಟು ದಾಖಲಿಸಿದ್ದು ಇದು ವಿಜಯಪುರ ಗ್ರಾಮಿಣ ಮಟ್ಟದ ಶ್ರೇಷ್ಠ ಸಾಧನೆಯಾಗಿದೆ. ವಿದ್ಯಾರ್ಥಿನಿಯರ ಈ ಸಾಧನೆಗೆ ಶಿಕ್ಷಣ ಇಲಾಖೆ ಮತ್ತು ಶಿಕ್ಷಣ ಸಂಸ್ಥೆಯ ಮುಖ್ಯಸ್ಥರು, ಶಿಕ್ಷಕರು ಹಾಗೂ ಗ್ರಾಮದ ಗುರು-ಹಿರಿಯರು ಈ ಮಕ್ಕಳ ಸಾದನೆಗೆ ಅವರನ್ನು ಸತ್ಕರಿಸಿ ಗೌರವ ಸಲ್ಲಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

