ಚಡಚಣ: ಪಟ್ಟಣದ ಸಮುದಾಯ ಅರೋಗ್ಯ ಕೇಂದ್ರದ ಮುಂಬದಲ್ಲಿರುವ ದೇವರ ದಾಸಿಮಯ್ಯ ವ್ರತ್ತದಲ್ಲಿ ದೇವರ ದಾಸಿಮಯ್ಯ ಜಯಂತಿ ಆಚರಿಸಲಾಯಿತು.
ಪರೋಪಕಾರವನ್ನೇ ಜೀವನವನ್ನಾಗಿಟ್ಟುಕೊಂಡು ಬದುಕುವ ಮಹಾನ್ ಆದರ್ಶ ಪುರುಷರಲ್ಲಿ ಜೇಡರ ದಾಸಿಮಯ್ಯ ಕೂಡ ಪ್ರಮುಖರಾಗಿದ್ದಾರೆ. ಮಹಿಳಾ ಸಮಾನತೆ, ಅಸ್ಮಿತೆಯ ಬಗ್ಗೆ ತನ್ನ ವಚನದ ಮೂಲಕವೇ ತಿಳಿಸಿದ ಶ್ರೇಷ್ಠ ವಚನಕಾರರಾಗಿದ್ದು, ಆತ್ಮಕ್ಕೆ ಯಾವುದೇ ಜಾತಿ, ಲಿಂಗ ಭೇದವಿಲ್ಲವೆಂದು ಅಂದಿನ ಕಾಲದಲ್ಲಿಯೇ ತಿಳಿಸಿದ ವಚನಕಾರ ಎಂದು ಕೆ ಟಿ ಏಳಗಿ ಅವರು ಹೇಳಿದರು.
ಪಟ್ಟಣದ ರಾಮಲಿಂಗ ಚೌಡೇಶ್ವರಿ ದೇವಸ್ಥಾನದಲ್ಲಿ ಸಾಹಿತಿ ಹಾಗೂ ಸಮುದಾಯದ ಅಧ್ಯಕ್ಷ ಬಸವರಾಜ ಯಂಕಂಚಿ ಮಾತನಾಡಿ, ಬಸವಣ್ಣ, ದೇವರದಾಸಿಮಯ್ಯ ಹೀಗೆ ಅನೇಕ ವಚನಕಾರರು ತಮ್ಮ ಕಾಲದಲ್ಲಿಯೇ ಮಹಿಳೆ ಮತ್ತು ಪುರುಷರಿಗೆ ಸಮಾನ ಹಕ್ಕು ನೀಡಿದರು. ವಚನಗಳ ಮೂಲಕ ಸಾಮಾಜಿಕ ಕ್ರಾಂತಿ ಮಾಡಿದರು. ದೇವರ ದಾಸಿಮಯ್ಯ ಅವರ ವಚನಗಳು ಮನುಷ್ಯನ ದಿಕ್ಕನ್ನೇ ಬದಲಿಸುತ್ತವೆ. ಜೀವನದ ಅನುಭವ ಅವರ ವಚನಗಳಲ್ಲಿವೆ. ಜಯಂತಿ ಆಚರಿಸುವ ಮೂಲಕ ಅವರ ಬದುಕಿನ ಅನೇಕ ಮಜಲುಗಳನ್ನು ನಾವೆಲ್ಲರು ಅಳವಡಿಸಿಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಗುರುಪಾದಪ್ಪಾ ಜೀರಂಕಲಗಿ, ಗಂಗಾಧರ ಭಂಡರಕವಟೆ, ರಾಜು ಕೋಟಿ, ಮಲ್ಲಪ್ಪ ಭಂಡರಕವಟೆ, ಮಲ್ಲು ಉಮರಾಣಿ, ದಯಾನಂದ ಭಂಡರಕವಟೆ, ಬಸವರಾಜ ಅಂಕದ, ಅಶೋಕ ಬಿರಾದಾರ, ಬಸವರಾಜ ಭಂಡರಕವಟೆ, ಸಂತೋಷ ದಟ್ಟಿ, ಬಸವರಾಜ ಉಮರಾಣಿ, ಮಲ್ಲಿಕಾರ್ಜುನ ಅರಳಿಕಟ್ಟಿ, ಸಿದ್ದು ಮಾಲಾಪುರ, ವಿಶ್ವನಾಥ ಡೊಣಗಾಂವ, ಸೇರಿದಂತೆ ಸಮುದಾಯದ ಮುಖಂಡರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

